Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿಕಿತ್ಸೆ ಫಲಕಾರಿಯಾಗದೆ ನಿರೂಪಕ ಚಂದನ್ ಪತ್ನಿ ಸಾವು
Recommended Video
ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದ ಅಚ್ಚ ಕನ್ನಡದ ನಿರೂಪಕ ಚಂದನ್ ಅವರ ಪತ್ನಿ ಮೀನಾ, ಚಂದನ್ ದೂರವಾದ ಬೇಸರದಲ್ಲಿ ಪುತ್ರ ತುಷಾರ್ ಕತ್ತು ಸೀಳಿ ಹತ್ಯೆಗೈದು, ತಾನು ಆಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೀನಾ ಅವರನ್ನು ಬೆಂಗಳೂರಿನ ವಿಕ್ಟೋರಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮೀನಾ ಅವರ ಪರಿಸ್ಥಿತಿ ಗಂಭೀರವಾಗಿತ್ತು. ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೀನಾ ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿ ಆಗದೆ ಕೊನೆ ಉಸಿರೆಳೆದಿದ್ದಾರೆ.
ನಿರೂಪಕ ಚಂದನ್ ದುರ್ಮರಣ: ಮಗನ ಕತ್ತು ಸೀಳಿ, ಆಸಿಡ್ ಸೇವಿಸಿದ ಪತ್ನಿ ಮೀನಾ
ಮೀನಾ ಹಾಗೂ ಅವರ ಪುತ್ರ ತುಷಾರ್ ಇಬ್ಬರ ಕಣ್ಣನ್ನು ಲಯನ್ಸ್ ಕ್ಲಬ್ ನೇತ್ರಾಲಯಕ್ಕೆ ಚಂದನ್ ಕುಟುಂಬಸ್ಥರು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬೆಳಗ್ಗೆ ಮಗುವಿನ ಕಣ್ಣು ದಾನ ಮಾಡಿ ರಾತ್ರಿ ಮೀನಾ ಅವರ ಕಣ್ಣನ್ನು ನೀಡಿದ್ದಾರೆ.
ಚಂದನ್ ಸಾವಿನ ವಿಚಾರ ತಿಳಿದು ಇಡೀ ರಾಜ್ಯದ ಜನರೇ ಬೇಸರ ವ್ಯಕ್ತ ಪಡಿಸಿದ್ದರು. ಆದರೆ ಈಗ ಚಂದನ್ ಕುಟುಂಬದ ಸಾವು ಜನರ ಮನಸ್ಸಿಗೆ ತುಂಬಾನೇ ನೋವು ಉಂಟು ಮಾಡಿದೆ.