twitter
    For Quick Alerts
    ALLOW NOTIFICATIONS  
    For Daily Alerts

    ಅರ್ಜುನ್ ಸರ್ಜಾ ರಾಜಿ ಆಗಲ್ಲ: ಶ್ರುತಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು.!

    |

    ಸ್ಯಾಂಡಲ್ ವುಡ್ ನಲ್ಲಿ #ಮೀಟೂ ಅಭಿಯಾನ ತಾರಕಕ್ಕೇರಿದೆ. 'ಜೆಂಟಲ್ ಮ್ಯಾನ್' ಎಂದೇ ಗುರುತಿಸಿಕೊಂಡಿರುವ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು.

    ಈ ವಿವಾದ ಜೋರಾಗಿರುವ ಕಾರಣ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದೆ. ರೆಬೆಲ್ ಸ್ಟಾರ್ ಅಂಬರೀಶ್ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ಸಭೆಯಲ್ಲಿ ಹಾಜರ್ ಆಗಲಿದ್ದಾರೆ.

    ಸಭೆಯಲ್ಲಿ ಯಾವುದೇ ಕಾರಣಕ್ಕೂ ರಾಜಿ-ಸಂಧಾನ ಮಾಡಿಕೊಳ್ಳದೇ ಇರಲು ಅರ್ಜುನ್ ಸರ್ಜಾ ತೀರ್ಮಾನ ಮಾಡಿದ್ದಾರೆ. ತಮ್ಮ ಇಮೇಜ್ ಗೆ ಡ್ಯಾಮೇಜ್ ಆಗಿರುವ ಕಾರಣ, ನಟಿ ಶ್ರುತಿ ಹರಿಹರನ್ ವಿರುದ್ಧ ನಟ ಅರ್ಜುನ್ ಸರ್ಜಾ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ. ಮುಂದೆ ಓದಿರಿ...

    5 ಕೋಟಿ ಮಾನನಷ್ಟ ಮೊಕದ್ದಮೆ

    5 ಕೋಟಿ ಮಾನನಷ್ಟ ಮೊಕದ್ದಮೆ

    ನಟಿ ಶ್ರುತಿ ಹರಿಹರನ್ ವಿರುದ್ಧ ಅರ್ಜುನ್ ಸರ್ಜಾ ಕೋರ್ಟ್ ಮೆಟ್ಟಿಲೇರಿದ್ದಾರೆ. ಶ್ರುತಿ ಹರಿಹರನ್ ವಿರುದ್ಧ 5 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ ಅರ್ಜುನ್ ಸರ್ಜಾ. ಸಿವಿಲ್ ಕೋರ್ಟ್ ನಲ್ಲಿ ಕೇಸ್ ದಾಖಲಾಗಿದ್ದು, ಇಂದು ಸಂಜೆ ಅಥವಾ ನಾಳೆ ಅರ್ಜಿ ವಿಚಾರಣೆ ನಡೆಯಲಿದೆ.

    ನನ್ನ ಮಗ ಇಲ್ಲದಿದ್ದಾಗ ಶ್ರುತಿ ಮನೆಗೆ ಬಂದಿದ್ದೇಕೆ.? ಸರ್ಜಾ ತಾಯಿ ಕೆಂಡಾಮಂಡಲನನ್ನ ಮಗ ಇಲ್ಲದಿದ್ದಾಗ ಶ್ರುತಿ ಮನೆಗೆ ಬಂದಿದ್ದೇಕೆ.? ಸರ್ಜಾ ತಾಯಿ ಕೆಂಡಾಮಂಡಲ

    ಬೆಂಗಳೂರಿಗೆ ಬರುತ್ತಿರುವ ಅರ್ಜುನ್ ಸರ್ಜಾ

    ಬೆಂಗಳೂರಿಗೆ ಬರುತ್ತಿರುವ ಅರ್ಜುನ್ ಸರ್ಜಾ

    ಇಂದು ಸಂಜೆ 4 ಗಂಟೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಇದೆ. ಅದರಲ್ಲಿ ಪಾಲ್ಗೊಳ್ಳಲು ಅರ್ಜುನ್ ಸರ್ಜಾ ಬೆಂಗಳೂರಿಗೆ ಬರುತ್ತಿದ್ದಾರೆ. ಈಗಾಗಲೇ ಚೆನ್ನೈನಿಂದ ಅವರು ಹೊರಟ್ಟಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಬರಲಿದ್ದಾರೆ.

    ಶ್ರುತಿ ಆರೋಪದ ಬಗ್ಗೆ ಅನುಮಾನ ಮೂಡಿಸುತ್ತಿದೆ ಈ 6 ಅಂಶಗಳುಶ್ರುತಿ ಆರೋಪದ ಬಗ್ಗೆ ಅನುಮಾನ ಮೂಡಿಸುತ್ತಿದೆ ಈ 6 ಅಂಶಗಳು

    ಸೈಬರ್ ಕ್ರೈಂಗೆ ದೂರು

    ಸೈಬರ್ ಕ್ರೈಂಗೆ ದೂರು

    ತಮ್ಮ ಈಮೇಲ್ ಹಾಗೂ ಟ್ವಿಟ್ಟರ್ ಅಕೌಂಟ್ ಹ್ಯಾಕ್ ಆಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ದೂರು ಕೊಟ್ಟಿದ್ದಾರೆ.

    ಯಾರೂ ಏನೇ ಹೇಳಿದ್ರು ನನ್ನ ಹೋರಾಟ ನಿಲ್ಲಲ್ಲ: 6 ಅಂಶಗಳನ್ನ ಮುಂದಿಟ್ಟ ಶ್ರುತಿಯಾರೂ ಏನೇ ಹೇಳಿದ್ರು ನನ್ನ ಹೋರಾಟ ನಿಲ್ಲಲ್ಲ: 6 ಅಂಶಗಳನ್ನ ಮುಂದಿಟ್ಟ ಶ್ರುತಿ

    2 ಕೋಟಿ ಡಿಮ್ಯಾಂಡ್

    2 ಕೋಟಿ ಡಿಮ್ಯಾಂಡ್

    ಶ್ರುತಿ ಹರಿಹರನ್ ಆಪ್ತ ಎಂದು ಹೇಳಿಕೊಂಡು ಅನಾಮಿಕನೊಬ್ಬ ಅರ್ಜುನ್ ಸರ್ಜಾ ಆಪ್ತರಿಗೆ ಕರೆ ಮಾಡಿ ರಾಜಿ-ಸಂಧಾನ ಮಾಡಿಕೊಳ್ಳಲು 2 ಕೋಟಿ ಡಿಮ್ಯಾಂಡ್ ಇಟ್ಟಿದ್ದನಂತೆ.

    ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಆರೋಪ: ಹಿಂದಿದ್ಯಾ ಷಡ್ಯಂತ್ರ, ಪ್ರತೀಕಾರ.?ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಆರೋಪ: ಹಿಂದಿದ್ಯಾ ಷಡ್ಯಂತ್ರ, ಪ್ರತೀಕಾರ.?

    English summary
    Arjun Sarja files defamation case against Sruthi Hariharan.
    Thursday, October 25, 2018, 14:54
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X