Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾವು ನಿರ್ಗತಿಕರಲ್ಲ, ಪ್ರೇಮ್ ವಿರುದ್ಧ ಎ.ಆರ್ ಬಾಬು ಆಕ್ರೋಶ
ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿನಯದ ದಿ ವಿಲನ್ ಚಿತ್ರದ ಟೀಸರ್ ಇದೇ ತಿಂಗಳ ಜೂನ್ 28 ರಂದು ಬಿಡುಗಡೆ ಆಗುತ್ತಿದೆ. ಟೀಸರ್ ನೋಡಲು 500 ರೂಪಾಯಿ ಟಿಕೆಟ್ ಕೂಡ ಮಾಡಲಾಗಿದೆ. ಟಿಕೆಟ್ ದರದಿಂದ ಬರುವ ಹಣವನ್ನು ಕಷ್ಟದಲ್ಲಿರುವ ನಿರ್ದೇಶಕರಿಗೆ ನೀಡುವುದಾಗಿ ನಟ ನಿರ್ದೇಶಕ ಪ್ರೇಮ್ ನಿನ್ನೆ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡಿದ್ದರು.
ಲೈವ್ ನಲ್ಲಿ ಮಾತನಾಡುವಾಗ ನಿರ್ದೇಶಕ ಪ್ರೇಮ್, ಕನ್ನಡ ಸಿನಿಮಾರಂಗದಲ್ಲಿ ನಿರ್ಗತಿಕರಾಗಿರುವ ನಿರ್ದೇಶಕರಿಗೆ ಸಹಾಯ ಮಾಡಲು ಈ ಆಲೋಚನೆ ಮಾಡಿದ್ದೇವೆ. ಎ ಟಿ ರಘು ಹಾಗೂ ಎ ಆರ್ ಬಾಬು ರಂತಹ ಸಾಕಷ್ಟು ಜನರು ನಿರ್ಗತಿಕರಿದ್ದಾರೆ. ಅವರಿಗೆ ನಮ್ಮದೊಂದು ಸಣ್ಣ ಸಹಾಯ ಎಂದಿದ್ದರು.
ಪ್ರೇಮ್ ವಿರುದ್ಧ ಎ.ಆರ್ ಬಾಬು ಆಕ್ರೋಶ @directorprems @premsthevillain @KicchaSudeep pic.twitter.com/YBvQVsOGyn
— Kannada Filmibeat (@FilmibeatKa) June 23, 2018
ಸದ್ಯ ನಿರ್ಗತಿಕರು ಎನ್ನುವ ಮಾತೇ ಎ.ಆರ್ ಬಾಬು ಆಕ್ರೋಶ ಕಾರಣವಾಗಿದೆ. ಪ್ರೇಮ್ ನಿರ್ಗತಿಕರು ಎಂದು ಹೇಳಿದ್ದು ಸರಿ ಅಲ್ಲ. ಕನ್ನಡ ನಿರ್ದೇಶಕರಿಗೆ ಸಹಾಯ ಮಾಡುವ ಅವರ ಆಲೋಚನೆಗೆ ನಾನು ಸಂತಸ ವ್ಯಕ್ತ ಪಡಿಸುತ್ತೇನೆ. ಆದರೆ ನಿರ್ಗತಿಕರು ಯಾರು? ನಮಗಾಗಿ ವಾಣಿಜ್ಯ ಮಂಡಳಿ ಇದೆ. ನಿರ್ಮಾಕರ ಸಂಘ ಇದೆ.
ದೊಡ್ಡ ನಿರ್ದೇಶಕರಾಗಿರುವ ಪ್ರೇಮ್ ಈ ರೀತಿ ಮಾಡುವುದು ಸರಿಯಲ್ಲ ಎಂದು ಎ ಆರ್ ಬಾಬು ಹೇಳಿಕೆ ಕೊಟ್ಟಿದ್ದಾರೆ. ಅದಷ್ಟೇ ಅಲ್ಲದೆ ಪ್ರೇಮ್ ಕ್ಷಮೆ ಕೇಳಬೇಕು ಎಂದಿದ್ದಾರೆ. ಒಟ್ಟಾರೆ ಒಂದು ಒಳ್ಳೆ ಕೆಲಸ ಮಾಡುವಾಗ ನೂರಾರು ತೊಂದರೆ ಎನ್ನುವಂತೆ, ಪ್ರೇಮ್ ಹಾಗೂ ದಿ ವಿಲನ್ ಮಾಡಲು ಹೊರಟಿರುವ ಉತ್ತಮ ಕೆಲಸಕ್ಕೆ ಆರಂಭದಲ್ಲಿಯೇ ವಿಘ್ನ ಉಂಟಾಗಿದೆ.