Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಜುನ್ ಸರ್ಜಾ ಹೊಸ ಚಿತ್ರ ಸಂಗೊಳ್ಳಿ ರಾಯಣ್ಣ
ಕನ್ನಡದಲ್ಲಿ ಅವರು ನಟಿಸಲಿರುವ ಚಿತ್ರಕ್ಕೆ 'ಸಂಗೊಳ್ಳಿ ರಾಯಣ್ಣ' ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಜಯಪ್ರದ ನಟಿಸಲಿದ್ದಾರಂತೆ. ಸಂಗೊಳ್ಳಿ ರಾಯಣ್ಣ ಆಗಸ್ಟ್ ತಿಂಗಳಲ್ಲಿ ಸೆಟ್ಟೇರಲಿದೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ. ಪ್ರಸ್ತುತ ಅರ್ಜುನ್ ಸರ್ಜಾ ಕನ್ನಡದಲ್ಲಿ 'ವಾಯುಪುತ್ರ'ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಪ್ರಧಾನ ಪಾತ್ರಗಳಲ್ಲಿ ಅಂದ್ರಿತಾ ರೇ, ಅರ್ಜುನ್ ಸರ್ಜಾ ಸೋದರಳಿಯ ಚಿರಂಜೀವಿ ಮತ್ತು ಅಂಬರೀಶ್ ಕಾಣಿಸಲಿದ್ದಾರೆ.
1984ರಲ್ಲಿ ತೆರೆಕಂಡ 'ಮಳೆ ಬಂತು ಮಳೆ' ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅರ್ಜುನ್ ಬದಲಾಗಿದ್ದರು. ಈ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬುನಿರ್ದೇಶಿಸಿದ್ದರು. ಅರ್ಜುನ್ ಹೆಂಡತಿ ಆಶಾ ರಾಣಿ ಅವರು ಶಿವರಾಜ್ ಕುಮಾರ್ ಜತೆಯಲ್ಲಿ ರಥಸಪ್ತಮಿ ಚಿತ್ರದಲ್ಲಿ ನಟಿಸಿದ್ದರು. ಸಾಲು ಸಾಲು ರೀಮೇಕ್ ಚಿತ್ರಗ ಚಿತ್ರಗಳ ನಡುವೆ ಸ್ವಾತಂತ್ರ ಹೋರಾಟಗಾರ, ಕಿತ್ತೂರಿನ ಹುಲಿ ಸಂಗೊಳ್ಳಿರಾಯಣ್ಣನ ಮತ್ತೊಮ್ಮೆ ಕನ್ನಡ ಬೆಳ್ಳಿ ಪರದೆಗೆ ತರುತ್ತಿರುವುದು ಮೆಚ್ಚತಕ್ಕಂತಹ ವಿಷಯ.
(ದಟ್ಸ್ ಕನ್ನಡ ಚಿತ್ರವಾರ್ತೆ)