Don't Miss!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏಪ್ರಿಲ್ 16ಕ್ಕೆ ದರ್ಶನ್ ಮತ್ತು ಯಶ್ ಒಟ್ಟಿಗೆ ಪ್ರಚಾರ
Recommended Video
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ಜೋಡೆತ್ತುಗಳು ಖ್ಯಾತಿಯ ನಟ ದರ್ಶನ್ ಮತ್ತು ಯಶ್ ಇಬ್ಬರು ಪ್ರತ್ಯೇಕವಾಗಿ ಮತಯಾಚನೆ ಮಾಡ್ತಿದ್ದಾರೆ. ಇಬ್ಬರು ಒಟ್ಟಿಗೆ ಪ್ರಚಾರ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ.
ಏಪ್ರಿಲ್ 16ಕ್ಕೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ. ಇನ್ನು ಮೂರು ದಿನ ಮಾತ್ರ ಬಾಕಿಯಿದೆ. ಎರಡು ದಿನ ಬೇರೆ ಬೇರೆಯಾಗಿಯೇ ಮತಭೇಟೆ ಮಾಡುವ ಜೋಡೆತ್ತುಗಳು ಏಪ್ರಿಲ್ 16 ರಂದು ಕೊನೆಯ ದಿನ ಒಟ್ಟಿಗೆ ಪ್ರಚಾರ ಮಾಡ್ತಾರೆ. ಸುಮಲತಾ, ಅಭಿಷೇಕ್, ದರ್ಶನ್, ಯಶ್ ನಾಲ್ಕು ಜನರು ಒಂದೇ ವಾಹನದಲ್ಲಿ ಜಾಥ ಹಮ್ಮಿಕೊಂಡಿದ್ದಾರೆ.
'ಮಾಯಾಂಗನೆ ಸುಮಲತಾ' ಟೀಕೆಗೆ ರಾಕಿಂಗ್ ಸ್ಟಾರ್ ಫುಲ್ ಗರಂ
ಇಬ್ಬರು ಬೇರೆ ಬೇರೆ ಪ್ರಚಾರ ಮಾಡ್ಬೇಕು ಎಂಬುವುದು ಮೊದಲೇ ನಿರ್ಧರಿಸಲಾಗಿತ್ತು. ಸಮಯವಕಾಶ ಕಡಿಮೆ ಇರುವುದರಿಂದ ಎಲ್ಲರೂ ಒಟ್ಟಿಗೆ ಪ್ರಚಾರ ಮಾಡಿದ್ರೆ, ಮಂಡ್ಯ ಪೂರ್ತಿ ಜನರನ್ನ ಸೆಳೆಯುವುದು ಕಷ್ಟವಾಗುತ್ತೆ. ಹಾಗಾಗಿ, ನಾಲ್ಕು ಜನ ನಾಲ್ಕು ದಿಕ್ಕಿನಲ್ಲಿ ಮತಯಾಚನೆ ಮಾಡುವುದರಿಂದ ಅನುಕೂಲವಾಗುತ್ತೆ ಎಂದು ಪೂರ್ವನಿಯೋಜಿತವಾಗಿ ಯೋಜನೆ ಹಾಕಲಾಗಿತ್ತು.
ಅದರಂತಯೇ ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್ ಪೇಟೆ, ಕೆ.ಆರ್ ನಗರ, ಪಾಂಡವಪುರದಲ್ಲಿ ದರ್ಶನ್ ಮತ್ತು ಯಶ್ ಇಬ್ಬರು ಪ್ರಚಾರ ಮಾಡಿದ್ದಾರೆ.
ಮಂಡ್ಯ ಪ್ರಚಾರದ ವೇಳೆ ಡೈಲಾಗ್ ಅರ್ಧಕ್ಕೆ ನಿಲ್ಲಿಸಿದ ದರ್ಶನ್, ಕಾರಣವೇನು?
ಒಟ್ನಲ್ಲಿ ಇನ್ನು ಎರಡು ದಿನ ಜೋಡೆತ್ತುಗಳು ಪ್ರತ್ಯೇಕವಾಗಿಯೇ ಮತಯಾಚನೆ ಮಾಡಲಿದ್ದು, ಕೊನೆಯ ದಿನ ಒಟ್ಟಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.