Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜೇಶ್ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇತರೆ ಮಾಹಿತಿ
ಕನ್ನಡ ಚಿತ್ರರಂಗದ ಹಿರಿಯ ನಟ 'ಕಲಾತಪಸ್ವಿ' ರಾಜೇಶ್ ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಕಾರ್ಯವು ಮೇಡಿ ಅಗ್ರಹಾರ ಲಕ್ಷ್ಮಿಪುರದಲ್ಲಿ ಮಧ್ಯಾಹ್ನ 3:30ರ ಬಳಿಕ ನಡೆಯಲಿದೆ. ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯಬಹುದು.
ರಾಜೇಶ್ ಅವರಿಗಿದ್ದ ಆರೋಗ್ಯ ಸಮಸ್ಯೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜೇಶ್ ಅವರ ಅಳಿಯ ನಟ ಅರ್ಜುನ್ ಸರ್ಜಾ, ''ಕಳೆದ ಹತ್ತು ದಿನಗಳಿಂದಲೂ ಅವರು ಆಸ್ಪತ್ರೆಯಲ್ಲಿದ್ದರು. ಮೊದಲಿಗೆ ಅವರಿಗೆ ಪ್ರೋ ಕೋವಿಡ್ ಆಗಿತ್ತು. ಬಳಿಕ ಸಿಕೆಡಿ (ಕ್ರಾನಿಕಲ್ ಕಿಡ್ನಿ ಡಿಸೀಸ್) ಆಯ್ತು. ಬಹಳ ಸುಸ್ತು ಎಂದು ಇತ್ತೀಚೆಗೆ ಹೇಳುತ್ತಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಇನ್ನಷ್ಟು ಸುಸ್ತಾಗಿದ್ದರು. ನಾವು ಬಹಳ ಪ್ರಯತ್ನ ಪಟ್ಟೆವು. ಆದರೆ ಉಳಿಸಿಕೊಳ್ಳಲು ಆಗಲಿಲ್ಲ. ಶನಿವಾರ ಬೆಳಗಿನ ಜಾವ 2:20 ಕ್ಕೆ ರಾಜೇಶ್ ಅವರು ಪ್ರಾಣತ್ಯಾಗ ಮಾಡಿದರು'' ಎಂದು ಮಾಹಿತಿ ನೀಡಿದ್ದಾರೆ.
''ರಾಜೇಶ್ ಅವರು ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ರಾಜೇಶ್ ಅವರು ಅಣ್ಣಾವ್ರ ಸಮಕಾಲೀನರು. ಅವರ ಅಗಲಿಕೆಯಿಂದ ಮನಸ್ಸಿಗೆ ಬಹಳ ವ್ಯಥೆಯಾಗಿದೆ'' ಎಂದು ರಾಜೇಶ್ ಹೇಳಿದರು.