Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ಸ್ಟಾರ್ಸ್ ಭೇಟಿಯಾದ ರಾಘವೇಂದ್ರ ರಾಜ್ ಕುಮಾರ್
ಸ್ಯಾಂಡಲ್ ವುಡ್ ನಟ ಮತ್ತು ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಸದ್ಯ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅಮ್ಮನ ಮನೆ ಸಿನಿಮಾದ ನಂತರ ಮತ್ತೆ ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ರಾಘಣ್ಣ ಸದ್ಯ 'ಪೊಗರು' ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
ಈ ನಡುವೆ ರಾಘಣ್ಣ ಬಾಲವುಡ್ ಸ್ಟಾರ್ಸ್ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಸ್ಯಾಂಡಲ್ ವುಡ್ ಜೊತೆಗೆ ಬಾಲಿವುಡ್ ಗೂ ಹಾರಿದ್ರ ಅಣ್ಣಾವ್ರ ಮಗ ಎನ್ನುವ ಅನುಮಾನ ಅಭಿಮಾನಿಗಳನ್ನು ಕಾಡುತ್ತಿದೆ. ರಾಘಣ್ಣನ ಬಾಲಿವುಡ್ ಸಿನಿಮಾ ಬಗ್ಗೆ ಚರ್ಚೆಯಾಗಲು ಕಾರಣವಾಗಿದ್ದು, ಇತ್ತೀಚಿಗೆ ರಾಘವೇಂದ್ರ ರಾಜ್ ಕುಮಾರ್ ಬಾಲಿವುಡ್ ಸ್ಟಾರ್ಸ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಘಣ್ಣ ಭೇಟಿ ಮಾಡಿದ ಉಪೇಂದ್ರ: ನೆನಪಾಗ್ತಿದೆ 'ಸ್ವಸ್ತಿಕ್'
ಹೌದು, ರಾಘಣ್ಣ ಮೊನ್ನೆ ಮೊನ್ನೆಯಷ್ಟೆ ಬಾಲಿವುಡ್ ಸ್ಟಾರ್ ನಟರಾದ ಅನಿಲ್ ಕಪೂರ್ ಮತ್ತು ಜಾನ್ ಅಬ್ರಾಹಂ ಭೇಟಿಯಾಗಿದ್ದಾರೆ. ಇಬ್ಬರು ನಟರನ್ನು ಭೇಟಿಯಾದ ಅಪರೂಪದ ಕ್ಷಣ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಫೋಟೋಗಳೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಅಷ್ಟಕು ರಾಘಣ್ಣ ಈ ನಟರನ್ನು ಭೇಟಿಯಾಗಿದ್ದು ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ. ಧ್ರುವ ಸರ್ಜಾ ನಾಯಕನಾಗಿ ಮಿಂಚುತ್ತಿರುವ ಪೊಗರು ಚಿತ್ರದಲ್ಲಿ ರಾಘಣ್ಣ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಅಲ್ಲೆ ಪಕ್ಕದಲ್ಲಿ ಅನಿಲ್ ಕಪೂರ್ ಮತ್ತು ಜಾನ್ ಅಬ್ರಾಹಂ ಕೂಡ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.
ಎಲ್ಲಾ ಸ್ಟಾರ್ ಒಟ್ಟಿಗೆ ಜಿಮ್ ಗೆ ಎಂಟ್ರಿ ಕೊಟ್ಟಾಗ ಜಿಮ್ ನಲ್ಲಿ ಭೇಟಿಯಾಗಿದ್ದಾರೆ. ರಾಘಣ್ಣನನ್ನು ನೋಡಿದ ಅನಿಲ್ ಕಪೂರ್ ಮತ್ತು ಜಾನ್ ಇಬ್ಬರು ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದ್ದಾರೆ. ಈ ಅಪರೂಪದ ಕ್ಷಣದ ಫೋಟೋಗಳು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.