ಯಶಸ್ಸಿನ ಬಳಿಕವೂ ಬದಲಾಗದ ಅರ್ಜುನ್ ಮಾತುಗಳು

Druva Sarja Radhika
ಎಪಿ ಅರ್ಜುನ್ ನಿರ್ದೇಶನದ 'ಅದ್ದೂರಿ' ಪ್ರದರ್ಶನ 75 ದಿನಗಳ ಸಮೀಪ ಬಂದು ನಿಂತಿದೆ. ಚಿತ್ರವು ಈ ವರ್ಷದ ಸೂಪರ್ ಹಿಟ್ ಚಿತ್ರಗಳ ಪಟ್ಟಿಗೆ ಸೇರಿರುವುದು ಕನ್ನಡ ಸಿನಿ ಪ್ರೇಕ್ಷಕರಿಗೆ ಹಾಗೂ ಕನ್ನಡ ಸಿನಿಮಾ ಉದ್ಯಮಕ್ಕೆ ಹೆಮ್ಮೆಯ ವಿಷಯ. ಹೊಸ ನಾಯಕನಟ ಹಾಗೂ ತೀರಾ ಅನುಭವಿ ಅಲ್ಲದ ನಿರ್ದೇಶಕರ ಸಂಗಮದಲ್ಲಿ ಮೂಡಿ ಬಂದ 'ಅದ್ದೂರಿ', ಈ ಮಟ್ಟಿಗೆ ಯಶಸ್ವಿಯಾಗಿದ್ದು ನಿಜಕ್ಕೂ ಗ್ರೇಟ್. ಅಂದಹಾಗೆ ಈ ಚಿತ್ರದ ಹೀರೋ ಧ್ರುವ ಸರ್ಜಾ, ನಾಯಕಿ ರಾಧಿಕಾ ಪಂಡಿತ್.

ಚಿತ್ರದ ಬಿಡುಗಡೆ ವಿಳಂಬವಾದಾಗ ನಿರ್ದೇಶಕ ಅರ್ಜುನ್ ಬಗ್ಗೆ ನಿರ್ಮಾಪಕ ಶಂಕರ ರೆಡ್ಡಿ ಅಸಮಾಧಾನ ತೋಡಿಕೊಂಡ ವರದಿಗಳು ಬಂದಿದ್ದವು. ಆದರೆ ಅದೊಂದು ಗಾಸಿಪ್ ಎಂದೇ ನಂತರ ತೇಲಿಹೋಯ್ತು. ನಿಜವಾಗಿಯೂ 'ಅದ್ದೂರಿ' ನಿರ್ಮಾಪಕರು ಹಾಗೂ ನಿರ್ದೇಶಕರ ನಡುವೆ ಯಾವುದೇ ವಿವಾದಗಳು ಕೇಳಿ ಬಂದಿಲ್ಲ. ಬಿಡುಗಡೆ ನಂತರವಂತೂ ಚಿತ್ರದ ಬಗ್ಗೆ ಎಲ್ಲೆಡೆ ಒಳ್ಳೆಯ ಮಾತುಗಳು ಕೇಳಿ ಬಂದು ಚಿತ್ರ ಯಶಸ್ವಿ ಸಾಲಿಗೆ ಸೇರಿದ್ದಾಯ್ತು.

ಈಗ ಚಿತ್ರ ಯಶಸ್ಸು ಕಂಡಿದ್ದಾಗಿದೆ. 50 ದಿನಗಳನ್ನು ಪೂರೈಸಿ 75 ರ ಗಡಿಗೆ ಕಾಲಿಟ್ಟಿದೆ. ಹೀಗಿರುವಾಗ ನಿರ್ಮಾಪಕರು ಮತ್ತು ನಿರ್ದೇಶಕರ ಮಧ್ಯೆ ಇರುವ ಸಂಬಂಧ ಹಾಗೂ ಅವರಿಬ್ಬರ ಮನಸ್ಥಿತಿ ಬಗ್ಗೆ ಸಹಜವಾದ ಕುತೂಹಲ ಎಲ್ಲರಲ್ಲಿದೆ. ಅದಕ್ಕೆ ಉತ್ತರವೂ ಸಿಕ್ಕಿದೆ. ನಿರ್ಮಾಪಕ ಶಂಕರ್ ರೆಡ್ಡಿ ಹಾಗೂ ನಿರ್ದೇಶಕ ಎಪಿ ಅರ್ಜುನ್ ಇಬ್ಬರೂ ಈ ಬಗ್ಗೆ ಮಾತನಾಡಿದ್ದಾರೆ.

ಈ ಬಗ್ಗೆ ನಿರ್ದೇಶಕ ಅರ್ಜುನ್ "ಅದ್ದೂರಿ ಕಥೆಯನ್ನು ಕನಿಷ್ಟ ಇಪ್ಪತ್ತು ಮಂದಿ ನಿರ್ಮಾಪಕರಿಗೆ ಹೇಳಿದ್ದೆ. ಅವರಲ್ಲಿ ಪರವಾಗಿಲ್ಲ ಮಾಡಬಹುದು ಎಂದು ಹೇಳಿ ಮೂರ್ನಾಲ್ಕು ಮಂದಿ ಮಾತ್ರ ಮುಂದೆ ಬಂದಿದ್ದರು. ಆದರೆ ಕೊನೆಗೆ ಅವರೂ ಹಿಂದೆ ಸರಿದಾಗ ತುಂಬಾ ನೋವಾಗಿತ್ತು. ಹೊಸ ಹುಡುಗನನ್ನು ಹೀರೋ ಮಾಡಿಕೊಂಡಿದ್ದೇನೆ ಎಂದು ಗೊತ್ತಾಗಿದ್ದೇ ತಡ, ಎಲ್ಲರೂ ಒಬ್ಬೊಬ್ಬರಾಗಿ ಹಿಂದೆ ಸರಿದುಬಿಟ್ಟರು.

ಅಂತ ನಿಸ್ಸಹಾಯಕ ಸ್ಥಿತಿಯಲ್ಲಿ ನಿರ್ಮಾಪಕ ಶಂಕರ್ ರೆಡ್ಡಿ ನನ್ನ ಮೇಲೆ ವಿಶ್ವಾಸವಿಟ್ಟು ನಿರ್ಮಾಣಕ್ಕೆ ಮುಂದಾದರು. ನಡುವಲ್ಲಿ ಸಾಕಷ್ಟು ವಿಘ್ನಗಳು ಬಂದವು. ನಿರ್ಮಾಪಕರ ತಂದೆ ತೀರಿಕೊಂಡುಬಿಟ್ಟರು. ಆ ಕಾರಣಕ್ಕೆ ಆರು ತಿಂಗಳು ವಿಳಂಬವಾಯ್ತು. ಚಿತ್ರದ ತಂತ್ರಜ್ಞರಿಗೆ ಹಣ ಬಾಕಿ ಉಳಿಸಿಕೊಂಡು ಅದೇ ಹಣದಲ್ಲಿ ಚಿತ್ರೀಕರಣ ಮುಗಿಸುವ ಅನಿವಾರ್ಯತೆ ಎದುರಾಗಿತ್ತು.

ಈಗ ಸಿನಿಮಾ ಗೆದ್ದಿದೆ. ಎಲ್ಲರಿಗೂ ಸಂತೋಷವಾಗಿದೆ. ನನ್ನನ್ನೇ ನಂಬಿಕೊಂಡು ಈ ಸಿನಿಮಾಗೆ ಹಣ ಹೂಡಿದ ನಿರ್ಮಾಪಕರಿಗೆ ನನ್ನಿಂದ ನಷ್ಟವಾಗಲಿಲ್ಲ, ಅಷ್ಟ ಸಾಕು" ಎಂದು ತಮ್ಮ ಸಮಾಧಾನ ಹಂಚಿಕೊಂಡಿದ್ದಾರೆ. ಈ ಚಿತ್ರದ ನಂತರ ನಿರ್ದೇಶಕ ಅರ್ಜುನ್ ಅವರ ಸಂಭಾವನೆಯೂ ಸಹಜವಾಗಿ ಆಕಾಶದ ಕಡೆ ಮುಖ ಮಾಡಿದೆ ಎನ್ನಲಾಗುತ್ತಿದೆ.

ಇನ್ನು ಈ ಕುರಿತು ಮಾತನಾಡಿರುವ ನಿರ್ಮಾಪಕ ಶಂಕರ್ ರೆಡ್ಡಿ "ಲಿಫ್ಟ್ ಕೊಡ್ಲಾ ಚಿತ್ರದಿಂದ ನನಗೆ ದೊಡ್ಡ ನಷ್ಟವಾಯ್ತು. ಆ ಕಾರಣಕ್ಕೇ ಅದ್ದೂರಿಗೆ ಹಣದ ತೊಂದರೆಯಾಯ್ತು. ಅಂತೂ ಅದ್ದೂರಿ ಚಿತ್ರ ನನ್ನ ಕೈಬಿಡಲಿಲ್ಲ. ಮೊದಲ ವಾರದಲ್ಲೇ ನಾನು ಹಾಕಿದ ಬಂಡವಾಳ ನನ್ನ ಕೈಸೇರಿದಾಗ ನನಗಾದ ಸಂತೋಷ ಅಷ್ಟಿಷ್ಟಲ್ಲ" ಎಂದಿದ್ದಾರೆ. ಚಿತ್ರ ಯಶಸ್ವಿಯಾದ ನಂತರವೂ ಅದ್ದೂರಿ ಚಿತ್ರತಂಡದಲ್ಲಿ ಭಿನ್ನಾಭಿಪ್ರಾಯವಿಲ್ಲ ಎಂಬುದಕ್ಕೆ ಇಷ್ಟು ಸಾಕಲ್ಲವೇ? (ಒನ್ ಇಂಡಿಯಾ ಕನ್ನಡ)

More from Filmibeat

English summary
AP Arjun directed movie 'Addhuri' recorded a Grand Success in Sandalwood. Now also, director Arjun and Producer Shankar Reddy are in close relationship is which is very rare case in now a days. Both are gave respect each other after the Success too. 
 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X