Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊಮ್ಮಗನನ್ನು ನೋಡಲು ಚೆನ್ನೈನಿಂದ ಹೊರಟ ನಟ ಅರ್ಜುನ್ ಸರ್ಜಾ
ಚಿರಂಜೀವಿ ಸರ್ಜಾ ಮತ್ತು ಮೇಘನಾ ರಾಜ್ ಮಗನನ್ನು ನೋಡಲು ಚಿರು ಸರ್ಜಾ ಮಾವ ಅರ್ಜುನ್ ಸರ್ಜಾ ಚೆನ್ನೈನಿಂದ ಹೊರಟಿದ್ದಾರೆ. ಮನೆಗೆ ಗಂಡು ಮಗು ಆಗಮಿಸಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಅರ್ಜುನ್ ಸರ್ಜಾ, ಮೊಮ್ಮಗನನ್ನು ನೋಡಲು ಹೊರಟಿರಿವುದಾಗಿ ಹೇಳಿದ್ದಾರೆ. ಮೇಘನಾ ರಾಜ್ ಸೀಮಂತ ಸಮಾರಂಭದಲ್ಲಿ ಭಾಗಿಯಾಗಿದ್ದ ಅರ್ಜುನ್ ಸರ್ಜಾ ಬಳಿಕ ಚೆನ್ನೈಗೆ ವಾಪಸ್ ಆಗಿದ್ದರು.
Recommended Video
ಸದ್ಯ ಚೆನ್ನೈನಲ್ಲಿರುವ ಅರ್ಜುನ್ ಸರ್ಜಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಮೇಘನಾ ರಾಜ್ ಗೆ ಗಂಡು ಮಗುವಾಗಿರುವ ವಿಚಾರ ತಿಳಿದು ತುಂಬಾ ಸಂತೋಷ ಪಟ್ಟಿದ್ದಾರೆ. ಅಲ್ಲದೆ ಕುಟುಂಬ ಸಮೇತ ಬೆಂಗಳೂರಿಗೆ ಹೊರಟಿದ್ದು, ಮಗು ರೂಪದಲ್ಲಿ ಬಂದಿರುವ ಚಿರುನನ್ನು ನೋಡಲು ಕಾತರರಾಗಿದ್ದಾರೆ. ಮುಂದೆ ಓದಿ..
ಜೂ.ಚಿರು ಆಗಮನದ ಬಗ್ಗೆ ನಟ ಧ್ರುವ ಸರ್ಜಾ ಪ್ರತಿಕ್ರಿಯೆ
ಚಿರು ಹುಟ್ಟಿದಾಗ ಚೆನ್ನೈಯಿಂದ ಓಡಿ ಬಂದಿದ್ದೆ
36 ವರ್ಷಗಳ ಹಿಂದೆ ಚಿರು ಹುಟ್ಟಿದಾಗ ಚೆನ್ನೈನಲ್ಲಿ ಇದ್ದೆ. ಆಗ ಚಿರು ನೋಡಲು ಚೆನ್ನೈನಿಂದ ಬೆಂಗಳೂರಿಗೆ ಓಡಿ ಬಂದಿದ್ದೇ. ಈಗ ಅವನ ಮಗುವನ್ನು ನೋಡಲು ಬರುತ್ತಿದ್ದೇನೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ. ಕುಟುಂಬದಲ್ಲಿ ಎಲ್ಲರಿಗೂ ತುಂಬಾ ಸಂತೋಷವಾಗಿದೆ ಎಂದು ಅರ್ಜುನ್ ಸರ್ಜಾ ಸಂತಸ ವ್ಯಕ್ತಪಡಿಸಿದರು.
4ತಿಂಗಳ ಬಳಿಕ ಕುಟುಂಬದಲ್ಲಿ ಸಂತಸ ಮನೆಮಾಡಿದೆ
ನಾಲ್ಕು ತಿಂಗಳ ಬಳಿಕ ನಮ್ಮ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಚಿರು ಮಗು ರೂಪದಲ್ಲಿ ವಾಪಸ್ ಬಂದಿದ್ದಾನೆ ಎಂದಿದ್ದಾರೆ. ಚಿರು ಇದ್ದಿದ್ದರೇ ಗಂಡು ಮಗುವಾಗಿದೆ ಮಾವ ಎಂದು ಜೋರಾಗಿ ಕೂಗಿ ಹೇಳುತ್ತಿದ್ದ. ನೆನಪಿಸಿಕೊಂಡರೆ ತುಂಬಾ ಬೇಸರವಾಗುತ್ತೆ. ಆದರೀಗ ಮಗು ರೂಪದಲ್ಲಿ ಬಂದು ಸಂತೋಷ ಪಡಿಸಿದ್ದಾನೆ ಎಂದಿದ್ದಾರೆ.
ಮೊಮ್ಮಗನನ್ನು ನೋಡಿದ ಚಿರು ತಾಯಿ ಹೇಳಿದ್ದು ಹೀಗೆ
ನಾನು ತಾತನಾಗಿದ್ದೇನೆ
ಅಮ್ಮ ಮುತ್ತಜ್ಜಿ ಆಗಿದ್ದಾರೆ. ನಾನು ತಾತನಾಗಿದ್ದೇನೆ. ದುಃಖದಲ್ಲಿದ್ದ ಕುಟುಂಬಕ್ಕೆ ಸಂತೋಷ ತರಲು ಮಗು ಕಾರಣನಾಗಿದ್ದಾನೆ. ಎಲ್ಲಾ ಸಮಯದಲ್ಲೂ ನಮ್ಮ ಜೊತೆ ಇದ್ದು ಸಹಕರಿಸಿದ ಕರ್ನಾಟಕ ಜನರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಧ್ರುವ ಸರ್ಜಾ ಪ್ರತಿಕ್ರಿಯೆ
ಮನೆಗೆ ಜೂ.ಚಿರು ಆಗಮಿಸಿದ ಬಗ್ಗೆ ನಟ ಧ್ರುವ ಸರ್ಜಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. 'ಅಣ್ಣನಿಗೆ ಅತ್ತಿಗೆಗೆ ಗಂಡು ಮಗುವಾಗಿದೆ. ಅತ್ತಿಗೆ, ಮಗು ಇಬ್ಬರೂ ಸಹ ಆರಾಮಾಗಿದ್ದಾರೆ. ಎಲ್ಲರೂ ಅವರಿಗೆ ಆಶೀರ್ವಾದ ಮಾಡಬೇಕೆಂದು ಕರ್ನಾಟಕದ ಜನತೆಯಲ್ಲಿ ಕೇಳಿಕೊಳ್ಳುತ್ತೇನೆ. ಖುಷಿ ಹೆಚ್ಚಾಗಿದ್ದರಿಂದ ಮಗುವನ್ನು ಕೈಯಲ್ಲಿ ಹಿಡಿದ ತಕ್ಷಣದ ಅನುಭವ ಹೇಗಾಯಿತು ಎಂದು ಹೇಳಲು ಸಾಧ್ಯವಾಗಲ್ಲ. ಆ ಫೀಲ್ ಗೊತ್ತಾಗಲಿಲ್ಲ ಎಂದು ಹೇಳಿದ್ದಾರೆ.