Don't Miss!
- News ಚುನಾವಣೆ ಹೊತ್ತಲ್ಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ಗೆ ಕೋರ್ಟ್ ಸಮನ್ಸ್: ಯಾಕೆ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ನಾಯಕಿ ಈಗ ಸಹಾಯಕ ನಿರ್ದೇಶಕಿ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ನಟಸಾರ್ವಭೌಮ' ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದ ಮಲಯಾಳಿ ಬೆಡಗಿ ಅನುಪಮಾ ಪರಮೇಶ್ವರನ್ ಈಗ ನಟನೆಯ ಜೊತೆಗೆ ಹೊಸ ಕೆಲಸ ಶುರು ಮಾಡಿಕೊಂಡಿದ್ದಾರೆ.
ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಭಾರಿ ಬೇಡಿಕೆಯ ನಟಿಯಾಗಿರುವ ಅನುಪಮಾ ಈಗ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿ ಇರುವ ಅನುಪಮಾ ಅವರೆ ನಟಿಸುತ್ತಿರುವ ಹೊಸ ಚಿತ್ರಕ್ಕೆ ಸಹಾಯಕ ನಿರ್ದೇಶಕಿಯಾಗಿ ದುಡಿಯುತ್ತಿದ್ದಾರೆ.
ಶ್ರುತಿ ಪಾತ್ರ ನೀಡಿದಕ್ಕೆ ಧನ್ಯವಾದ ತಿಳಿಸಿದ ಅನುಪಮ
ಮಾಲಿವುಡ್ ಖ್ಯಾತ ನಟ ದುಲ್ಕರ್ ಸಲ್ಮಾನ್ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಈ ಚಿತ್ರದಲ್ಲಿ ಅನುಪಮಾ ಸೇರಿದಂತೆ ಮೂವರು ನಾಯಕಿಯರು ಕಾಣಿಸಿಕೊಳ್ಳುತ್ತಿದ್ದಾರೆ. ಆದ್ರೆ ಈ ಚಿತ್ರಕ್ಕೆ ನಾಯಕ ಮತ್ತು ಟೈಟಲ್ ಇನ್ನು ಫೈನಲ್ ಆಗಿಲ್ಲ. ಆದ್ರೆ ಆಗಲೆ ಚಿತ್ರೀಕರಣ ಪ್ರಾರಂಭವಾಗಿದೆ.
ಈ ಚಿತ್ರಕ್ಕೆ ಯುವ ಪ್ರತಿಭೆ ಶಂಸು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅವರಿಗೆ ಅನುಪಮಾ ಸಹಾಯಕ ನಿರ್ದೇಶಕಿಯಾಗಿ ಅನುಪಮಾ ಕ್ಯಾಮರಾ ಮುಂದೆ ದುಡಿಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ನಾಯಕಿಯರು ಅಭಿನಯದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಆದ್ರೆ ಅನುಪಮಾ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿರುವುದು ವಿಶೇಷ.
ಈ ಬಗ್ಗೆ ಸ್ವತಹ ಅನುಪಮಾ ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಸಹಾಯಕ ನಿರ್ದೇಶಕಿಯಾಗಿ ನನಗೆ ಇದು ಹೊಸ ಅನುಭವ. ಈ ತಂಡದ ಜತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿ ಇದೆ. ದುಲ್ಕರ್ ಸಲ್ಮಾನ್ ನಿರ್ಮಾಣದ ಮೊದಲ ಚಿತ್ರ. ಚಿತ್ರದ ಬಗ್ಗೆ ನಿಮ್ಮೊಡನೆ ಹಂಚಿಕೊಳ್ಳಲು ಇನ್ನಷ್ಟು ವಿಷಯ ಇದೆ. ಶೀಘ್ರದಲ್ಲೇ ಅವುಗಳ ಬಗ್ಗೆ ಹೇಳುತ್ತೇನೆ. ನಿಮ್ಮ ಪ್ರೀತಿ ಮತ್ತು ಹಾರೈಕೆ ಸದಾ ನನಗಿರಲಿ' ಎಂದು ಬರೆದುಕೊಂಡಿದ್ದಾರೆ.