Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಅಪೂರ್ವ ಕಾಸರವಳ್ಳಿ
ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರ ಪುತ್ರ ಅಪೂರ್ವ ಕಾಸರವಳ್ಳಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬೆಂಗಳೂರು ಮೂಲದ ನೃತ್ಯಗಾರ್ತಿ ವಂದನಾ ಸುಪ್ರಿಯಾ ಅವರ ಜೊತೆ ನಿನ್ನೆ (ಏಪ್ರಿಲ್ 17) ಸಪ್ತಪದಿ ತುಳಿದಿದ್ದಾರೆ.
ಯಲಹಂಕದ ಬಳಿಯಿರುವ ರಾಯಲ್ ಆರ್ಕಿಡ್ ರೆಸಾರ್ಟ್ ಹಾಗೂ ಕನ್ವೆಕ್ಷನ್ ಹಾಲ್ ನಲ್ಲಿ ಅಪೂರ್ವ ಮತ್ತು ವಂದನಾ ಅವರ ವಿವಾಹ ಮಹೋತ್ಸವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು, ಕುಟುಂಬಸ್ಥರು, ಹಿರಿಯರು, ರಾಜಕೀಯ ವ್ಯಕ್ತಿಗಳು, ಚಲನಚಿತ್ರ ಗಣ್ಯರು ಭಾಗಿಯಾಗಿದ್ದರು.
ಅಪೂರ್ವ ಮತ್ತು ವಂದನಾ ಅವರು ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ವೀರಪ್ಪ ಮೋಯ್ಲಿ, ನಟಿ ಗಿರಿಜಾ ಲೋಕೇಶ್, ಜಯಮಾಲ, ವಿನಯ ಪ್ರಸಾದ್, ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು, ನಟ ಪ್ರಕಾಶ್ ರೈ, ರಮೇಶ್ ಅರವಿಂದ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುಂದರ್ ರಾಜ್, ರಮೇಶ್ ಭಟ್ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾಗಿದ್ದು, ನವ ದಂಪತಿಗಳಿಗೆ ಶುಭಕೋರಿದರು.
ವೃತ್ತಿಯಲ್ಲಿ ಚಲನಚಿತ್ರ ನಿರ್ದೇಶಕರಾಗಿರುವ ಅಪೂರ್ವ ಕಾಸರವಳ್ಳಿ ಅವರು 'ನಿರುತ್ತರ' ಚಿತ್ರವನ್ನ ನಿರ್ದೇಶನ ಮಾಡಿದ್ದರು. ಹಾಗೂ ತಂದೆ ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಕೂರ್ಮಾವತಾರ' ಮತ್ತು ದ್ವೀಪಾ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು.