Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರುತಿ ಬಾಯಿ ಮುಚ್ಚಬೇಕು ಅಂದ್ರೆ 2 ಕೋಟಿ ಕೊಡಬೇಕಂತೆ!
Recommended Video
ನಟಿ ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಅವರ ಮೀ ಟೂ ಪ್ರಕರಣಕ್ಕೆ ಅನೇಕ ತಿರುವುಗಳು ಸಿಗುತ್ತಿದೆ. ಈಗ ಈ ಘಟನೆಗೆ ಸಂಬಂಧಿಸಿದ ಹಾಗೆ ಮತ್ತೊಂದು ಅಚ್ಚರಿಯ ಸುದ್ದಿ ಬಂದಿದೆ.
'ಶ್ರುತಿ ಹರಿಹರನ್ ಬಾಯಿ ಮುಚ್ಚಿಕೊಂಡು ಇರಬೇಕು ಎಂದರೆ 2 ಕೋಟಿ ಹಣ ಕೊಡಬೇಕು' ಎಂದು ಬೇಡಿಕೆ ಇಡಲಾಗಿದೆಯಂತೆ. ಅರ್ಜುನ್ ಸರ್ಜಾ ಅವರ ಮ್ಯಾನೆಜರ್ ಗೆ ಈ ರೀತಿಯ ಕರೆ ಹೋಗಿದೆಯಂತೆ. ದುಡ್ಡು ಕೊಟ್ಟರೆ ಮಾತ್ರ ಈ ಪ್ರಕರಣ ಸುಖಾಂತ್ಯ ಕಾಣಲಿದೆ ಎಂದು ವ್ಯಕ್ತಿಯೊಬ್ಬ ಹೇಳಿದ್ದಾನಂತೆ. ಹೌದು, ಈ ರೀತಿಯ 'ಅಂತೆ' ಕಂತೆ ಸುದ್ದಿ ಈಗ ಹೊರಬಂದಿದೆ.
ಮೀಟೂ ಬಗ್ಗೆ ಶಿವಣ್ಣ ಏನಂತಾರೆ? ಯಾರ ಪರ ನಿಲ್ತಾರೆ?
ಹಾಗಾದರೆ, ಸದ್ಯ ಬಂದಿರುವ ಈ ವಿಷಯ ನಿಜವೇ.?, ಶ್ರುತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಇಬ್ಬರ ಪ್ರಕರಣ ಮುಂದೆ ಏನಾಗುತ್ತದೆ ಎನ್ನುವ ಕೆಲ ಸಂಗತಿಗಳು ಮುಂದಿದೆ ಓದಿ...
ಅನಾಮಿಕ ವ್ಯಕ್ತಿಯಿಂದ ಕರೆ
ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅನಾಮಿಕ ವ್ಯಕ್ತಿಯಿಂದ ಕರೆ ಬಂದಿದೆಯಂತೆ. ಫೋನ್ ಮಾಡಿ ಮಾತನಾಡಿದ ಆ ವ್ಯಕ್ತಿ ಮೀ ಟೂ ಪ್ರಕರಣದ ಬಗ್ಗೆ ಶ್ರುತಿ ಹರಿಹರನ್ ಏನು ಮಾಡನಾಡದೆ ಬಾಯಿ ಮುಚ್ಚಿಕೊಂಡು ಇರಬೇಕು ಎಂದರೆ 1.5 ರಿಂದ 2 ಕೋಟಿ ನೀಡಬೇಕು ಎಂದು ಡಿಮ್ಯಾಂಡ್ ಮಾಡಿದನಂತೆ.
ಶ್ರುತಿ ಹರಿಹರನ್ ವಿವಾದ: ಇಂದು ಪ್ರಶಾಂತ್ ಸಂಬರ್ಗಿ ಇಂದ ಸಿಡಿಯಲಿದೆ ಹೊಸ ಬಾಂಬ್.!
'ಅಂತೆ' ಕಂತೆ ಮಾತ್ರ
ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂಬ ಸುದ್ದಿ ಇದೀಗ ಹೊರ ಬಂದಿದೆ. ಆದರೆ, ಅದು 'ಅಂತೆ' ಕಂತೆ ಸುದ್ದಿ ಮಾತ್ರ. ಆ ವ್ಯಕ್ತಿ ಹಣ ಕೇಳಿರುವ ಬಗ್ಗೆ ಯಾವುದೇ ದಾಖಲೆಗಳನ್ನು ಅರ್ಜುನ್ ಸರ್ಜಾ ಕಡೆಯವರು ನೀಡಿಲ್ಲ. ಸೋ, ಹೀಗಿರುವಾಗ ಇದು, ನಿಜವೋ ಸುಳ್ಳೋ ಎಂದು ನಂಬುವುದು ಕಷ್ಟ.''
ಶ್ರುತಿ ಪರ ಎಂದಿದ್ದ ಪ್ರಕಾಶ್ ರೈ ಈಗ ಉಲ್ಟಾ ಹೊಡೆದರು
ಇಂದು ಸಂಧಾನ ಸಭೆ
ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎನ್ನುವುದು ಇಂದು ತೀರ್ಮಾನ ಆಗಲಿದೆ. ಇಂದು ನಟ ಅಂಬರೀಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ಇಬ್ಬರೂ ಭಾಗಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.
ಚೆಂಬರ್ ನಲ್ಲಿ ತೀರ್ಮಾನವಾಗಲಿ ಎಂದ ಶಿವಣ್ಣ
ಶ್ರುತಿ - ಸರ್ಜಾ ಗಲಾಟೆಯ ಬಗ್ಗೆ ಮಾತನಾಡಿದ ಶಿವಣ್ಣ ''ಚೆಂಬರ್ ಬಗ್ಗೆ ನಮಗೆ ಗೌರವ ಇದ್ದು, ಅದನ್ನು ಕಾಪಾಡಿಕೊಂಡು ಹೋಗಬೇಕು. ಅಲ್ಲಿಯೇ ಈ ವಿವಾದ ಅಂತ್ಯ ಕಾಣಲಿ. ನಾನು ಯಾರ ಭಾವನೆಗೆ ನೋವುಂಟು ಮಾಡುವುದು ಬೇಡ. ಅವರದ್ದು ಸರಿ, ಇವರದ್ದು ಸರಿ ಎಂದು ಹೇಳುವುದಿಲ್ಲ'' ಎಂದು ಪ್ರತಿಕ್ರಿಯೆ ನೀಡಿದ್ದಾರೆ.