Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಓಂ ಪ್ರಕಾಶ್ ರಾವ್ ಚಿತ್ರದಲ್ಲಿ ಅನುಪಮ್ ಖೇರ್
ಬಾಲಿವುಡ್ ಚಿತ್ರರಂಗದ ಹೆಸರಾಂತ ನಟ ಅನುಪಮ್ ಖೇರ್ ಕನ್ನಡಕ್ಕೆ ಬರುವುದು ಬಹುತೇಕ ಗ್ಯಾರಂಟಿಯಾಗಿದೆ. ಈ ಹಿಂದೆ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನವನ್ನು ಹೇಮಂತ್ ಹೆಗಡೆ ಮಾಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಹೇಮಂತ್ ಅವರ 'ನಿಂಬೆ ಹುಳಿ' ಚಿತ್ರಕ್ಕೆ ಅನುಪಮ್ ಕಡೆಗೂ ಬರಲೇ ಇಲ್ಲ.
ಈಗ ಓಂ ಪ್ರಕಾಶ್ ರಾವ್ ಅವರು ತಮ್ಮ 'ಅಯ್ಯ' ಚಿತ್ರಕ್ಕೆ ಅನುಪಮ್ ಖೇರ್ ಅವರನ್ನು ಕರೆಸುತ್ತಿದ್ದಾರೆ. ಈಗಾಗಲೆ ಖೇರ್ ಜೊತೆ ಮಾತುಕತೆಯೂ ಆಗಿದೆಯಂತೆ. 'ಅಯ್ಯ' ಚಿತ್ರದಲ್ಲಿ ಅಭಿನಯಿಸುವ ಬಗ್ಗೆ ಅವರು ಒಪ್ಪಿಗೆಯನ್ನೂ ಕೊಟ್ಟಿದ್ದಾರೆ ಎನ್ನುತ್ತಾರೆ ಓಂ.
ಉತ್ತಮ ಆಡಳಿತಕ್ಕೆ ಹೆಸರಾದ ಅವರನ್ನು ಕೊಲ್ಲಲು ಪ್ಲಾನ್ ಮಾಡಲಾಗುತ್ತದೆ. ಅವರು ಕರ್ನಾಟಕಕ್ಕೆ ಬಂದಾಗ ಅವರನ್ನು ಮುಗಿಸಲು ಸ್ಕೆಚ್ ಹಾಕಲಾಗುತ್ತದೆ. ಆದರೆ ಅದು ಸಾಧ್ಯವಾಗುವುದಿಲ್ಲ. ಕಾರಣ ಕರ್ನಾಟಕದ ಸೂಪರ್ ಕಾಪ್ 'ಅಯ್ಯ'.
'ಅಯ್ಯ'ನ ಚಾಣಾಕ್ಷ ತನದಿಂದ ಕೇಂದ್ರ ಸಚಿವರು ಪಾರಾಗುತ್ತಾರೆ. ಅದೇನು ಎಂಬುದನ್ನು ತೆರೆಯ ಮೇಲೆ ನೋಡಿ ಎನ್ನುತ್ತಿದ್ದಾರೆ ಓಂ ಪ್ರಕಾಶ್ ರಾವ್. ಅ.23ರಿಂದ ಚಿತ್ರ ಆರಂಭವಾಗಲಿದ್ದು ನ.6ರ ತನಕ ಸತತ ಚಿತ್ರೀಕರಣ ನಡೆಯಲಿದೆ. (ಏಜೆನ್ಸೀಸ್)