Don't Miss!
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- News DV Sadananda Gowda: ಕಾಂಗ್ರೆಸ್ ನತ್ತ ಡಿ ವಿ ಸದಾನಂದಗೌಡ? ನಾಲ್ಕು ಕ್ಷೇತ್ರಗಳ ಆಫರ್ ಕೊಟ್ಟ ಕೈ ನಾಯಕರು?
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನೀಶ್ 'ರಾಮಾರ್ಜುನ' ಸಿನಿಮಾದ ರಿಲೀಸ್ ಡೇಟ್ ಫಿಕ್ಸ್: ರಕ್ಷಿತ್ ಶೆಟ್ಟಿ ಸಾಥ್
ಸ್ಯಾಂಡಲ್ ವುಡ್ ನಟ ಅನೀಶ್ ನಾಯಕನಾಗಿ ಮಿಂಚಿರುವ ರಾಮಾರ್ಜುನ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ರಾಮಾರ್ಜುನ ಸಿನಿಮಾ ರಕ್ಷಿತ್ ಶೆಟ್ಟಿ ಸಹ ನಿರ್ಮಾಣದಲ್ಲಿ ಮೂಡಿಬರುತ್ತಿದೆ.
ಚಿತ್ರದ ಬಗ್ಗೆ ವಿಭಿನ್ನವಾಗಿ ಪ್ರಮೋಟ್ ಮಾಡುವ ಮೂಲಕ ರಕ್ಷಿತ್ ಮತ್ತು ಕೆ ಆರ್ ಜಿ ಸ್ಟೂಡಿಯೊದ ಮಾಲಿಕ ಕಾರ್ತಿಕ್ ಗೌಡ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರು ರಾಮ ಮತ್ತು ಅರ್ಜುನ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಇದು ರಕ್ಷಿತ್ ಶೆಟ್ಟಿ ಹೊಸ ಸಿನಿಮಾದ ಪೋಸ್ಟರ್ ಇರಬಹುದಾ ಎಂದು ಎಲ್ಲರೂ ಅಂದುಕೊಂಡಿದ್ದರು.
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ಫೈನಲಿ ರಕ್ಷಿತ್ ಮತ್ತು ಕಾರ್ತಿಕ್ ಗೌಡ ಇಬ್ಬರು ರಾಮಾರ್ಜುನ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಮೂಲಕ ಕುತೂಹಲಕ್ಕೆ ತೆರೆ ಎಳೆದರು. ರಾಮಾರ್ಜುನ ಸಿನಿಮಾ ಇದೇ ತಿಂಗಳು ಜನವರಿ 29ರಂದು ತೆರೆಗೆ ಬರುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಟ ರಕ್ಷಿತ್ ಶೆಟ್ಟಿ, 'ಹೈ ವೋಲ್ಟೇಜ್ ಎಂಟಟೈನರ್ ರಾಮಾರ್ಜುನ ಸಿನಿಮಾ ಜನವರಿ 29ರಂದು ರಿಲೀಸ್ ಆಗುತ್ತಿದೆ. ಪ್ರೀತಿ, ಬೆಂಬಲ ಇರಲಿ' ಎಂದು ಕೇಳಿಕೊಂಡಿದ್ದಾರೆ.
ಅಂದಹಾಗೆ 'ರಾಮಾರ್ಜುನ' ಸಿನಿಮಾದಲ್ಲಿ ನಟ ಅನೀಶ್ ನಟನೆಯ ಜೊತೆಗೆ ನಿರ್ದೇಶನ ಸಹ ಮಾಡಿದ್ದಾರೆ. ಅನೀಶ್ ಗೆ ನಾಯಕಿಯಾಗಿ ನಿಶ್ವಿಕಾ ನಾಯ್ಡು ಕಾಣಿಸಿಕೊಳ್ಳುತ್ತಿದ್ದಾರೆ. ಲಾಕ್ ಡೌನ್ ಬಳಿಕ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆ ಕಾಣುತ್ತಿವೆ. ನಿರ್ಮಾಪಕರು ಧೈರ್ಯವಾಗಿ ಸಿನಿಮಾ ರಿಲೀಸ್ ಮಾಡುತ್ತಿದ್ದಾರೆ.
Recommended Video
ಶೇ.50 ಆಸನದಲ್ಲೇ ಚಿತ್ರಮಂದಿರಗಳು ಸಿನಿಮಾ ಪ್ರದರ್ಶನ ಮಾಡುತ್ತಿವೆ. ಇದೀಗ ಅನೀಶ್ ನಟನೆಯ ರಾಮಾರ್ಜುನ ಸಿನಿಮಾ ಸಹ ಚಿತ್ರಮಂದಿರದ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದು, ಪ್ರೇಕ್ಷಕರು ಹೇಗೆ ಸ್ವಾಗತಿಸಲಿದ್ದಾರೆ ಎಂದು ಕಾದುನೋಡ ಬೇಕು.