Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ನಿಯಮ ಉಲ್ಲಂಘನೆ: ದರ್ಶನ್ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ
ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ನಟ ದರ್ಶನ್ ವಿರುದ್ಧ ಹೈಕೋರ್ಟ್ನಲ್ಲಿ ಅರ್ಜಿ ದಾಖಲಿಸಲಾಗಿದ್ದು, ವಿಚಾರಣೆ ಇನ್ನಷ್ಟೆ ನಡೆಯಬೇಕಿದೆ.
Recommended Video
ದರ್ಶನ್ ಅವರು ಆಷಾಢದ ಮೂರನೇ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಅಸಲಿಗೆ ದೇವಾಲಯದ ಪ್ರವೇಶವನ್ನು ಕೊರೊನಾ ಕಾರಣಕ್ಕೆ ನಿರ್ಭಂಧಿಸಲಾಗಿತ್ತು. ಆ ಸಮಯದಲ್ಲಿ ದರ್ಶನ್ ನಿಯಮ ಉಲ್ಲಂಘನೆ ಮಾಡಿದ್ದರು. ಆಗಲೇ ಈ ವಿಷಯ ಚರ್ಚೆಯಾಗಿತ್ತು.
ದರ್ಶನ್ ವಿಷಯ ಕೆದಕಿ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಕಾರ್ಪೊರೇಟರ್
ಇದೀಗ ದರ್ಶನ್ ಅವರೂ ಸೇರಿದಂತೆ ಕೆಲವು ಕೆಲವು ರಾಜಕೀಯ ಗಣ್ಯರ ಮೇಲೆ ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆಂದು ವಕೀಲೆ ಗೀತಾ ಮಿಶ್ರಾ ಎಂಬುವರು ಹೈಕೋರ್ಟ್ನಲ್ಲಿ ಅರ್ಜಿ ಹೂಡಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಇವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ವಕೀಲೆ ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.
ಹಲವರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ
ದರ್ಶನ್, ಸಂಸದೆ ಶೋಭಾ ಕರಂದ್ಲಾಜೆ, ಅಬಕಾರಿ ಸಚಿವ ನಾಗೇಶ್, ಶಾಸಕ ಎಂ.ಕೆ.ಸೋಮಶೇಖರ್ ಇನ್ನೂ ಹಲವರು ಕೊರೊನಾ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂದು ವಕೀಲೆ ಗೀತಾ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ದಾಖಲಿಸಿದ್ದಾರೆ.
ಶೋಭಾ ಕರಂದ್ಲಾಜೆ ಸಹ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದರು
ದರ್ಶನ್ ಚಾಮುಂಡೇಶ್ವರಿ ದೇವಾಲಯಕ್ಕೆ ಹೋದ ಬಳಿಕ ಶೋಭಾ ಕರಂದ್ಲಾಜೆ ಸಹ ಚಾಮೆಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ಬಗ್ಗೆ ಕೆಲವು ಸ್ಥಳೀಯ ಕಾರ್ಪೊರೇಟರ್ಗಳು ಸಹ ಆಕ್ಷೇಪ ವ್ಯಕ್ತಪಡಿಸಿದ್ದರು.
ಆಷಾಢ ಶುಕ್ರವಾರ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ನಟ ದರ್ಶನ್
ಸಚಿವ ನಾಗೇಶ್ ಪಾರ್ಟಿ ಮಾಡಿದ್ದರು: ಆರೋಪ
ಇನ್ನು ಸಚಿವ ನಾಗೇಶ್, ತಮ್ಮ ಬೆಂಬಲಿಗನ ಅಂಗಡಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಲ್ಲದೆ, ಜನರನ್ನು ಸೇರಿಸಿಕೊಂಡು ಸಾಮಾಜಿಕ ಅಂತರ ಮರೆತು ಪಾರ್ಟಿ ಮಾಡಿದ್ದಾರೆ ಎಂದು ಗೀತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ದುಬಾರಿ ಕಾರು ಬಿಟ್ಟು ರೈತ ಮಿತ್ರ ಟ್ರ್ಯಾಕ್ಟರ್ ಓಡಿಸುತ್ತಿರುವ ಡಿ ಬಾಸ್ ದರ್ಶನ್
ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ
ಜನ ಸಾಮಾನ್ಯರಿಗೊಂದು ನಿಯಮ ಹಾಗೂ ಪ್ರಭಾವಿಗಳಿಗೊಂದು ನಿಯಮ ಎಂಬಂತೆ ಭಾವಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ ಕೈಗೊಳ್ಳುವಂತೆ ಅರ್ಜಿದಾರರ ಮನವಿ ಮಾಡಿದ್ದಾರೆ.
ನಿಜವಾದ ರೌಡಿಗಳನ್ನು ಸಿನಿಮಾದಲ್ಲಿ ಹಾಕಿಕೊಂಡು ಪ್ರೇಮ್ ಪಟ್ಟ ಕಷ್ಟ ಅಷ್ಟಿಷ್ಟಲ್ಲ!