Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ತಿರುವು ಪಡೆದ ಹೇಮಶ್ರೀ ಸಾವಿನ ಪ್ರಕರಣ
ಈ ಆರೋಪಗಳನ್ನು ಮಾಡುತ್ತಿರುವವರು ತೆಲುಗು ದೇಶಂ ಪಕ್ಷದ ಹಿರಿಯ ಮುಖಂಡ ವರ್ಲಾ ರಾಮಯ್ಯ. ಅವರು ವಿಜಯವಾಡದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಹೇಮಶ್ರೀ ಪತಿ ಸುರೇಂದ್ರ ಬಾಬು ಹಾಗೂ ನಗಪಾಲಿಕೆಯ ಮಾಜಿ ಸದಸ್ಯರಿಬ್ಬರು ಆಂಧ್ರ ಸಚಿವರೊಬ್ಬರನ್ನು ಬುಟ್ಟಿಗೆ ಹಾಕಿಕೊಳ್ಳಲು ಹೇಮಶ್ರೀಯನ್ನು ಬಳಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಪ್ರಕರಣವನ್ನು ಮುಚ್ಚಿ ಹಾಕಲು ಆಂಧ್ರ ಸರ್ಕಾರ ಯತ್ನಿಸುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಪೊಲೀಸರಿಗೆ ಗೊತ್ತಿದೆ. ಆದರೂ ಸರ್ಕಾರ ಕಣ್ಣು ಬಾಯಿ ಮುಚ್ಚಿಕೊಂಡು ಕುಳಿತಿದೆ. ನೈತಿಕ ಹೊಣೆ ಹೊತ್ತು ಗೃಹ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲಾ ಪ್ರಕರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಹೇಳಲಿ. ಅದು ಆಗದಿದ್ದರೆ ಸಬಿತಾ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ರಾಮಯ್ಯ ಆಗ್ರಹಿಸಿದ್ದಾರೆ. ಆದರೆ ಈ ಆರೋಪಗಳನ್ನು ಆಂಧ್ರ ಪೊಲೀಸರು ತಳ್ಳಿ ಹಾಕಿದ್ದಾರೆ.
ಹೇಮಶ್ರೀ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಮುಚ್ಚಿಹಾಕಲು ಯಾವುದೇ ರಾಜಕೀಯ ಒತ್ತಡ ಬರುತ್ತಿಲ್ಲ. ಆರೋಪಿಗಳನ್ನು ಬಂಧಿಸಲು ಕರ್ನಾಟಕ ಪೊಲೀಸರ ಜೊತೆ ಕೈಜೋಡಿಸುತ್ತಿದ್ದೇವೆ ಎಂದು ರಾಯಲಸೀಮಾ ಐಜಿ ಗೋವಿಂದ ಸಿಂಗ್ ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್)