Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆನ್ನೈನಲ್ಲಿ ಆಂಜನೇಯ ದೇವಸ್ಥಾನ ನಿರ್ಮಿಸಿದ ಅರ್ಜುನ್ ಸರ್ಜಾ: ಉದ್ಘಾಟನೆಗೆ ಮುಹೂರ್ತ ಫಿಕ್ಸ್
ಕನ್ನಡ ನಟ ಅರ್ಜುನ್ ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಅಪಾರ ಭಕ್ತರು. ಸರ್ಜಾ ಕುಟುಂಬ ಮತ್ತೊಂದು ಮಹತ್ತರ ಕಾರ್ಯ ಮಾಡಿದೆ. ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯ ದೇವಸ್ಥಾನ ನೀಡಿದ್ದಾರೆ. ಅವರ ಕನಸಿನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ಕೆ ಈಗ ದಿನಾಂಕ ಫಿಕ್ಸ್ ಆಗಿದೆ.
Recommended Video
ಚೆನ್ನೈನಲ್ಲಿ ದೇವಸ್ಥಾನ ನಿರ್ಮಿಸುವುದು ಅರ್ಜುನ್ ಸರ್ಜಾ ಅವರ ಅನೇಕ ವರ್ಷದ ಕನಸು. ಇದೀಗ ನನಸಾಗುವ ಸಮಯ ಹತ್ತಿರಬಂದಿದೆ. ಬೃಹತ್ ಆಂಜನೇಯ ವಿಗ್ರಹ ಸ್ಥಾಪಿಸಿದ್ದು, ದೇವಸ್ಥಾನದ ಕೆಲಸ ಸಂಪೂರ್ಣವಾಗಿದೆ. ಇದೀಗ ಉದ್ಘಾಟನೆಗೆ ಸಿದ್ಧವಾಗಿದ್ದು ಅದ್ದೂರಿಯಾಗಿ ಕುಂಭಾಭಿಷೇಕ ನಡೆಯಲಿದೆ.
ಈ ಬಗ್ಗೆ ನಟ ಅರ್ಜುನ್ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಹುದಿನಗಳ ಕನಸು ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಸಂಪೂರ್ಣವಾಗಿದೆ ಎಂದಿದ್ದಾರೆ. ಜುಲೈ 1 ಮತ್ತು 2ರಂದು ಉದ್ಘಾಟನೆ ಕಾರ್ಯ ಇಟ್ಟುಕೊಂಡಿರುವುದಾಗಿ ಸರ್ಜಾ ಬಹಿರಂಗ ಪಡಿಸಿದ್ದಾರೆ. ಮುಂದೆ ಓದಿ...
ಸ್ನೇಹಿತರು, ಕುಟುಂಬದವರನ್ನು ಆಹ್ವಾನಿಸುವ ಆಸೆ ಇತ್ತು
ದೇವಸ್ಥಾನದ ಕುಂಭಾಭಿಷೇಕ ಕಾರ್ಯಕ್ಕೆ ಎಲ್ಲರನ್ನೂ ಆಹ್ವಾನ ಮಾಡಬೇಕು ಎನ್ನುವ ಆಸೆ ಇತ್ತು ಆದರೆ ಈಗಿನ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಕುಂಭಾಭಿಷೇಕ ಕಾರ್ಯಕ್ರಮವನ್ನು ಲೈವ್ ಮೂಲಕ ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡಿರುವುದಾಗಿ ಅರ್ಜುನ್ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
ಅರ್ಜುನ್ ಸರ್ಜಾ ಹೇಳಿದ್ದೇನು?
"ನನ್ನ ಬಹುದಿನಗಳ ಆಸೆ, ನನ್ನ ಕುಟುಂಬದಿಂದ ನಿರ್ಮಾಣವಾಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಪರಿಪೂರ್ಣವಾಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭ ಜುಲೈ 1 ಮತ್ತು 2ರಂದು ಚೆನ್ನೈನಲ್ಲಿ ನಡೆಯುತ್ತಿದೆ. ಎಷ್ಟೋ ಜನ ನನ್ನ ಫ್ರೆಂಡ್ಸ್, ಕುಟುಂಬ, ಭಕ್ತಾದಿಗಳು ಎಲ್ಲರನ್ನು ಕರೆದು ಅದ್ದೂರಿಯಾಗಿ ಸಮಾರಂಭ ಮಾಡಬೇಕು ಎನ್ನುವ ಆಸೆ ಇತ್ತು" ಎಂದಿದ್ದಾರೆ.
ಲೈವ್ ಮೂಲಕ ವೀಕ್ಷಿಸಬಹುದು
"ಆದರೆ ಈಗ ಇರುವ ಪರಿಸ್ಥಿತಿ ಎಲ್ಲರಿಗೂ ಗೊತ್ತು. ಕೊರೊನಾ ಕಾರಣದಿಂದ ಯಾರನ್ನೂ ಆಹ್ವಾನ ಮಾಡಲು ಆಗುತ್ತಿಲ್ಲ. ಆದರೂ ಜನರಿಗೆ ಮಿಸ್ ಆಗಬಾರದು ಎನ್ನುವ ಕಾರಣಕ್ಕೆ ಯೂಟ್ಯೂಬ್ ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತಿದ್ದೇವೆ." ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಅರ್ಜುನ್ ಸರ್ಜಾ ಸಿನಿಮಾಗಳು
ಅರ್ಜುನ್ ಸರ್ಜಾ ಅವರ ಈ ಉತ್ತಮ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡಿಗರ ಪ್ರೀತಿ ಸದಾ ನಿಮ್ಮ ಜೊತೆ ಇರುತ್ತೆ ಎಂದು ಹೇಳುತ್ತಿದ್ದಾರೆ. ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಮಲಯಾಳಂನ ಮರಕ್ಕರ್, ತಮಿಳಿನ ಫ್ರೆಂಡ್ಸ್ ಸೇರಿದಂತೆ ಇನ್ನು ಮೂರ್ನಾಲ್ಕು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.