Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ನಾಯಕಿ ಈಗ ಸಹಾಯಕ ನಿರ್ದೇಶಕಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಟಸಾರ್ವಭೌಮ' ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದ ಮಲಯಾಳಿ ಬೆಡಗಿ ಅನುಪಮಾ ಪರಮೇಶ್ವರನ್ ಈಗ ನಟನೆಯ ಜೊತೆಗೆ ಹೊಸ ಕೆಲಸ ಶುರು ಮಾಡಿಕೊಂಡಿದ್ದಾರೆ.
ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಭಾರಿ ಬೇಡಿಕೆಯ ನಟಿಯಾಗಿರುವ ಅನುಪಮಾ ಈಗ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಇರುವ ಅನುಪಮಾ ಅವರೆ ನಟಿಸುತ್ತಿರುವ ಹೊಸ ಚಿತ್ರಕ್ಕೆ ಸಹಾಯಕ ನಿರ್ದೇಶಕಿಯಾಗಿ ದುಡಿಯುತ್ತಿದ್ದಾರೆ.
ಶ್ರುತಿ ಪಾತ್ರ ನೀಡಿದಕ್ಕೆ ಧನ್ಯವಾದ ತಿಳಿಸಿದ ಅನುಪಮ
ಮಾಲಿವುಡ್ ಖ್ಯಾತ ನಟ ದುಲ್ಕರ್ ಸಲ್ಮಾನ್ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದಲ್ಲಿ ಅನುಪಮಾ ಸೇರಿದಂತೆ ಮೂವರು ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. ಆದ್ರೆ ಈ ಚಿತ್ರಕ್ಕೆ ನಾಯಕ ಮತ್ತು ಟೈಟಲ್ ಇನ್ನು ಫೈನಲ್ ಆಗಿಲ್ಲ. ಆದ್ರೆ ಆಗಲೆ ಚಿತ್ರೀಕರಣ ಪ್ರಾರಂಭವಾಗಿದೆ.
ಈ ಚಿತ್ರಕ್ಕೆ ಯುವ ಪ್ರತಿಭೆ ಶಂಸು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅವರಿಗೆ ಅನುಪಮಾ ಸಹಾಯಕ ನಿರ್ದೇಶಕಿಯಾಗಿ ಅನುಪಮಾ ಕ್ಯಾಮರಾ ಮುಂದೆ ದುಡಿಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ನಾಯಕಿಯರು ಅಭಿನಯದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಆದ್ರೆ ಅನುಪಮಾ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿರುವುದು ವಿಶೇಷ.
ಈ ಬಗ್ಗೆ ಸ್ವತಹ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಸಹಾಯಕ ನಿರ್ದೇಶಕಿಯಾಗಿ ನನಗೆ ಇದು ಹೊಸ ಅನುಭವ. ಈ ತಂಡದ ಜತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ಇದೆ. ದುಲ್ಕರ್ ಸಲ್ಮಾನ್ ನಿರ್ಮಾಣದ ಮೊದಲ ಚಿತ್ರ. ಚಿತ್ರದ ಬಗ್ಗೆ ನಿಮ್ಮೊಡನೆ ಹಂಚಿಕೊಳ್ಳಲು ಇನ್ನಷ್ಟು ವಿಷಯ ಇದೆ. ಶೀಘ್ರದಲ್ಲೇ ಅವುಗಳ ಬಗ್ಗೆ ಹೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಸದಾ ನನಗಿರಲಿ' ಎಂದು ಬರೆದುಕೊಂಡಿದ್ದಾರೆ.