Don't Miss!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊನ್ನೆ ಹರಿಪ್ರಿಯಾ, ಇಂದು ಅನುಶ್ರೀ...ನಟಿಯರ ಪಾಡು ಯಾಕ್ ಕೇಳ್ತೀರಾ?
ನಟಿ ಅನುಶ್ರೀಯನ್ನ 'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ನೀವೆಲ್ಲಾ ನೋಡಿದ್ದೀರಾ. ತಂಟೆಗೆ ಬಂದ್ರೆ ತರಾಟೆಗೆ ತೆಗೆದುಕೊಳ್ಳುವ ಹುಡುಗಿ ಅನುಶ್ರೀ. ಬಾಯ್ಬಿಟ್ರೆ ಪಟ ಪಟ ಅಂತ ಮಾತನಾಡುವ ಅನುಶ್ರೀಗೆ ಕಿರಿಕಿರಿ ಆಗುವ ಘಟನೆ ಕುಂದಾಪುರದಲ್ಲಿ ನಡೆದಿದೆ.
ಅಂಥದ್ದೇನಪ್ಪಾ ಆಯ್ತು ಅಂದ್ರೆ, ನಟಿ ಅನುಶ್ರೀ ಫಂಕ್ಷನ್ ಒಂದಕ್ಕೆ ಹೋಗಿದ್ರು. ಅಲ್ಲಿ, ಯಾರೋ ಒಬ್ಬ ಯುವಕ ನಟಿ ಅನುಶ್ರೀಗೆ ಚುಡಾಯಿಸಿದ್ದಾರೆ. ಸಾಲದಕ್ಕೆ ಅನುಚಿತವಾಗಿ ವರ್ತಿಸಿದ್ದಾರೆ.
ಸಿಟ್ಟಿಗೆದ್ದ ಅನುಶ್ರೀ ಪೊಲೀಸರಿಗೆ ಕಂಪ್ಲೇಂಟ್ ಕೊಟ್ಟಿದ್ದಾರೆ. ದೂರು ದಾಖಲಾದ ಕೂಡಲೆ ಪೊಲೀಸರು ಆ ಯುವಕನನ್ನ ಹಿಡಿದು ಏರೋಪ್ಲೇನ್ ಹತ್ತಿಸಿದ್ದಾರೆ. ''ಛೇ..ಮೂಡೆಲ್ಲಾ ಹಾಳಾಯ್ತಲ್ಲಾ..''ಅಂತ ಸ್ವಲ್ಪ ರಿಲ್ಯಾಕ್ಸ್ ಮಾಡಿಕೊಂಡು ಅನುಶ್ರೀ ಮತ್ತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ್ರು.
ಇಂತಹ ಸೇಮ್ ಟು ಸೇಮ್ ಘಟನೆ ಮೊನ್ನೆಯಷ್ಟೇ ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ನಟಿ ಹರಿಪ್ರಿಯಾಗೆ ಆಗಿದ್ದು ನೆನಪಿದೆ ತಾನೆ. ಇಲ್ಲಾಂದ್ರೆ, ಈ ಲಿಂಕ್ ಕ್ಲಿಕ್ ಮಾಡಿ....[ನಟಿ ಹರಿಪ್ರಿಯಾ ಜೊತೆ ಅಪರಿಚಿತ ಯುವಕನ ಅಸಭ್ಯ ವರ್ತನೆ] ಪಾಪಾ...ನಟಿಯರ ಪಾಡು ಯಾಕ್ ಕೇಳ್ತೀರಾ..!?