Just In
Don't Miss!
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Automobiles
ವಿನೂತನ ಫೀಚರ್ಸ್ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್ಯುವಿ
- News
ಲಾಲು ಪ್ರಸಾದ್ ಆರೋಗ್ಯ ಮತ್ತಷ್ಟು ಗಂಭೀರ: ರಾಂಚಿಯಿಂದ ದೆಹಲಿಗೆ ಏರ್ಲಿಫ್ಟ್
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಅರುಣ್ ಸಾಗರ್ ಗೋದಾಮಿಗೆ ಬೆಂಕಿ: ಕಲಾಕೃತಿಗಳು ಭಸ್ಮ
ಕನ್ನಡದ ಖ್ಯಾತ ಕಲಾ ನಿರ್ದೇಶಕ ಮತ್ತು ನಟ ಅರುಣ್ ಸಾಗರ್ ಅವರ ಕಲಾ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಸುಟ್ಟು ಭಸ್ಮವಾಗಿದೆ.
ನಗರದ ಉತ್ತರಹಳ್ಳಿಯಲ್ಲಿರುವ ಅರುಣ್ ಸಾಗರ್ ಅವರ 'ಆರ್ಟ್ ಗೋಡೌನ್'ನಲ್ಲಿ ಫೆಬ್ರವರಿ 15 ರಂದು ಸಂಜೆ ಸುಮಾರು 5.30ಕ್ಕೆ ಈ ಅವಘಡ ನಡೆದಿದ್ದು, ಚಿತ್ರಗಳಿಗೆ ಬಳಸಿದ್ದ ಮತ್ತು ಬಳಸಬೇಕಾಗಿದ್ದ ಅಪೂರ್ವ ಕಲಾಕೃತಿಗಳು ಬೆಂಕಿಗೆ ಆಹುತಿಯಾಗಿದೆ. ಈ ವೇಳೆ ಬೆಂಕಿಯನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಇಡೀ ಗೋಡೌನ್ ಪೂರ್ತಿ ಸುಟ್ಟು ಕರಕಲಾಗಿತ್ತು ಎಂದು ತಿಳಿದುಬಂದಿದೆ.
ಸುಮಾರು 17 ವರ್ಷದ ಹಿಂದೆ ಈ ಗೋಡೌನ್ ಆರಂಭಿಸಲಾಗಿತ್ತು. ಇದುವರೆಗೂ ಯಾವುದೇ ತರಹದ ಅವಘಡ ನಡದಿಲ್ಲ. ಈ ಅನಾಹುತ ಹೇಗಾಯಿತು ಎನ್ನುವುದು ಇನ್ನೂ ಗೊತ್ತಿಲ್ಲ. ಬಹಳ ನೋವಾಗುತ್ತಿದೆ. ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರಬಹುದು, ನನಗೆ ಯಾರೂ ಬೆಂಕಿ ಇಟ್ಟಿರುವ ಬಗ್ಗೆ ಅನುಮಾನವಿಲ್ಲ ಎಂದು ಕಲಾ ನಿರ್ದೇಶಕ ಅರುಣ್ ಸಾಗರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇನ್ನೂ ಗೋದಾಮಿನಲ್ಲಿ ಹೊಸದಾಗಿ ಚಿತ್ರಗಳಿಗೆ ಸೆಟ್ ಹಾಕಲು ಬಳಸಬೇಕಿದ್ದ ಮರದ ಕಟ್ಟಿಗೆಗಳು, ಮದುವೆ ಮನೆಗಳಲ್ಲಿ ಸೆಟ್ ಹಾಕಬೇಕಿದ್ದ ವಸ್ತುಗಳು, ಈಗಾಗಲೇ ಬಳಸಿದ್ದ ಅನೇಕ ವಸ್ತುಗಳು ಇದ್ದವು. ಮತ್ತು ಗೋಕರ್ಣದಲ್ಲಿ ಒಂದು ಕಲಾ ಶಾಲೆ ನಿರ್ಮಾಣ ಮಾಡಲು, ಸಿದ್ದ ಮಾಡಿಟ್ಟಿದ್ದ ಸಾಮಾಗ್ರಿಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಇದರಿಂದ ಸುಮಾರು 70-80 ಲಕ್ಷ ನಷ್ಟವಾಗಿದೆ ಎಂದು ಅರುಣ್ ಸಾಗರ್ ತಿಳಿಸಿದ್ದಾರೆ. ಸದ್ಯ, ಸುಬ್ರಮಣ್ಯಪುರ ಪೊಲೀಸರು ಪ್ರಕರಣವನ್ನ ದಾಖಲು ಮಾಡಿಕೊಂಡಿದ್ದಾರೆ.