Don't Miss!
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಕಿ ಅವಘಡ : ಮಂಗಳೂರು ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಚಿಕಿತ್ಸೆ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂಗೀತ ಕಾರ್ಯಕ್ರಮವೊಂದರಲ್ಲಿ ಆದ ಬೆಂಕಿ ಅವಘಡದಿಂದ ಪಾರಾಗಿದ್ದಾರೆ. ಮಂಗಳೂರಿನ ಮಾಲ್ ಒಂದರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಈ ಒಂದು ಆಸೆ ಈಡೇರಿಲ್ಲ.!
ಕಾರ್ಯಕ್ರಮದಲ್ಲಿ ವೇದಿಕೆಗೆ ಅರ್ಜುನ್ ಜನ್ಯಾ ಬೈಕ್ ಮೇಲೆ ಬರುವ ಪ್ಲಾನ್ ಇತ್ತು. ಅದೇ ರೀತಿ ಬೈಕ್ ಗೆ ಕ್ರೆಕರ್ಸ್ ಅಳವಡಿಸಲಾಗಿತ್ತು. ಆದರೆ ಆಕಸ್ಮಿಕವಾಗಿ ಅದರ ಬೆಂಕಿ ಅರ್ಜುನ್ ಜನ್ಯ ಅವರಿಗೆ ತಾಕಿದೆ. ಈ ಬೆಂಕಿ ಅವಘಡದಿಂದ ಅವರಿಗೆ ಸಣ್ಣ ಪುಟ್ಟ ಗಾಯಗಳಿದ್ದು ಸ್ವಲ್ಪದರಲ್ಲಿ ಅರ್ಜುನ್ ಜನ್ಯ ಪಾರಾಗಿದ್ದಾರೆ. ಅರ್ಜುನ್ ಬೈಕಿನಿಂದ ಇಳಿಯುವ ವೇಳೆ ಕ್ರೆಕರ್ಸ್ ಬೆಂಕಿ ಭುಜಕ್ಕೆ ಮತ್ತು ಕೈಗೆ ತಾಗುಲಿದ ಪರಿಣಾಮ ಸುಟ್ಟ ಗಾಯಗಳಾಗಿವೆ.
ಮಂಗಳೂರಿನ ಹೃದಯ ಭಾಗದಲ್ಲಿರುವ ಫೊರಂ ಫಿಜಾ ಮಾಲ್ ನಲ್ಲಿ ನಿನ್ನೆ ಸಂಜೆ ಮೆಕ್ ಡಾವಲ್ ಕಂಪನಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ನಡೆಯುವ ವೇಳೆ ಈ ಅವಗಡ ಸಂಭವಿಸಿದೆ.
ಇನ್ನು ಇಷ್ಟಾದರೂ ಬೈಕ್ ನಿಂದ ಇಳಿದ ಅರ್ಜುನ್ ಜನ್ಯ ನೇರವಾಗಿ ವೇದಿಕೆಗೆ ಹತ್ತಿ ಹಾಡು ಹಾಡಿ ಸಂಗೀತ ಪ್ರಿಯರನ್ನು ರಂಜಿಸಿದರು. ಜೊತೆಗೆ ತಮ್ಮ ವೃತ್ತಿಪರತೆಯನ್ನು ಮೆರೆದರು. ಕಾರ್ಯಕ್ರಮದ ಬಳಿಕ ಸುಟ್ಟಗಾಯಗಳಿಗೆ ಅರ್ಜುನ್ ಜನ್ಯಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.