Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ವಿಜಯ್ ದೇಹದಿಂದ 2 ಕಿಡ್ನಿ, 2 ಕಣ್ಣು, ಲಿವರ್ ದಾನ
ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯವಾಗಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಸೋಮವಾರ ರಾತ್ರಿ 8.20 ಸಮಯಕ್ಕೆ ಮಾಧ್ಯಮದ ಜೊತೆ ಮಾತನಾಡಿದ ನ್ಯೂರೋ ಸರ್ಜನ್ ಅರುಣ್ ನಾಯಕ್ ಅಪ್ನಿಯಾ ಪರೀಕ್ಷೆಯಲ್ಲಿ ಎಲ್ಲವೂ ಪಾಸಿಟಿವ್ ಬಂದಿದೆ, 9 ಗಂಟೆಯ ನಂತರ ಅಂಗಾಂಗ ದಾನ ಪ್ರಕ್ರಿಯೆ ಆರಂಭ ಮಾಡುತ್ತೇವೆ ಎಂದು ತಿಳಿಸಿದರು.
ಅಂಗಾಂಗ ದಾನಕ್ಕೆ ಸಂಬಂಧಿಸಿದಂತೆ ಜೀವ ಸಾರ್ಥಕತೆ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದು, ಪ್ರಕ್ರಿಯೆ ಆರಂಭಿಸಿದೆ. ಸಂಚಾರಿ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್ ಹಾಗೂ ಹೃದಯದ ವ್ಯಾಲ್ಸ್ ದಾನ ಮಾಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆಗೆ ಆಗಮಿಸಿದ 'ಜೀವ ಸಾರ್ಥಕತೆ' ತಂಡ; ಅಂಗಾಂಗ ದಾನಕ್ಕೆ ವಿಜಯ್ ಪರೀಕ್ಷೆ
ಅಂಗಾಂಗ ದಾನ ಮಾಡುವ ಪ್ರಕ್ರಿಯೆಗೆ ಕುಟುಂಬದವರು ಒಪ್ಪಿಗೆ ಪಡೆಯಲಾಗಿದೆ. ಮಂಗಳವಾರ ಬೆಳಗ್ಗೆವರೆಗೂ ಈ ಪ್ರಕ್ರಿಯೆ ನಡೆಯಲಿದ್ದು, ಆನಂತರ ಪಾರ್ಥಿವ ಶರೀರವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ವೆಂಟಿಲೇಟರ್ ಬೆಂಬಲದಿಂದ ಉಸಿರಾಡುತ್ತಿರುವ ವಿಜಯ್ ಆರೋಗ್ಯ ಸ್ಥಿತಿ ಯಥಾವತ್ತಾಗಿದೆ. ಆದರೆ ಮೆದುಳು ನಿಷ್ಕ್ರಿಯಗೊಂಡಿದ್ದು, ಅಧಿಕೃತವಾಗಿ ನಿಧನ ಎಂದು ಇನ್ನೂ ವೈದ್ಯರು ಪ್ರಕಟಿಸಿಲ್ಲ.
Recommended Video
ಇನ್ನು ನಿರ್ದೇಶಕ ಮಂಸೋರೆ ಹಾಗೂ ಕಡೂರು ಕ್ಷೇತ್ರದ ಮಾಜಿ ಶಾಸಕ ವೈಎಸ್ವಿ ದತ್ತಾ ಮಾಧ್ಯಮಗಳ ಜೊತೆ ಮಾತನಾಡಿ, ''ಸಂಚಾರಿ ವಿಜಯ್ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ಬೆಳಗ್ಗೆ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು, ಮಧ್ಯಾಹ್ನದ ವೇಳೆ ಹುಟ್ಟೂರಾದ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು'' ಎಂದು ಮಾಹಿತಿ ನೀಡಿದ್ದಾರೆ.