Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯಜಮಾನ'ನಿಗೆ ವಿಲನ್ ಆಗಿ ಬಂದ ಮಾಜಿ ಸೈನಿಕ
'ಯಜಮಾನ' ಸಿನಿಮಾದಲ್ಲಿ ನಟ ದರ್ಶನ್ ಅವರ ಪುತ್ರ ವಿನೀಶ್ ನಟಿಸುತ್ತಿರುವುದು ಚಿತ್ರತಂಡದಿಂದ ಬಂದಿದ್ದ ಇತ್ತೀಚಿಗಿನ ಸುದ್ದಿ. ಆದರೆ, ಅದರ ನಂತರ 'ಯಜಮಾನ' ಸಿನಿಮಾದ ಬಗ್ಗೆ ಮತ್ತೊಂದು ಸುದ್ದಿ ಬಂದಿದೆ.
ದರ್ಶನ್ ನೋಡಲು 'ಯಜಮಾನ' ಸೆಟ್ ಗೆ ಬಂದ ಪತ್ನಿ
ಈ ಸಿನಿಮಾಗೆ ಈಗ ಒಬ್ಬ ಖಳನಟನ ಎಂಟ್ರಿಯಾಗಿದೆ. ಅರುಣ್ ಎಂಬ ಮಾಜಿ ಸೈನಿಕ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮೂಲತಃ ಕೇರಳದವರಾದ ಅರುಣ್ ಸದ್ಯಕ್ಕೆ ಬೆಂಗಳೂರಿನಲ್ಲಿಯೇ ಇದ್ದಾರೆ.
ದರ್ಶನ್ - ವಿಜಯಲಕ್ಷ್ಮಿ ಭೇಟಿ ಹಿಂದಿನ ಕಾರಣ ಬಹಿರಂಗ
ಸೈನ್ಯದಲ್ಲಿ 9 ವರ್ಷ ಇದ್ದ ಅರುಣ್ ಬಳಿಕ ನಿವೃತ್ತಿ ತೆಗೆದುಕೊಂಡಿದ್ದರು. ಆ ನಂತರ ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಕೊಟ್ಟ ಅರುಣ್ ತಮ್ಮ ಕಟ್ಟುಮಸ್ತಾದ ದೇಹದ ಮೂಲಕ ಎಲ್ಲರನ್ನು ಬೆರಗುಗೊಳಿಸಿದರು. 112 ಕೆಜಿ ತೂಕ ಹಾಗೂ ಆರು ಅಡಿ ಎತ್ತರ ಇರುವ ಇವರು ಈಗಾಗಲೇ ಜೂನಿಯರ್ ಎನ್ ಟಿ ಆರ್ ಮತ್ತು ನಟ ವಿಶಾಲ್ ಜೊತೆಗೆ ನಟಿಸಿದ್ದಾರೆ.
'ಯಜಮಾನ' ಅರುಣ್ ಅವರ ಮೊದಲ ಕನ್ನಡ ಸಿನಿಮಾವಾಗಿದೆ. ದರ್ಶನ್ ಜೊತೆಗೆ ನಟಿಸುವುದಕ್ಕೆ ಅರುಣ್ ಉತ್ಸುಕರಾಗಿದ್ದಾರೆ. ದರ್ಶನ್ ಕೂಡ ಅರುಣ್ ಅವರಿಗೆ ವಿಶ್ ಮಾಡಿದ್ದಾರೆ.