Don't Miss!
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- News ಮಹಾರಾಜರು ಬೆಂಗಳೂರು ಅರಮನೆ ಮೈದಾನ ಜಾಗ ಬಿಟ್ಟು ಕೊಡುವಂತೆ ಎಎಪಿ ಆಗ್ರಹ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಕ್ಟೋಬರ್ ನಲ್ಲಿ ಅರ್ಜುನ್ ಸರ್ಜಾ 'ಅಭಿಮನ್ಯು'
ಆಕ್ಷನ್ ಹೀರೋ ಅರ್ಜುನ್ ಸರ್ಜಾ ಅವರು ನಟಿಸಿ, ನಿರ್ದೇಶಿಸಿ ಜೊತೆಗೆ ಕಥೆ ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ಮಾಣ ಮಾಡಿರುವ ಚಿತ್ರ 'ಅಭಿಮನ್ಯು' ಚಿತ್ರದ ಬಗ್ಗೆ ಅವರ ಅಭಿಮಾನಿಗಳು ಸಾಕಷ್ಟು ಕಾತುರರಾಗಿದ್ದಾರೆ. ಈ ಚಿತ್ರ ಇದೀಗ ಸಿದ್ಧವಾಗಿದ್ದು ಅಕ್ಟೋಬರ್ ನಲ್ಲಿ ತೆರೆಕಾಣುತ್ತಿದೆ.
ಇಷ್ಟಕ್ಕೂ ಅಭಿಮನ್ಯು ಚಿತ್ರದ ಕಥೆ ಏನೆಂದರೆ ಭಾರತೀಯ ಶಿಕ್ಷಣ ವ್ಯವಸ್ಥೆ. ಶಿಕ್ಷಣ ಎಂಬ ಚಕ್ರವ್ಯೂಹವನ್ನು ಈ ಅಭಿಮನ್ಯು ಹೇಗೆ ಭೇದಿಸುತ್ತಾನೆ ಎಂಬುದೇ ಚಿತ್ರದ ಕಥಾಹಂದರ. ಮಹಾಭಾರತದ ಅಭಿಮನ್ಯು ಗೆದ್ದಂತೆ ಇಲ್ಲಿನ ಅಭಿಮನ್ಯು ಸೋಲಲ್ಲ ಎನ್ನುತ್ತಾರೆ ಅರ್ಜುನ್ ಸರ್ಜಾ. [ಜೀ ಕನ್ನಡ ಟಿವಿ ಶೋನಲ್ಲಿ ಕಣ್ಣೀರಿಟ್ಟ ಅರ್ಜುನ್ ಸರ್ಜಾ]
ತಮ್ಮ ಚಿತ್ರಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರೇ ಸ್ಫೂರ್ತಿ ಎನ್ನುವ ಸರ್ಜಾ ಅವರು, ನಿಯತಕಾಲಿಕೆಯೊಂದರಲ್ಲಿ ಅವರು ಬರೆದಿದ್ದ ಲೇಖನವೇ ತಾವು ಈ ಚಿತ್ರ ಕೈಗೆತ್ತಿಕೊಳ್ಳಲು ಕಾರಣ ಎನ್ನುತ್ತಾರೆ. ನಮ್ಮ ಶಿಕ್ಷಣ ವ್ಯವಸ್ಥೆ ಬಗ್ಗೆ ಸಾಕಷ್ಟು ಅಧ್ಯಯನವನ್ನೂ ಮಾಡಿ ಕಥೆಗೆ ಒಂದು ಸುಂದರ ಚೌಕಟ್ಟು ಹಾಕಿದ್ದಾರೆ. ಬೆಳ್ಳಿ ತೆರೆಯ ಮೇಲೆ ಪ್ರತಿಯೊಬ್ಬ ಭಾರತೀಯ ನಾಗರೀಕನೂ ನೋಡಲೇ ಬೇಕಾದ ರಿಯಲಿಟಿ ಸಿನೆಮಾ ಇದು ಎನ್ನುತ್ತಾರೆ ಸರ್ಜಾ.
ಕೆ.ಕೆ ಸಂಕಲನ, ಶಶಿಧರ್ ಅಡಪ ಕಲಾನಿರ್ದೇಶನ, ರಾಜುಸುಂದರಂ ನೃತ್ಯ ನಿರ್ದೇಶನ ಹಾಗೂ ಶಿವಾರ್ಜುನ್ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಅರ್ಜುನ್ ಸರ್ಜಾ, ಸುರ್ವಿನ್ ಚಾವ್ಲಾ, ರವಿಕಾಳೆ, ಸಿಮ್ರಾನ್ ಕಪೂರ್, ರಾಹುಲ್ ದೇವ್, ಬಿರಾದಾರ್, ಜಹಂಗೀರ್, ವಿನಯಾಪ್ರಸಾದ್, ಸತೀಶ್ ಮುಂತಾದವರಿದ್ದಾರೆ. (ಫಿಲ್ಮಿಬೀಟ್ ಕನ್ನಡ)