Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ 'ಅಂದರ್ ಬಾಹರ್' ಚಿತ್ರಕ್ಕೆ ಕತ್ತರಿ ಪ್ರಯೋಗ
ಸ್ಯಾಂಡಲ್ ವುಡ್ ಕಿಂಗ್ ಶಿವರಾಜ್ ಕುಮಾರ್ ಅವರ 'ಅಂದರ್ ಬಾಹರ್' ಚಿತ್ರಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ. ಚಿತ್ರ ಎರಡು ಗಂಟೆ ನಲವತ್ತು ನಿಮಿಷಗಳಷ್ಟು ಸುದೀರ್ಘವಾಗಿರುವುದೇ ಇದಕ್ಕೆ ಕಾರಣ. ಹಾಗಾಗಿ ಹದಿನೆಂಟು ನಿಮಿಷಗಳಷ್ಟು ಮೊಟಕುಗೊಳಿಸಲಾಗಿದೆ ಎಂದಿದ್ದಾರೆ ನಿರ್ದೇಶಕರು.
ಈಗಾಗಲೆ ಹೊಸ ಆವೃತ್ತಿ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ನಿರ್ದೇಶಕ ಫಣೀಶ್ ಎಸ್ ರಾಮನಾಥಪುರ ಅವರು ಸಂಕಲನಕಾರ ಜೋ.ನಿ.ಹರ್ಷ ಅವರೊಂದಿಗೆ ಚರ್ಚಿಸಿ ಅನಗತ್ಯ ಎನ್ನಿಸುವ ಕೆಲವು ಸನ್ನಿವೇಶಗಳಿಗೆ ಕತ್ತರಿ ಹಾಕಿದ್ದಾರೆ. ಆದರೆ ಚಿತ್ರದ ಒಟ್ಟಾರೆ ಆಶಯಕ್ಕೆ ಎಲ್ಲೂ ಧಕೆಯಾಗಿಲ್ಲ ಎಂದಿದ್ದಾರೆ.
ಅಂದರ್ ಬಾಹರ್ ಚಿತ್ರದಲ್ಲಿ ಭೂಗತದ ನೆರಳಿದೆ. ಆದರೆ ಎಲ್ಲೂ ರಕ್ತಪಾತ ನಡೆಯಲ್ಲ. ಇದೇ ಸಬ್ಜೆಕ್ಟ್ ಮತ್ತಿನ್ಯಾರ ಕೈಗಾದರೂ ಸಿಕ್ಕಿದ್ದರೆ ಮತ್ತೊಂದು ಲಾಂಗು ಮಚ್ಚಿನ ಚಿತ್ರವಾಗುತ್ತಿತ್ತು. ಆದರೆ ನಿರ್ದೇಶಕ ಫಣೀಶ್ ಅವರು ಬಹಳ ಜಾಣ್ಮೆಯಿಂದ ಚಿತ್ರವನ್ನು ತೆರೆಗೆ ತಂದಿದ್ದಾರೆ. (ಅಂದರ್ ಬಾಹರ್ ಚಿತ್ರ ವಿಮರ್ಶೆ)
ಚಿತ್ರವನ್ನು ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ನಿರಾಸೆಯಾಗದಂತೆ, ಕಥೆಗೆ ಮೋಸ ಆಗದಂತೆ ತೆರೆಗೆ ತಂದಿದ್ದೇವೆ ಎನ್ನುತ್ತಾರೆ ನಿರ್ದೇಶಕ ಫಣೀಶ್. ಚಿತ್ರದ ನಾಯಕಿ ಪಾರ್ವತಿ ಮೆನನ್. ತಾರಾಬಳಗದಲ್ಲಿ ಶಶಿಕುಮಾರ್, ಶ್ರೀನಾಥ್, ಅರುಂಧತಿ ನಾಗ್, ಸೃಜನ್ ಲೋಕೇಶ್, ರಘು ರಾಮ್, ಜೋಶ್ವಾ ಮುಂತಾದವರಿದ್ದಾರೆ. (ಏಜೆನ್ಸೀಸ್)