Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರು ಸರ್ಜಾ ನೆನೆದು ಭಾವುಕರಾದ ನಟ ಅರ್ಜುನ್ ಸರ್ಜಾ
ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ನಿಧನರಾಗಿ ಆರು ತಿಂಗಳು ಕಳೆದಿದೆ. ಚಿರು ಸರ್ಜಾ ಈಗಲೂ ನಮ್ಮೊಂದಿಗೆ ಇಲ್ಲ ಎಂದು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಜಾ ಕುಟುಂಬವಂತೂ ಚಿರು ಅವರನ್ನು ಸದಾ ನೆನಪಿಸಿಕೊಳ್ಳುತ್ತಲೇ ಇದೆ.
Recommended Video
ನಟ ಅರ್ಜುನ್ ಸರ್ಜಾ ಅವರು ಇದ್ದಕ್ಕಿದ್ದಂತೆ ಚಿರು ಸರ್ಜಾ ಅವರನ್ನು ನೆನೆದು ಭಾವುಕರಾಗಿ ಇನ್ಸ್ಟಾಗ್ರಾಂನಲ್ಲಿ ಫೋಟೋವೊಂದು ಹಂಚಿಕೊಂಡಿದ್ದಾರೆ.
ಚಿರಂಜೀವಿ ಸರ್ಜಾ ಸಮಾಧಿ ನಿರ್ಮಾಣಕ್ಕೆ ಶಂಕುಸ್ಥಾಪನೆ; ಕುಟುಂಬದವರಿಂದ ಪೂಜೆ
''ಚಿರು ಮಗನೇ ನಿನ್ನ ಎಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಅಂದ್ರೆ ಅದನ್ನು ಹೇಳಲು ಸಹ ಸಾಧ್ಯವಾಗುತ್ತಿಲ್ಲ'' ಎಂದು ಆ ಫೋಟೋಗೆ ಕ್ಯಾಪ್ಷನ್ ನೀಡಿದ್ದಾರೆ. ಅರ್ಜುನ್ ಅವರ ಈ ಪೋಸ್ಟ್ ಕಂಡು ನೆಟ್ಟಿಗರು ಸಹ ಅದೇ ಅಭಿಪ್ರಾಯ ಹೇಳುತ್ತಿದ್ದಾರೆ.
ಅಂದ್ಹಾಗೆ, ಚಿರು ಸರ್ಜಾ ಅಗಲಿದ ಬಳಿಕ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಜೂನಿಯರ್ ಚಿರು ಆಗಮನದಿಂದ ಸರ್ಜಾ ಕುಟುಂಬದಲ್ಲಿ ಸಂತಸ ಮೂಡಿದ್ದು, ಆ ಪುಟ್ಟ ಕಂದಮ್ಮನ ರೂಪದಲ್ಲಿ ಚಿರು ಸರ್ಜಾ ಅವರನ್ನು ನೋಡಿಕೊಳ್ಳುತ್ತಿದ್ದಾರೆ.
ಚಿರು ಅಂತ್ಯಸಂಸ್ಕಾರ ನಡೆದ ಸ್ಥಳದಲ್ಲಿ ಸಮಾಧಿ ನಿರ್ಮಾಣ ಮಾಡಲು ಧ್ರುವ ಸರ್ಜಾ ಇತ್ತೀಚಿಗಷ್ಟೆ ಪೂಜೆ ಸಹ ಮಾಡಿದ್ದಾರೆ. ಧ್ರುವ ಸರ್ಜಾ, ಪತ್ನಿ ಪ್ರೇರಣಾ, ಧ್ರುವ ತಂದೆ-ತಾಯಿ ಅಜ್ಜಿ ಲಕ್ಷ್ಮೀದೇವಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಟ ಚಿರಂಜೀವಿ ಸರ್ಜಾ ಜೂನ್ 7ರಂದು ಹೃದಯಾಘಾತದಿಂದ ಸಾವಿನಪ್ಪಿದ್ದರು.
20 ವರ್ಷದ ನಂತರ ಚಿರು ಮಗನನ್ನು ಹೀರೋ ಆಗಿ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ
ಇನ್ನು ಮೇಘನಾ ರಾಜ್, ಅವರ ಮಗ, ತಂದೆ ಸುಂದರ್ ಹಾಗೂ ತಾಯಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ತಗುಲಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.