Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅರ್ಜುನ್ ಸರ್ಜಾ ಹೊಸ ಚಿತ್ರ ಸಂಗೊಳ್ಳಿ ರಾಯಣ್ಣ
ಕನ್ನಡದಲ್ಲಿ ಅವರು ನಟಿಸಲಿರುವ ಚಿತ್ರಕ್ಕೆ 'ಸಂಗೊಳ್ಳಿ ರಾಯಣ್ಣ' ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಜಯಪ್ರದ ನಟಿಸಲಿದ್ದಾರಂತೆ. ಸಂಗೊಳ್ಳಿ ರಾಯಣ್ಣ ಆಗಸ್ಟ್ ತಿಂಗಳಲ್ಲಿ ಸೆಟ್ಟೇರಲಿದೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ. ಪ್ರಸ್ತುತ ಅರ್ಜುನ್ ಸರ್ಜಾ ಕನ್ನಡದಲ್ಲಿ 'ವಾಯುಪುತ್ರ'ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಪ್ರಧಾನ ಪಾತ್ರಗಳಲ್ಲಿ ಅಂದ್ರಿತಾ ರೇ, ಅರ್ಜುನ್ ಸರ್ಜಾ ಸೋದರಳಿಯ ಚಿರಂಜೀವಿ ಮತ್ತು ಅಂಬರೀಶ್ ಕಾಣಿಸಲಿದ್ದಾರೆ.
1984ರಲ್ಲಿ ತೆರೆಕಂಡ 'ಮಳೆ ಬಂತು ಮಳೆ' ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅರ್ಜುನ್ ಬದಲಾಗಿದ್ದರು. ಈ ಚಿತ್ರವನ್ನು ರಾಜೇಂದ್ರ ಸಿಂಗ್ ಬಾಬುನಿರ್ದೇಶಿಸಿದ್ದರು. ಅರ್ಜುನ್ ಹೆಂಡತಿ ಆಶಾ ರಾಣಿ ಅವರು ಶಿವರಾಜ್ ಕುಮಾರ್ ಜತೆಯಲ್ಲಿ ರಥಸಪ್ತಮಿ ಚಿತ್ರದಲ್ಲಿ ನಟಿಸಿದ್ದರು. ಸಾಲು ಸಾಲು ರೀಮೇಕ್ ಚಿತ್ರಗ ಚಿತ್ರಗಳ ನಡುವೆ ಸ್ವಾತಂತ್ರ ಹೋರಾಟಗಾರ, ಕಿತ್ತೂರಿನ ಹುಲಿ ಸಂಗೊಳ್ಳಿರಾಯಣ್ಣನ ಮತ್ತೊಮ್ಮೆ ಕನ್ನಡ ಬೆಳ್ಳಿ ಪರದೆಗೆ ತರುತ್ತಿರುವುದು ಮೆಚ್ಚತಕ್ಕಂತಹ ವಿಷಯ.
(ದಟ್ಸ್ ಕನ್ನಡ ಚಿತ್ರವಾರ್ತೆ)