Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ 'ಗೇಮ್' ಶುರು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರು ತೆರೆಯ ಮೇಲೆ ಹೊಸ ಆಟ ಆಡಲು ರೆಡಿಯಾಗಿದ್ದಾರೆ. ಅವರ ಹೊಸ ಚಿತ್ರ 'ಗೇಮ್' ಸೋಮವಾರ (ಫೆ.16) ಅಧಿಕೃತವಾಗಿ ಚಾಲನೆ ಪಡೆದುಕೊಂಡಿದೆ. ಈ ಬಾರಿ 'ಗೇಮ್'ನ ರೂವಾರಿ ಎಎಂಆರ್ ರಮೇಶ್.
ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ 'ಗೇಮ್' ಚಿತ್ರದ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಎಎಂಆರ್ ರಮೇಶ್ ಅವರು ಮಾತನಾಡುತ್ತಾ, ಇದೊಂದು ಮರ್ಡರ್ ಮಿಸ್ಟರಿ ಸಿನಿಮಾ. ನೈಜ ಘಟನೆಗಳ ಆಧಾರವಾಗಿ ಚಿತ್ರವನ್ನು ತೆರೆಗೆ ತರುತ್ತಿದ್ದೇನೆ ಎಂದರು. [ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಹೊಸ ಕನ್ನಡ ಚಿತ್ರ ಪ್ರಕಟ]
ಆದರೆ ಆ ನೈಜ ಘಟನೆಗಳು ಯಾವುವು ಎಂಬುದನ್ನು ಮಾತ್ರ ಅವರು ಬಹಿರಂಗಪಡಿಸಲಿಲ್ಲ. ಈ ಹಿಂದೆ ತಮ್ಮ ಚಿತ್ರಗಳು ವಿವಾದಕ್ಕೊಳಗಾಗಿದ್ದನ್ನು ನೆನೆದ ಅವರು, ಈ ಬಾರಿ ತಾವು ಕಥೆ ಹೇಳಿ ಇನ್ನಷ್ಟು ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಳ್ಳಲು ಇಷ್ಟವಿಲ್ಲ ಎಂದರು.
ಗೇಮ್ ಚಿತ್ರ ಬಿಡುಗಡೆಯಾಗುವವರೆಗೂ ತಮ್ಮ ಚಿತ್ರದ ಕಥೆ ಏನು ಎಂದು ತಾವು ಬಾಯ್ಬಿಡಲ್ಲ. ಎಲ್ಲರೂ ಚಿತ್ರಮಂದಿರಕ್ಕೆ ಬಂದ ಮೇಲಷ್ಟೇ ಕಥೆ ಏನೆಂದು ಗೊತ್ತಾಗುತ್ತದೆ. ಅಲ್ಲಿಯವರೆಗೂ ತಾವು ಚಿತ್ರದ ಕಥೆಯ ಗುಟ್ಟನ್ನು ಬಿಟ್ಟುಕೊಟ್ಟು ಅನಾವಶ್ಯಕ ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳಲ್ಲ ಎಂದರು.
ಗೇಮ್ ಚಿತ್ರೀಕರಣ ಮಾರ್ಚ್ ನಲ್ಲಿ ಆರಂಭವಾಗಲಿದ್ದು, ಮೂವತ್ತು ದಿನಗಳ ಶೆಡ್ಯೂಲ್ ನಲ್ಲಿ ಶೂಟಿಂಗ್ ಮುಗಿಸಿ ಜೂನ್ ವೇಳೆಗೆ ಚಿತ್ರವನ್ನು ತೆರೆಗೆ ತರುವ ಪ್ಲಾನ್ ಮಾಡಿದ್ದಾರೆ ಎಎಂಆರ್ ರಮೇಶ್.
ಸಂದೀಪ್ ಚೌಟ ಅವರ ಸಂಗೀತ ಇರುವ 'ಗೇಮ್' ಚಿತ್ರವು ಮರ್ಡರ್ ಮಿಸ್ಟರಿ ಕಥೆಯನ್ನು ಒಳಗೊಂಡಿದೆ. ಅರ್ಜುನ್ ಜೊತೆ ಶಾಮ್ ಮತ್ತೊಬ್ಬ ನಾಯಕರಾಗಿ ಕಾಣಿಸಲಿದ್ದಾರೆ. ಪ್ರತಿಯೊಬ್ಬರಿಗೂ ತಮ್ಮದೇ ಆದಂತಹ ಅಜೆಂಡಾ ಇರುತ್ತದೆ. ಪ್ರತಿಯೊಬ್ಬರೂ ತಮ್ಮದೇ ಆದಂತಹ ಆಟ ಆಡುತ್ತಿರುತ್ತಾರೆ ಎಂಬ ಕಥಾವಸ್ತುವನ್ನಿಟ್ಟುಕೊಂಡು ಚಿತ್ರವನ್ನು ತೆರೆಗೆ ತರಲಾಗುತ್ತಿದೆ. (ಏಜೆನ್ಸೀಸ್)