Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಿಶ್ ತೇಜೇಶ್ವರ್ ಈಗ NRI: ಬರ್ತಡೇ ದಿನ ಹೊಸ ಪ್ರಾಜೆಕ್ಟ್ ಘೋಷಣೆ
ಕನ್ನಡದ ಪ್ರತಿಭಾನ್ವಿತ ನಟ ಅನೀಶ್ ತೇಜೇಶ್ವರ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬರ್ತಡೇ ಪ್ರಯುಕ್ತ ಹೊಸ ಪ್ರಾಜೆಕ್ಟ್ ಘೋಷಣೆಯಾಗಿದ್ದು, ಟೈಟಲ್ ಪೋಸ್ಟರ್ ಸಹ ಬಿಡುಗಡೆಯಾಗಿದೆ.
ಹೊಸ ವರ್ಷದ ಸಂಭ್ರಮ ಹಾಗೂ ಜನುಮದಿನದ ಸಂಭ್ರಮದಲ್ಲಿರುವ ನಟ ಅನೀಶ್ ಮತ್ತೊಮ್ಮೆ ನಿರ್ದೇಶನದ ಕಡೆ ಒಲವು ತೋರಿದ್ದು, 'ಎನ್ಆರ್ಐ' ಎಂಬ ಹೊಸ ಚಿತ್ರ ಕೈಗೆತ್ತಿಕೊಂಡಿದ್ದಾರೆ. ನಟನೆಯ ಜೊತೆ ನಿರ್ದೇಶನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ.
ಅನಿಶ್ 'ರಾಮಾರ್ಜುನ' ಚಿತ್ರಕ್ಕೆ ರಕ್ಷಿತ್ ಶೆಟ್ಟಿ ನಿರ್ಮಾಪಕ!
ಅನೀಶ್ ನಿರ್ದೇಶನದಲ್ಲಿ ಈಗಾಗಲೇ ತಯಾರಾಗಿರುವ ರಾಮಾರ್ಜುನ ಚಿತ್ರದ ಸೆನ್ಸಾರ್ ಮುಗಿದಿದೆ. ಅನಿಶ್ ನಿರ್ಮಿಸಿ, ನಿರ್ದೇಶಿಸಿ, ನಟಿಸಿರುವ "ರಾಮಾರ್ಜುನ" ಚಿತ್ರಕ್ಕೆ ಯು/ಎ ಸೆರ್ಟಿಫಿಕೇಟ್ ಸಿಕ್ಕಿದ್ದು, ಸೆನ್ಸಾರ್ ಮಂಡಳಿಯವರಿಂದ ಪ್ರಶಂಸೆ ಪಡೆದುಕೊಂಡಿದೆ.
ನೆಚ್ಚಿನ ಗೆಳೆಯನಿಗೆ ನಟ ರಕ್ಷಿತ್ ಶೆಟ್ಟಿ ಶುಭಕೋರಿದ್ದಾರೆ. ಟ್ವಿಟ್ಟರ್ನಲ್ಲಿ ಆತ್ಮೀಯ ಗೆಳೆಯನಿಗೆ ಒಳ್ಳೆಯದಾಗಲಿ ಎಂದು ವಿಶ್ ಮಾಡಿದ್ದಾರೆ.
ಅಂದ್ಹಾಗೆ, ರಕ್ಷಿತ್ ಶೆಟ್ಟಿ ಮತ್ತು ಅನೀಶ್ ಆರಂಭದ ದಿನಗಳಿಂದಲೂ ಸ್ನೇಹಿತರು. 'ನಮ್ ಏರಿಯಾಲ್ ಒಂದಿನಾ' ಸಿನಿಮಾದಿಂದಲೂ ರಕ್ಷಿತ್ ಮತ್ತು ಅನಿಶ್ ಒಟ್ಟಿಗೆ ಇಂಡಸ್ಟ್ರಿಯಲ್ಲಿ ಬೆಳೆದವರು. ವಿಶೇಷ ಅಂದ್ರೆ ರಾಮಾರ್ಜುನ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಪಾಲುದಾರರಾಗಿದ್ದಾರೆ.
ಕ್ಲಾಸ್ ಪಾತ್ರಕ್ಕೂ ಸೈ, ಮಾಸ್ ಪಾತ್ರಕ್ಕೂ ಸೈ ಎಂದು ಸಾಧಿಸಿ ತೋರಿಸಿರುವ ಅನೀಶ್ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗಿರುವ ನಟ. 2010ರಲ್ಲಿ ಪೊಲೀಸ್ ಕ್ವಾಟ್ರಸ್ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿ ಅನೀಶ್ ನಮ್ ಏರಿಯಾಲ್ ಒಂದ್ ದಿನ, ಕಾಫಿ ವಿತ್ ಮೈ ವೈಫ್, ಎಂದೆಂದು ನಿನಗಾಗಿ, ಅಕಿರಾ, ವಾಸು ನಾನ್ ಪಕ್ಕಾ ಕಮರ್ಷಿಯಲ್ ಅಂತಹ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ.