Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಚ್ಚಿನ ಹುಡುಗ ಚಿರು ಸರ್ಜಾ ಗೆ ದುಃಖದ ಶ್ರದ್ಧಾಂಜಲಿ ಸಲ್ಲಿಸಿದ ಅರ್ಜುನ್ ಸರ್ಜಾ
ನಟ ಅರ್ಜುನ್ ಸರ್ಜಾ ಮೆಚ್ಚಿನ ಹುಡುಗರು ಧ್ರುವ ಸರ್ಜಾ ಮತ್ತು ಚಿರಂಜೀವಿ ಸರ್ಜಾ. ಅರ್ಜುನ್ ಸರ್ಜಾ ಅವರ ತಂಗಿಯ ಮಕ್ಕಳಾದ ಈ ಇಬ್ಬರ ಬಗ್ಗೆ ವಿಶೇಷ ಪ್ರೀತಿ ಅರ್ಜುನ್ ಸರ್ಜಾಗೆ.
Recommended Video
ಆದರೆ ತಮ್ಮ ಪ್ರೀತಿಯ ಹುಡುಗ ಚಿರಂಜೀವಿ ಸರ್ಜಾ ಪ್ರಾಣ ಬಿಟ್ಟಿದ್ದಾರೆ. ಸಾಯಬಾರದ ವಯಸ್ಸಿನಲ್ಲಿ ಚಿರಂಜೀವಿ ಸರ್ಜಾ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನ ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಮೃತಪಟ್ಟಿದ್ದಾರೆ.
ತಮ್ಮ ನೆಚ್ಚಿನ ಹುಡುಗ ನಿಧನ ಹೊಂದಿದ್ದಕ್ಕೆ ಅರ್ಜುನ್ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ. ಫೇಸ್ಬುಕ್ನಲ್ಲಿ ತಮ್ಮ ಚಿತ್ರವನ್ನು ಬದಲಾಯಿಸಿದ್ದಾರೆ ಅರ್ಜುನ್ ಸರ್ಜಾ.
ಅರ್ಜುನ್ ಸರ್ಜಾ ಅವರು ಫೇಸ್ಬುಕ್ನ ತಮ್ಮ ಅಧಿಕೃತ ಖಾತೆಗೆ ಕಪ್ಪು ಬಣ್ಣವನ್ನು ಡಿಪಿ ಆಗಿ ಬದಲಾಯಿಸಿದ್ದಾರೆ. ಆ ಮೂಲಕ ತಮ್ಮ ಶೋಕವನ್ನು ಅವರು ವ್ಯಕ್ತಪಡಿಸಿದ್ದಾರೆ.
ಅರ್ಜುನ್ ಸರ್ಜಾ ಗೆ ಸಹಾಕರಾಗಿದ್ದರು ಚಿರು
ಚಿರಂಜೀವಿ ಸರ್ಜಾ ತಮ್ಮ ಶಿಕ್ಷಣ ಮುಗಿದ ಬಳಿಕ ನಾಲ್ಕು ವರ್ಷಗಳ ಕಾಲ ಅರ್ಜುನ್ ಸರ್ಜಾ ಅವರಿಗೆ ಸಹಾಯ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಅರ್ಜುನ್ ಸರ್ಜಾ ಅವರು ನಿರ್ದೇಶಿಸಿದ ಹಲವು ಸಿನಿಮಾಗಳಿಗೆ ಸಹಾಯಕರಾಗಿದ್ದರು ಅವರು.
ಪ್ರೇಮ ಬರಹ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು
ಅರ್ಜುನ್ ಸರ್ಜಾ ಕೊನೆಯದಾಗಿ 2018 ರಲ್ಲಿ ನಿರ್ದೇಶಿಸಿದ್ದ 'ಪ್ರೇಮ ಬರಹ' ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದರು. ಧ್ರುವ ಸರ್ಜಾ ಸಹ ಆ ಹಾಡಿನಲ್ಲಿ ಕಾಣಿಸಿಕೊಂಡಿದ್ದರು.
ಶ್ರುತಿ ಹರಿಹರನ್ ವಿವಾದದ ಸಂದರ್ಭ ಬೆಂಬಲ
ಶ್ರುತಿ ಹರಿಹರನ್, ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದಾಗ ಸಹ ಚಿರಂಜೀವಿ ಸರ್ಜಾ ಹಾಗೂ ಧ್ರುವ ಸರ್ಜಾ ಅರ್ಜುನ್ ಸರ್ಜಾ ಅವರ ಬೆಂಬಲಕ್ಕೆ ನಿಂತು, ಶ್ರುತಿ ಹರಿಹರನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದರು.
ಚೆನ್ನೈನಲ್ಲಿದ್ದ ಅರ್ಜುನ್ ಸರ್ಜಾ
ಚೆನ್ನೈನಲ್ಲಿದ್ದ ಅರ್ಜುನ್ ಸರ್ಜಾ, ಚಿರಂಜೀವಿ ಸರ್ಜಾ ಮರಣದ ಸುದ್ದಿ ತಿಳಿಯುತ್ತಿದ್ದಂತೆ ಅಲ್ಲಿಂದ ಹೊರಟಿದ್ದು, ಜೂನ್ 7 ರ ರಾತ್ರಿಯೇ ಬೆಂಗಳೂರು ತಲುಪಲಿದ್ದಾರೆ. ಚಿರು ಅವರ ಅಜ್ಜಿಯೂ ಬೆಂಗಳೂರಿಗೆ ಬರಬೇಕಾಗಿದೆ.
ತುಮಕೂರಿನಲ್ಲಿ ಅಂತ್ಯಕ್ರಿಯೆ
ಅರ್ಜುನ್ ಸರ್ಜಾ ಹಾಗೂ ಚಿರು ಅವರ ಅಜ್ಜಿ ಬಂದ ಬಳಿಕ ಸೋಮವಾರ ಬೆಳಿಗ್ಗೆ 11 ಗಂಟೆಗೆ ತುಮಕೂರಿನ ಮಧುಗಿರಿ ತಾಲ್ಲೂಕಿನ ಜಕ್ಕೇನಹಳ್ಳಿಯ ಫಾರಂ ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಲ್ಲಿಯೇ ಚಿರು ತಾತ ಶಕ್ತಿಪ್ರಸಾದ್ ಅವರ ಅಂತ್ಯಸಂಸ್ಕಾರ ಸಹ ಆಗಿದೆ.