Don't Miss!
- News ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏಪ್ರಿಲ್ 16ಕ್ಕೆ ದರ್ಶನ್ ಮತ್ತು ಯಶ್ ಒಟ್ಟಿಗೆ ಪ್ರಚಾರ
Recommended Video
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ಜೋಡೆತ್ತುಗಳು ಖ್ಯಾತಿಯ ನಟ ದರ್ಶನ್ ಮತ್ತು ಯಶ್ ಇಬ್ಬರು ಪ್ರತ್ಯೇಕವಾಗಿ ಮತಯಾಚನೆ ಮಾಡ್ತಿದ್ದಾರೆ. ಇಬ್ಬರು ಒಟ್ಟಿಗೆ ಪ್ರಚಾರ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ.
ಏಪ್ರಿಲ್ 16ಕ್ಕೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನ. ಇನ್ನು ಮೂರು ದಿನ ಮಾತ್ರ ಬಾಕಿಯಿದೆ. ಎರಡು ದಿನ ಬೇರೆ ಬೇರೆಯಾಗಿಯೇ ಮತಭೇಟೆ ಮಾಡುವ ಜೋಡೆತ್ತುಗಳು ಏಪ್ರಿಲ್ 16 ರಂದು ಕೊನೆಯ ದಿನ ಒಟ್ಟಿಗೆ ಪ್ರಚಾರ ಮಾಡ್ತಾರೆ. ಸುಮಲತಾ, ಅಭಿಷೇಕ್, ದರ್ಶನ್, ಯಶ್ ನಾಲ್ಕು ಜನರು ಒಂದೇ ವಾಹನದಲ್ಲಿ ಜಾಥ ಹಮ್ಮಿಕೊಂಡಿದ್ದಾರೆ.
'ಮಾಯಾಂಗನೆ ಸುಮಲತಾ' ಟೀಕೆಗೆ ರಾಕಿಂಗ್ ಸ್ಟಾರ್ ಫುಲ್ ಗರಂ
ಇಬ್ಬರು ಬೇರೆ ಬೇರೆ ಪ್ರಚಾರ ಮಾಡ್ಬೇಕು ಎಂಬುವುದು ಮೊದಲೇ ನಿರ್ಧರಿಸಲಾಗಿತ್ತು. ಸಮಯವಕಾಶ ಕಡಿಮೆ ಇರುವುದರಿಂದ ಎಲ್ಲರೂ ಒಟ್ಟಿಗೆ ಪ್ರಚಾರ ಮಾಡಿದ್ರೆ, ಮಂಡ್ಯ ಪೂರ್ತಿ ಜನರನ್ನ ಸೆಳೆಯುವುದು ಕಷ್ಟವಾಗುತ್ತೆ. ಹಾಗಾಗಿ, ನಾಲ್ಕು ಜನ ನಾಲ್ಕು ದಿಕ್ಕಿನಲ್ಲಿ ಮತಯಾಚನೆ ಮಾಡುವುದರಿಂದ ಅನುಕೂಲವಾಗುತ್ತೆ ಎಂದು ಪೂರ್ವನಿಯೋಜಿತವಾಗಿ ಯೋಜನೆ ಹಾಕಲಾಗಿತ್ತು.
ಅದರಂತಯೇ ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್ ಪೇಟೆ, ಕೆ.ಆರ್ ನಗರ, ಪಾಂಡವಪುರದಲ್ಲಿ ದರ್ಶನ್ ಮತ್ತು ಯಶ್ ಇಬ್ಬರು ಪ್ರಚಾರ ಮಾಡಿದ್ದಾರೆ.
ಮಂಡ್ಯ ಪ್ರಚಾರದ ವೇಳೆ ಡೈಲಾಗ್ ಅರ್ಧಕ್ಕೆ ನಿಲ್ಲಿಸಿದ ದರ್ಶನ್, ಕಾರಣವೇನು?
ಒಟ್ನಲ್ಲಿ ಇನ್ನು ಎರಡು ದಿನ ಜೋಡೆತ್ತುಗಳು ಪ್ರತ್ಯೇಕವಾಗಿಯೇ ಮತಯಾಚನೆ ಮಾಡಲಿದ್ದು, ಕೊನೆಯ ದಿನ ಒಟ್ಟಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.