Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್
ಲಘು ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಎದೆ ನೋವು, ಹೊಟ್ಟೆ ನೋವು, ಬೆನ್ನು ನೋವು ಕಾಣಿಸಿಕೊಂಡ ಹಿನ್ನಲೆ ಅರ್ಜುನ್ ಜನ್ಯ ಕಳೆದ ಭಾನುವಾರ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಅರ್ಜುನ್ ಜನ್ಯ ರವರ ಹೃದಯ 99% ಬ್ಲಾಕ್ ಆಗಿತ್ತು. ಇಂಪೆನ್ಡಿಂಗ್ ಹಾರ್ಟ್ ಅಟ್ಯಾಕ್ ಸ್ಟೇಜ್ ತಲುಪಿದ್ದ ಅರ್ಜುನ್ ಜನ್ಯಗೆ ಬುಧವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಮೈಸೂರಿನ ಆಸ್ಪತ್ರೆ ವೈದ್ಯರು ಆಂಜಿಯೋಗ್ರಾಮ್ ಮತ್ತು ಆಂಜಿಯೋಪ್ಲಾಸ್ಟಿ ಮಾಡಿ, ಹೃದಯಕ್ಕೆ ಸ್ಟೆಂಟ್ ಅಳವಡಿಸಿದ್ದರು.
99% ಬ್ಲಾಕ್ ಆಗಿತ್ತು ಅರ್ಜುನ್ ಜನ್ಯ ಹೃದಯ: ಇನ್ನೆರಡು ಗಂಟೆ ತಡ ಆಗಿದ್ರೆ.?
ಕಳೆದ ಐದು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜನ್ಯ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಎರಡು ತಿಂಗಳುಗಳ ಕಾಲ ಸಂಪೂರ್ಣ ರೆಸ್ಟ್ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ಜನ್ಯ ರಿಯಾಲಿಟಿ ಶೋ ಮತ್ತು ಸಿನಿಮಾ ಕೆಲಸಗಳಿಂದ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.
ಅರ್ಜುನ್ ಜನ್ಯ ಆರೋಗ್ಯದ ಬಗ್ಗೆ ಗುರುವಾರ ಪ್ರತಿಕ್ರಿಯೆ ನೀಡಿದ ವೈದ್ಯರು ''ಅರ್ಜುನ್ ಜನ್ಯ ಹೃದಯ 99% ಬ್ಲಾಕ್ ಆಗಿತ್ತು. ಅದು Impending Heart Attack. ಇನ್ನೇನು 2-4 ಗಂಟೆ ಬಿಟ್ಟಿದ್ದರೆ, ಕೆಟ್ಟ ಪರಿಣಾಮ ಬೀರುತ್ತಿತ್ತು'' ಎಂದರು. ಸದ್ಯ ಚೇತರಿಸಿಕೊಂಡಿರುವ ಅರ್ಜುನ್ ಜನ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜನ್ಯ ಬೇಗ ಗುಣಮುಖರಾಗಲಿ ಎನ್ನುವುದು ಅಭಿಮಾನಿಗಳ ಪ್ರಾರ್ಥನೆ.