Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಾರೋಗ್ಯದ ಬಗ್ಗೆ ಸುಳ್ಳು ಸುದ್ದಿ; ಸ್ಪಷ್ಟನೆ ನೀಡಿದ ನಟ ಅನಿರುದ್ಧ್
ಸದ್ಯ ಕನ್ನಡ ಕಿರುತೆರೆಯಲ್ಲಿ ಆರ್ಯವರ್ಧನ್ ಆಗಿ ಮಿಂಚುತ್ತಿರುವ ನಟ ಅನಿರುದ್ಧ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸ್ವತಃ ಅನಿರುದ್ಧ್ ಅವರೇ ಸ್ಪಷ್ಟನೆ ನೀಡಿದ್ದಾರೆ.
Recommended Video
ನನಗೆ ಏನು ಆಗಿಲ್ಲ. ಆರೋಗ್ಯವಾಗಿದ್ದೀನಿ ಎಂದು ವಿಡಿಯೋ ಮೂಲಕ ಅನಿರುದ್ಧ್ ಮಾಹಿತಿ ಹಂಚಿಕೊಂಡಿದ್ದಾರೆ. ಅನಿರುದ್ಧ್ ಅವರಿಗೆ ಕೊರೊನಾ ಬಂದಿದೆ ಎನ್ನುವ ಸುದ್ದಿ ನೋಡಿ ಅನೇಕರು ಫೋನ್ ಮಾಡಿ ವಿಚಾರಿಸುತ್ತಿದ್ದಾರೆ, ತನಗೆ ಏನು ಆಗಿಲ್ಲ ಎಂದಿದ್ದಾರೆ.
'ನನಗೆ ಕೊರೊನಾ ಬಂದಿದೆ ಅಂತ ಅನೇಕರು ಫೋನ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನನಗೆ ಕೊರೊನಾ ಬಂದಿದೆ ಅಂತ ಸುಳ್ಳು ಸುದ್ದಿ ಹಬ್ಬುತ್ತಿದೆ. ಅನೇಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ನನಗೆ ಏನು ಆಗಿಲ್ಲ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಇರುವಾಗ ನನಗೆ ಏನು ಆಗಲು ಸಾಧ್ಯವಿಲ್ಲ. ಜೊತೆಗೆ ಆ ಭಗವಂತ ಎಲ್ಲರನ್ನು ಕಾಪಾಡಲಿ, ಎಲ್ಲರಿಗೂ ಆರೋಗ್ಯ ಕೊಡಲಿ ಅಂತ ಪ್ರಾರ್ಥಿಸುತ್ತೇನೆ' ಎಂದಿದ್ದಾರೆ.
ಕೊರೊನಾದ ಕರಾಳ ಮುಖ ಬಿಚ್ಚಿಟ್ಟ ನಟ ಅನಿರುದ್ಧ
'ನನಗೆ ಪರಿಚಯ ಇರುವವರು ಬೆಡ್, ಆಕ್ಸಿಜನ್, ಐಸಿಯು ಬೇಕು ಅಂತ ಕೇಳುತ್ತಿದ್ದಾರೆ. ನಾನು ಒಂದಿಷ್ಟು ಕರೆ ಮಾಡುತ್ತಿದ್ದೇನೆ. ತುಂಬಾ ಜನ ಪ್ರಯತ್ನ ಪಡುತ್ತಿದ್ದೇವೆ. ಬಹುಷ ಇದು ಅನಿರುದ್ಧ್ ಅವರಿಗೆಯೇ ಆಗಿದೆ ಎಂದು ಅಂದುಕೊಂಡಿರಬಹುದು. ದಯವಿಟ್ಟು ಯಾರು ಆತಂಕ ಪಡಬೇಡಿ' ಎಂದು ಹೇಳಿದ್ದಾರೆ.
'ಇಂಥ ಸಂದರ್ಭದಲ್ಲಿ ಒಟ್ಟಿಗೆ ಇರೋಣ, ಸಾಕಷ್ಟು ಜನರಿಗೆ ಅನೇಕರ ಪರಿಚಯ ಇರುತ್ತೆ. ಇಂದು ಆ ಪರಿಚಯದ ಅವಶ್ಯತೆ ಇದೆ. ವಸುಧೈವ ಕುಟುಂಬದ ಬಗ್ಗೆ ಹೇಳುತ್ತಿರುತ್ತೇನೆ, ನಾವೆಲ್ಲರೂ ಒಂದೇ ಕುಟುಂಬದವರು. ಇದನ್ನ ನಾವು ಈ ಸಮಯದಲ್ಲಿ ಅರ್ಥ ಮಾಡಿಕೊಂಡು, ಪರಸ್ಪರ ಸಹಾಯ ಮಾಡೋಣ. ನಿಮ್ಮಲ್ಲರ ಆಶೀರ್ವಾದ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಹೇಳಿದ್ದಾರೆ' ವಿಡಿಯೋ ಮೂಲಕ ಹೇಳಿದ್ದಾರೆ.