Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್, ಪುನೀತ್ ಗೆ ಚಾಲೆಂಜ್ ಹಾಕಿದ ಅನಿಲ್ ಕುಂಬ್ಳೆ
Recommended Video
ಸ್ಯಾಂಡಲ್ ವುಡ್ ನಲ್ಲಿ ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಈ ಬಾರಿ ಕವನ ಓದುವ ಮೂಲಕ ಕನ್ನಡ ಸೆಲಿಬ್ರಿಟಿಗಳು ರಾಜ್ಯೋತ್ಸವವನ್ನು ಸಂಭ್ರಮಿಸುತ್ತಿದ್ದಾರೆ.
ಕವನ ಓದುವ ಚಾಲೆಂಜ್ ಈಗ ಖ್ಯಾತ ಕ್ರಿಕೆಟ್ ಆಟಗಾರ, ಕನ್ನಡಿಗ ಅನಿಲ್ ಕುಂಬ್ಳೆ ಹತ್ತಿರ ಬಂದಿದೆ. ನಟ ಗಣೇಶ್, ಅನಿಲ್ ಕುಂಬ್ಳೆಗೆ ಈ ಸವಾಲು ಹಾಕಿದ್ದರು. ಇದನ್ನು ಯಶಸ್ಸಿಯಾಗಿ ಪೂರೈಸಿದ ಕುಂಬ್ಳೆ ನಂತರ, ಸುದೀಪ್, ಪುನೀತ್ ರಾಜ್ ಕುಮಾರ್ ಹಾಗೂ ಗಾಯಕ ವಿಜಯ್ ಪ್ರಕಾಶ್ ರಿಗೆ ಚಾಲೆಂಜ್ ನೀಡಿದ್ದಾರೆ.
10 ತಿಂಗಳ ಚಿತ್ರರಂಗ: ಬಿಡುಗಡೆಯಾಗಿದ್ದು 163 ಸಿನಿಮಾ, 100 ಡೇಸ್ ಆಗಿದ್ದು ಎರಡೇ ಸಿನಿಮಾ
ಅನಿಲ್ ಕುಂಬ್ಳೆ, ರಾಷ್ಟ್ರಕವಿ ಕುವೆಂಪುರವರ ಕವನ ಓದಿದ್ದಾರೆ. ''ಎಲ್ಲಾದರೂ ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡವೇ ಸತ್ಯ.. ಕನ್ನಡವೇ ನಿತ್ಯ'' ಎಂದು ಹಾಡಿದ್ದಾರೆ. ಈ ಮೂಲಕ ತಮ್ಮ ಕನ್ನಡ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ. ಕ್ರಿಕೆಟ್ ಆಟದ ತಮ್ಮ ಸಾಧನೆಯಿಂದ ಕರುನಾಡಿಗೆ ಹೆಮ್ಮೆ ತಂದಿರುವ ಕುಂಬ್ಳೆ ಇದೀಗ ಕವನ ಓದಿದ್ದಾರೆ.
''ಈ ಸವಾಲನ್ನು ಮುಂದುವರೆಸಬೇಕು ಎಂದು ನನ್ನ ಸ್ನೇಹಿತರಾದ ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್ ಹಾಗೂ ವಿಜಯ ಪ್ರಕಾಶ್ ರಿಗೆ ಕೇಳಿಕೊಳ್ಳುತ್ತೇನೆ.'' ಎಂದ ಕುಂಬ್ಳೆ, ವಿಜಯ ಪ್ರಕಾಶ್ ಹಾಡಿನ ಮೂಲಕವೇ ಈ ಚಾಲೆಂಜ್ ಪೂರ್ಣಗೊಳಿಸಬೇಕು ಎಂದಿದ್ದಾರೆ.
#poetryreadingchallenge @Official_Ganesh. Hope you all like it. Passing this challenge to @KicchaSudeep @PuneethRajkumar @rvijayprakash 🙏🏽 pic.twitter.com/N7JsMFKAec
— Anil Kumble (@anilkumble1074) November 15, 2019
ರಾಕಿಂಗ್ ಸ್ಟಾರ್ ಯಶ್ ಹಾಕಿದ ಸವಾಲು ಸ್ವೀಕರಿಸಿದ ನಟ ಚಿಕ್ಕಣ್ಣ
ಅಂದಹಾಗೆ, ಕವನ ಚಾಲೆಂಜ್ ನಟ ಯಶ್ ಮೂಲಕ ಪ್ರಾರಂಭ ಆಗಿತ್ತು. ಹಿರಿಯ ಪತ್ರಕರ್ತರೊಬ್ಬರು ನೀಡಿದ ಸವಾಲನ್ನು ಯಶ್ ಸ್ವೀಕರ ಮಾಡಿದ್ದರು. ನಂತರ ಅದನ್ನು ನಿರ್ದೇಶಕ ನಾಗಾಭರಣ, ಗೀತಾ ಸಾಹಿತಿ ಡಾ.ವಿ ನಾಗೇಂದ್ರ ಪ್ರಸಾದ್, ಗೌಸ್ ಪೀಸ್, ಹಾಸ್ಯ ನಟ ಚಿಕ್ಕಣ್ಣ, ರವಿಶಂಕರ್ ಗೌಡ ಹಾಗೂ ರವಿಶಂಕರ್ ರಿಗೆ ನೀಡಿದ್ದರು.