ಕಲಾವಿದರ ಭವನಕ್ಕೆ ಏಕಿಲ್ಲ ವಿಷ್ಣು ಹೆಸರು? ಎಲ್ಲೆಡೆಯೂ ಏಕೆ ಅಗೌರವ?

ಕನ್ನಡ ಚಿತ್ರರಂಗ ಅಂದಾಕ್ಷಣ ಡಾ ರಾಜ್ ಕುಮಾರ್, ಡಾ ವಿಷ್ಣುವರ್ಧನ್, ಡಾ ಅಂಬರೀಶ್ ಹೆಸರುಗಳು ಮುಂಚೂಣಿಯಲ್ಲಿರುತ್ತದೆ. ಆದರೆ ವಾಣಿಜ್ಯ ಮಂಡಳಿ, ಕನ್ನಡ ಚಲನಚಿತ್ರ ಕಲಾವಿದರ ಸಂಘಗಳಲ್ಲಿ ಏಕೆ ಡಾ ವಿಷ್ಣುವರ್ಧನ್‌ ಕುರಿತು ಅಗೌರವ ಎಂದು ನಟ ಅನಿರುದ್ಧ ಪ್ರಶ್ನಿಸಿದ್ದಾರೆ.

Recommended Video

Rajkumar ಗೆ ಸಿಗ್ತಿರೋ ಗೌರವ Vishnuvardhan ಗೆ ಯಾಕೆ ಸಿಗ್ತಿಲ್ಲ | Aniruddha | Filmibeat Kannada

ಈ ಕುರಿತು ಫೇಸ್‌ಬುಕ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಅನಿರುದ್ಧ ''ಇಂಡಸ್ಟ್ರಿಯಲ್ಲಿ ಪದೇ ಪದೇ ವಿಷ್ಣುವರ್ಧನ್‌ ಅವರಿಗೆ ಅಗೌರವ ತೋರಲಾಗುತ್ತಿದೆ, ವಾಣಿಜ್ಯ ಮಂಡಳಿಯಲ್ಲಿ ಪುತ್ಥಳಿ ಇಡಲ್ಲ ಅಂತಾರೆ, ಕಲಾವಿದರ ಭವನದಲ್ಲಿ ಹೆಸರು ಇಡಲ್ಲ, ಏಕೆ ಈ ರೀತಿ'' ಎಂದು ದನಿ ಎತ್ತಿದ್ದಾರೆ. ಮುಂದೆ ಓದಿ....

ಕಲಾವಿದರ ಸಂಘಕ್ಕೆ ಇದು ಗೊತ್ತಿಲ್ಲವೇ?

ಕಲಾವಿದರ ಸಂಘಕ್ಕೆ ಇದು ಗೊತ್ತಿಲ್ಲವೇ?

''ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕಿರುವ ಗೌರವ ಬಗ್ಗೆ ಖುಷಿ ಇದೆ. ಆದರೆ ವಿಷ್ಣುವರ್ಧನ್ ಅವರಿಗೂ ಆ ಗೌರವ ಸಿಗಬೇಕಲ್ಲವೇ? ಅವರ ಹೆಸರು ಕಲಾವಿದರ ಭವನದಲ್ಲಿ ಇರಬೇಕು ಅಲ್ಲವೇ. ಕಲಾವಿದರ ಸಂಘದ ಆಡಳಿತ ಮಂಡಳಿಗೆ ಹಾಗೂ ಅಧಿಕಾರಿಗಳಿಗೆ ಇದು ಏಕೆ ಕಾಣುತ್ತಿಲ್ಲ.'' ಎಂದು ನಟ ಅನಿರುದ್ಧ ಆಗ್ರಹಿಸಿದರು.

ಅಧ್ಯಕ್ಷರಾಗಿರಲಿಲ್ಲ ಎನ್ನುವುದು ಉತ್ತರವೇ?

ಅಧ್ಯಕ್ಷರಾಗಿರಲಿಲ್ಲ ಎನ್ನುವುದು ಉತ್ತರವೇ?

''ಕಲಾವಿದರ ಭವನಕ್ಕೆ ವಿಷ್ಣುವರ್ಧನ್ ಹೆಸರು ಏಕೆ ಇಟ್ಟಿಲ್ಲ ಎನ್ನುವ ಕುರಿತು ಮಾತನಾಡುವ ಕೆಲವು ಅಧಿಕಾರಿಗಳು 'ಅವರ ಅಧ್ಯಕರಾಗಿರಲಿಲ್ಲ, ಅದಕ್ಕೆ ಹೆಸರಿಟ್ಟಿಲ್ಲ' ಅಂತ ಹೇಳಬಹುದು. ಆದರೆ ವಿಷ್ಣು ಅಪ್ಪಾಜಿ ಚಿತ್ರರಂಗದಲ್ಲಿ ನಡೆದಿರುವ ಅನೇಕ ಪ್ರಮುಖ ವಿಷಯಗಳಲ್ಲಿ ನಾಯಕತ್ವ ವಹಿಸಿದ್ದರು. ಸಭೆಗಳಲ್ಲಿ ಅಧ್ಯಕ್ಷತೆ ವಹಿಸಿದ್ದರು, ನಮ್ಮ ಮನೆಯಲ್ಲಿ ಅನೇಕ ಸಭೆಗಳು ನಡೆದಿವೆ'' ಎಂದು ಪ್ರಶ್ನಿಸಿದ್ದಾರೆ.

ವಾಣಿಜ್ಯ ಮಂಡಳಿಯಲ್ಲಿ ಪುತ್ಥಳಿ ಬೇಡ ಅಂದ್ರು

ವಾಣಿಜ್ಯ ಮಂಡಳಿಯಲ್ಲಿ ಪುತ್ಥಳಿ ಬೇಡ ಅಂದ್ರು

''ಫಿಲಂ ಚೇಂಬರ್ ಎದುರು ರಾಜ್ ಕುಮಾರ್ ಪುತ್ಥಳಿ ಇದೆ. ಅಲ್ಲಿ ಅಪ್ಪಾಜಿಯ ಪುತ್ಥಳಿ ಇಡಬೇಕು ಎಂಬ ವಿಚಾರ ಪ್ರಸ್ತಾಪ ಆಗಿತ್ತು. ಆಗಿನ ಫಿಲಂ ಚೇಂಬರ್ ಅಧ್ಯಕ್ಷರು ಅದಕ್ಕೆ ಒಪ್ಪಲಿಲ್ಲ. ಈಗ ವಿಷ್ಣು ಪುತ್ಥಳಿ ಇಟ್ಟರೆ ನಾಳೆ ಇನ್ನೊಬ್ಬರ ಪುತ್ಥಳಿ ಇಡಬೇಕಾಗುತ್ತದೆ ಎಂದಿದ್ದರು. ಆಮೇಲೆ ಅಭಿಮಾನಿಗಳಿಂದ ಸಹಿ ಸಂಗ್ರಹಿಸಿ ಮನವಿ ಕೊಡಿ ಅಂದರು. ನಿಜಕ್ಕೂ ವಿಷ್ಣು ಪುತ್ಥಳಿ ಇಡಲು ಸಹಿ ಸಂಗ್ರಹಿಸುವ ಅಗತ್ಯವಿದೆಯೇ? ಆದರೂ ನಾನು ಸಂಗ್ರಹಿಸಿ ಕೊಟ್ಟೆ. ಯಾವುದೇ ಪ್ರಯೋಜನ ಆಗಿಲ್ಲ'' ಎಂದು ಅನಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ವಿಷ್ಣುವರ್ಧನ್‌ಗೂ ಆ ಗೌರವ ಸಲ್ಲಲೇಬೇಕು

ವಿಷ್ಣುವರ್ಧನ್‌ಗೂ ಆ ಗೌರವ ಸಲ್ಲಲೇಬೇಕು

''ಕಲಾವಿದರ ಸಂಘ ನಾಮಫಲಕ ನೋಡಿದಾಗ ರಾಜ್-ಅಂಬಿ ಹೆಸರು ಕಾಣ್ತಿದೆ, ಅಲ್ಲಿ ವಿಷ್ಣು ಹೆಸರು ಏಕಿಲ್ಲ ಎಂದು ಅನಿಸಬಾರದು. ಕಲಾವಿದರ ಸಂಘ ಅಂದ್ಮೇಲೆ ಅಲ್ಲಿ ವಿಷ್ಣುವರ್ಧನ್ ಸಹ ಇದ್ದಾರೆ. ಧೀಮಂತರಿಗೆ ಸಿಕ್ಕಿರುವ ಗೌರವ ವಿಷ್ಣು ಅಪ್ಪಾಜಿಗೂ ಸಿಗಲೇಬೇಕು'' ಎಂದು ನಟ ಅನಿರುದ್ಧ ಒತ್ತಾಯಿಸಿದ್ದಾರೆ.

More from Filmibeat

English summary
kannada actor Anirudh Jatkar Questions why Vishnuvardhan Name is not there in kalavidara bhavan.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X