Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗುಜರಾತ್ ಮಾದರಿ'ಗಾಗಿ ಸಿಎಂ ಗೆ ಮನವಿ ಮಾಡಿದ ನಟ ಅನಿರುದ್ಧ
ನಟ ಅನಿರುದ್ಧ, ನಟನೆಯ ಜೊತೆಗೆ ಕೆಲವು ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಬಳಸಿಕೊಂಡು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ಇದೀಗ ನಟ ಅನಿರುದ್ಧ ಅವರು, ಸಾಮಾಜಿಕ ಜಾಲತಾಣ ಮೂಲಕ ಸಿಎಂ ಯಡಿಯೂರಪ್ಪ ಬಳಿ ಮನವಿಯೊಂದನ್ನು ಮಾಡಿದ್ದಾರೆ.
'ನಮ್ಮ ರಾಜ್ಯದಲ್ಲಿನ ತೆರೆದ ಕಾಲುವೆಗಳನ್ನ ಸೌರ ಫಲಕಗಳಿಂದ ಮುಚ್ಚಿ ಗುಜರಾತ್ ಮಾದರಿಯ ವಿದ್ಯುತ್ಚಕ್ತಿ ಉತ್ಪಾದನೆಗೆ ಸೌರಫಲಕಗಳನ್ನ ಬಳಿಸಬಹುದು ಮತ್ತು ಏರಡೂ ಬದಿಯಲ್ಲಿ ಗೋಡೆಗಳನ್ನ ಕಟ್ಟಿ ಅವುಗಳ ಮೇಲೆ ವರ್ಟಿಕಲ್ ಗಾರ್ಡನಿಂಗ್ ಮಾಡಬಹುದು' ಎಂಬ ಸಲಹೆ ನೀಡಿದ್ದಾರೆ ಅನಿರುದ್ಧ.
ದೊಡ್ಡ ನೀರಿನ ಕಾಲುವೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿದಲ್ಲಿ, ಕಾಲುವೆಗಳನ್ನು ಮುಚ್ಚಿದಂತೆ ಆಗುವ ಜೊತೆಗೆ ವಿದ್ಯುಚ್ಛಕ್ತಿ ಉತ್ಪಾದನೆಯೂ ಆಗುತ್ತದೆ. ವಿಜಯ್ ರೂಪಾಣಿ ಸಿಎಂ ಆಗಿರುವ ಗುಜರಾತ್ ರಾಜ್ಯದಲ್ಲಿ ಈಗಾಗಲೇ ಈ ಕಾರ್ಯವನ್ನು ಪ್ರಾರಂಭಿಸಲಾಗಿದೆ.
Recommended Video
ಇದು ಮಾತ್ರವಲ್ಲದೆ, ಕಸ ತುಂಬಿಕೊಂಡ ರಸ್ತೆಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಬಿಬಿಎಂಪಿ ಗಮನ ಕೊಡುವಂತೆ ಆಗ್ರಹಿಸುತ್ತಿರುತ್ತಾರೆ ಅನಿರುದ್ಧ. ಬೇರೆ ಎಲ್ಲೆಡೆಯೇ ಕಸ ಬಿದ್ದ ದೃಶ್ಯಗಳನ್ನು ಕಂಡುಬಂದರೆ ಅದರ ಚಿತ್ರವನ್ನು ಹಂಚಿಕೊಂಡು ಸಂಬಂಧಪಟ್ಟವರನ್ನು ಸ್ವಚ್ಚತೆಗಾಗಿ ಆಗ್ರಹಿಸೋಣ ಎಂದು ಕರೆ ಸಹ ನೀಡಿದ್ದಾರೆ.