Don't Miss!
- News
ವಂಚನೆ ಪ್ರಕರಣ: ಮತ್ತೋರ್ವ ನಟಿಯನ್ನು ಮದುವೆಯಾಗಲು ಬಯಸಿದ್ದ ಸುಕೇಶ್!
- Automobiles
ಭಾರತದಲ್ಲಿ ಹೊಸ ಅಧ್ಯಾಯ ಬರೆಯಲು ಸಿದ್ಧವಾಗಿವೆ ಮಾರುತಿ ಸುಜುಕಿ ಕಾರುಗಳು
- Sports
ಮತ್ತೊಮ್ಮೆ ನಮಗೆ ಆತನೇ ಬಲು ದೊಡ್ಡ ಕಂಟಕ: ಭಾರತೀಯ ಆಟಗಾರನ ಬಗ್ಗೆ ಆಸಿಸ್ ಕ್ರಿಕೆಟಿಗನ ಆತಂಕ!
- Finance
ಅದಾನಿ ಗ್ರೂಪ್ ವಿರುದ್ಧ ಆರೋಪ: 'ನಾವು ಜಾಗರೂಕರಾಗಿದ್ದೇವೆ' ಎಂದ ಭಾರತದ ಉನ್ನತ ಬ್ಯಾಂಕ್ಗಳು
- Technology
ಭಾರತದಲ್ಲಿ ಹೊಸ ಸಂಚಲನ ಸೃಷ್ಟಿಸಿದ ಫೈರ್ಬೋಲ್ಟ್ ಕಂಪೆನಿ!..ಪ್ರತಿಸ್ಫರ್ಧಿಗಳು ಕಂಗಾಲು!
- Lifestyle
ಬಿಪಿ ಸಮಸ್ಯೆಯೇ? ಪಿಜ್ಜಾ, ಮಜ್ಜಿಗೆ ಈ ಬಗೆಯ ಅಧಿಕ ಸೋಡಿಯಂ ಆಹಾರ ಸೇವಿಸಲೇಬೇಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ರಾಜೇಶ್ ಅಂತಿಮ ದರ್ಶನ, ಅಂತಿಮ ಸಂಸ್ಕಾರ ಇತರೆ ಮಾಹಿತಿ
ಕನ್ನಡ ಚಿತ್ರರಂಗದ ಹಿರಿಯ ನಟ 'ಕಲಾತಪಸ್ವಿ' ರಾಜೇಶ್ ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ರವೀಂದ್ರ ಕಲಾಕ್ಷೇತ್ರದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅಂತಿಮ ಕಾರ್ಯವು ಮೇಡಿ ಅಗ್ರಹಾರ ಲಕ್ಷ್ಮಿಪುರದಲ್ಲಿ ಮಧ್ಯಾಹ್ನ 3:30ರ ಬಳಿಕ ನಡೆಯಲಿದೆ. ಸಾರ್ವಜನಿಕರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯಬಹುದು.
ರಾಜೇಶ್ ಅವರಿಗಿದ್ದ ಆರೋಗ್ಯ ಸಮಸ್ಯೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜೇಶ್ ಅವರ ಅಳಿಯ ನಟ ಅರ್ಜುನ್ ಸರ್ಜಾ, ''ಕಳೆದ ಹತ್ತು ದಿನಗಳಿಂದಲೂ ಅವರು ಆಸ್ಪತ್ರೆಯಲ್ಲಿದ್ದರು. ಮೊದಲಿಗೆ ಅವರಿಗೆ ಪ್ರೋ ಕೋವಿಡ್ ಆಗಿತ್ತು. ಬಳಿಕ ಸಿಕೆಡಿ (ಕ್ರಾನಿಕಲ್ ಕಿಡ್ನಿ ಡಿಸೀಸ್) ಆಯ್ತು. ಬಹಳ ಸುಸ್ತು ಎಂದು ಇತ್ತೀಚೆಗೆ ಹೇಳುತ್ತಿದ್ದರು. ಆಸ್ಪತ್ರೆಗೆ ದಾಖಲಾದ ಬಳಿಕ ಇನ್ನಷ್ಟು ಸುಸ್ತಾಗಿದ್ದರು. ನಾವು ಬಹಳ ಪ್ರಯತ್ನ ಪಟ್ಟೆವು. ಆದರೆ ಉಳಿಸಿಕೊಳ್ಳಲು ಆಗಲಿಲ್ಲ. ಶನಿವಾರ ಬೆಳಗಿನ ಜಾವ 2:20 ಕ್ಕೆ ರಾಜೇಶ್ ಅವರು ಪ್ರಾಣತ್ಯಾಗ ಮಾಡಿದರು'' ಎಂದು ಮಾಹಿತಿ ನೀಡಿದ್ದಾರೆ.
''ರಾಜೇಶ್ ಅವರು ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ತೊಡಗಿಕೊಂಡಿದ್ದಾರೆ. ರಾಜೇಶ್ ಅವರು ಅಣ್ಣಾವ್ರ ಸಮಕಾಲೀನರು. ಅವರ ಅಗಲಿಕೆಯಿಂದ ಮನಸ್ಸಿಗೆ ಬಹಳ ವ್ಯಥೆಯಾಗಿದೆ'' ಎಂದು ರಾಜೇಶ್ ಹೇಳಿದರು.