Don't Miss!
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Sports SRH vs MI: IPL ಇತಿಹಾಸದಲ್ಲೇ ಗರಿಷ್ಠ ರನ್ ಕಲೆ ಹಾಕಿದ ಹೈದರಾಬಾದ್: ಎಸ್ಆರ್ಎಚ್ ಆಟಕ್ಕೆ ಮಕಾಡೆ ಮಲಗಿದ MI
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣಕ್ಕೆ ಮತ್ತೊಮ್ಮೆ ಆಘಾತ ಸಾಧ್ಯತೆ
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಚಾಪ್ಟರ್ 2 ಬಗ್ಗೆ ಭಾರಿ ಕುತೂಹಲ ಮೂಡಿದೆ. ಈಗಾಗಲೇ ಪಾರ್ಟ್ 2 ಚಿತ್ರೀಕರಣ ಭರದಿಂದ ಸಾಗುತ್ತಿದೆ. ಆದ್ರೀಗ ಚಿತ್ರೀಕರಣಕ್ಕೆ ಅಡ್ಡಿಯಾಗುವ ಸಂದರ್ಭ ಎದುರಾಗಿದೆ.
ಹೌದು, ಇತ್ತೀಚಿಗಷ್ಟೆ ಕೆಜಿಎಫ್ ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ ಎಂಬ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿ, ತಡೆ ತಂದಿದ್ದರು. ಬಳಿಕ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿತ್ತು.
'ಕೆಜಿಎಫ್' ಬಿಡುಗಡೆಗೆ ಬ್ರೇಕ್ ಹಾಕಿದ ವೆಂಕಟೇಶ್ ಯಾರು? ಬೇಡಿಕೆ ಏನು?
ಈಗ ರೌಡಿ ತಂಗಂ ಕುಟುಂಬದವರು ಕೋರ್ಟ್ ಮೆಟ್ಟಿಲೇರಿದ್ದು, ಕೆಜಿಎಫ್ ಚಿತ್ರಕ್ಕೆ ಮತ್ತೆ ತಡೆ ನೀಡುವ ಸಾಧ್ಯತೆ ಇದೆ. ಅಷ್ಟಕ್ಕೂ, ಕೆಜಿಎಫ್ ಹಾಗೂ ರೌಡಿ ತಂಗಂ ಕುಟುಂಬಕ್ಕೂ ಏನ್ ಸಂಬಂಧ? ಮುಂದೆ ಓದಿ....
ರೌಡಿ ತಂಗಂ ಬಗ್ಗೆ ಕೆಟ್ಟದಾಗಿ ತೋರಿಸಲಾಗಿದೆ
ಕೆಜಿಎಫ್ ಚಿತ್ರದಲ್ಲಿ ಯಶ್ ನಿರ್ವಹಿಸಿರುವ ಪಾತ್ರ ರೌಡಿ ತಂಗಂ ಅವರದ್ದು ಎಂದು ತಂಗಂ ತಾಯಿ ಪೌಳಿ ಆರೋಪಿಸಿದ್ದಾರೆ. ಮಗನ ಬಗ್ಗೆ ಒಳ್ಳೆಯದು ತೋರಿಸುತ್ತೇವೆ ಎಂದು ಹೇಳಿ, ಈಗ ಕೆಟ್ಟದಾಗಿ ಬಿಂಬಿಸಿದ್ದಾರೆ ಎಂದು ದೂರಿದ್ದಾರೆ. ಹಾಗಾಗಿ, ಚಾಪ್ಟರ್ 2 ಚಿತ್ರೀಕರಣಕ್ಕೆ ತಡೆ ನೀಡಬೇಕೆಂದು ಕೋರ್ಟ್ ಗೆ ಮನವಿ ಮಾಡಿದ್ದಾರೆ.
'ಕೆಜಿಎಫ್' ರಿಲೀಸ್ ಗೆ ತಡೆ: ಸಿವಿಲ್ ಕೋರ್ಟ್ ಆದೇಶ
ಕೆಜಿಎಫ್ 1 ಚಿತ್ರಕ್ಕೂ ಅಡ್ಡಿ.!
ಈ ಹಿಂದೆ ಕೆಜಿಎಫ್ ಸಿನಿಮಾ ರಿಲೀಸ್ ಆಗುವ ಸಮಯದಲ್ಲೂ ರೌಡಿ ತಂಗಂ ಅವರಿಗೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ತಡೆ ತರಲಾಗಿತ್ತು. ಆದರೂ ಕೆಲವು ಕಾನೂನಾತ್ಮಕ ಹೋರಾಟ ಮಾಡಿ ಸಿನಿಮಾ ರಿಲೀಸ್ ಮಾಡಿದ್ದರು ನಿರ್ಮಾಪಕರು. ಇದೀಗ, ಮತ್ತೆ ರೌಡಿ ತಂಗಂ ಕಡೆಯವರು ಕೆಜಿಎಫ್ ಗೆ ಅಡ್ಡಿಯಾಗುವ ಸೂಚನೆ ಕೊಟ್ಟಿದ್ದಾರೆ.
ವಿಚಾರಣೆಗೆ ಹಾಜರಾಗಲು ಕೆಜಿಎಫ್ ತಂಡಕ್ಕೆ ಸೂಚನೆ
ರೌಡಿ ತಂಗಂ ಅವರ ತಾಯಿ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಕೆಜಿಎಫ್ ಚಿತ್ರದ ನಿರ್ಮಾಪಕ, ನಿರ್ದೇಶಕ, ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಅಕ್ಟೋಬರ್ 9ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದು ಆ ದಿನ ಕೋರ್ಟ್ ಗೆ ವಿವರಣೆ ನೀಡಬೇಕಾದ ಅಗತ್ಯವಿದೆ.
ಕನ್ನಡ ಇಂಡಸ್ಟ್ರಿಯ ದಿಕ್ಕು ಬದಲಿಸಿದ 'ಕೆಜಿಎಫ್' ಚಿತ್ರದ '21' ಅಂಶಗಳು
'ಕೋಲಾರ' ಚಿತ್ರದ ವಿರುದ್ಧವೂ ಸಂಘರ್ಷ
ಕೆಜಿಎಫ್ ಸಿನಿಮಾ ರೌಡಿ ತಂಗಂ ಕುರಿತಾಗಿದ್ದು ಎಂದು ಎಲ್ಲಿಯೂ ಚಿತ್ರತಂಡ ಹೇಳಿಲ್ಲ. ಆದರೆ, ಇಂತಹದೊಂದು ಆರೋಪ ಆಗಾಗ ಕೇಳಿ ಬರುತ್ತೆ. ಈ ಹಿಂದೆ ಲೂಸ್ ಮಾದ ಯೋಗೇಶ್ ನಟನೆಯ 'ಕೋಲಾರ' ಚಿತ್ರದಲ್ಲಿ ರೌಡಿ ತಂಗಂ ಜೀವನ ಕಥೆ ಮಾಡಲಾಗಿತ್ತು. ಆ ಚಿತ್ರದ ವಿರುದ್ಧವೂ ತಂಗಂನ ತಾಯಿ ಕೋರ್ಟ್ ಗೆ ಹೋಗಿದ್ದರು. ನಂತರ ಪರಿಹಾರ ಧನ ನೀಡಿ ಸಂಧಾನ ಮಾಡಿಕೊಂಡಿದ್ದರು.