Don't Miss!
- News Namma Metro Service Extension: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಧಾನದ ಮೂಲಕ ಬಗೆಹರಿದ 'ಅಂಜನಿಪುತ್ರ' ವಿವಾದ
ಪುನೀತ್ ರಾಜ್ ಕುಮಾರ್ ಅಭಿನಯದ 'ಅಂಜನಿಪುತ್ರ' ಹಾಗೂ ವಕೀಲರ ನಡುವಿನ ವಿವಾದ ಸಂಧಾನದ ಮೂಲಕ ಬಗೆಹರಿದಿದೆ. ಚಿತ್ರದಲ್ಲಿ ವಕೀಲರಿಗೆ ಅವಮಾನ ಮಾಡುವ ರೀತಿಯಲ್ಲಿ ಸಂಭಾಷಣೆ ಬಳಸಲಾಗಿದೆ ಎಂದು ನಾರಾಯಣ ಸ್ವಾಮಿ ಅವರು ಕೋರ್ಟ್ ನಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಚಿತ್ರದ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿತ್ತು.
ಇದೀಗ, ಚಿತ್ರತಂಡ ಮತ್ತು ವಕೀಲ ಮಧ್ಯೆ ಮಾತುಕತೆಯ ಮೂಲಕ ಸಂಧಾನ ಮಾಡಿಕೊಂಡಿದ್ದು, ವಕೀಲ ಸಮುದಾಯಕ್ಕೆ ಕ್ಷಮೆ ಕೇಳುವ ಮೂಲಕ ಈ ವಿವಾದಕ್ಕೆ ಅಂತ್ಯವಾಡಿದ್ದಾರೆ. ಈ ಬಗ್ಗೆ ನಿರ್ಮಾಪಕರು ನ್ಯಾಯಾಲಯಕ್ಕೆ ಪ್ರಮಾಣಪತ್ರ ಬರೆದಿದ್ದಾರೆ.
ಕೋರ್ಟ್ ಆದೇಶಕ್ಕೆ ತಲೆಬಾಗಿದ 'ಅಂಜನಿಪುತ್ರ': ಡೈಲಾಗ್ ಗೆ ಬಿತ್ತು ಕತ್ತರಿ
''ವಕೀಲರಿಗೆ ಅವಮಾನವಾಗಿದ್ದರೇ ದಯವಿಟ್ಟು ಕ್ಷಮಿಸಿ. ನಾವು ಯಾರಿಗೂ ನೋವು ಉಂಟು ಮಾಡುವ ದೃಷ್ಟಿಯಲ್ಲಿ ಡೈಲಾಗ್ ಬರೆದಿಲ್ಲ. ಸಿನಿಮಾಗೆ ಅವಶ್ಯಕತೆ ಇತ್ತು ಅಂತ ಸೇರಿಸಿದ್ದೀವಿ. ಇದರಿಂದ ನೋವಾಗಿದ್ದಲ್ಲಿ ಇಡೀ ವಕೀಲ ಸಮುದಾಯಕ್ಕೆ ಕ್ಷಮೆ ಕೋರುವುದಾಗಿ'' ನಿರ್ಮಾಪಕ ಎನ್ ಕುಮಾರ್ ಪ್ರಮಾಣಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಹೀಗಾಗಿ, ನ್ಯಾಯಾಲಯ ಕೂಡ ಅಂಜನಿಪುತ್ರ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿದ್ದು, ಚಿತ್ರತಂಡಕ್ಕೆ 25 ಸಾವಿರ ದಂಡ ವಿಧಿಸಿದೆ. ಆ ಹಣವನ್ನ ವಕೀಲ ಸಂಘಕ್ಕೆ ಬಳಸುವಂತೆ ಆದೇಶಿಸಿದೆ. ಒಟ್ನಲ್ಲಿ, ಕಳೆದ ಒಂದು ವಾರದಿಂದ ಬಾರಿ ಸುದ್ದಿಯಾಗಿದ್ದ ಅಂಜನಿಪುತ್ರ'ನ ಸಮಸ್ಯೆ ಬಗೆಹರಿದಿದ್ದು, ಇನ್ಮುಂದೆ ಯಾವುದೇ ಅಡ್ಡಿಯಿಲ್ಲದೇ ಪ್ರದರ್ಶನವಾಗಲಿದೆ.
'ಅಂಜನಿಪುತ್ರ' ಸಿನಿಮಾ ಪ್ರದರ್ಶನ ನಿಲ್ಲಿಸುವಂತೆ ಕೋರ್ಟ್ ಆದೇಶ