Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರವಾರ ಬೀಚ್ ಸ್ವಚ್ಛ ಮಾಡಿದ ನಟ ಅರುಣ್ ಸಾಗರ್
ಕಾರವಾರ ನಗರದಲ್ಲಿ ಪ್ರತಿ ವಾರ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ ಇಂದಿಗೆ ಆರು ವರ್ಷಗಳನ್ನು ಪೂರೈಸಿದೆ. ವಿಶೇಷ ಎಂದರೆ ಈ ದಿನದ ಸ್ವಚ್ಛತಾ ಕಾರ್ಯದಲ್ಲಿ ನಟ ಅರುಣ್ ಸಾಗರ್ ಕೂಡ ಭಾಗವಹಿಸಿದ್ದರು.
ಕಾಳಿ ಸಂಗಮದ ಕಡಲತೀರದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ಶಾಸಕಿ ರೂಪಾಲಿ ನಾಯ್ಕ ಚಾಲನೆ ನೀಡಿದರು. ಬಳಿಕ ನೂರಾರು ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಇದೇ ವೇಳೆ ನಟ ಅರುಣ್ ಸಾಗರ್ ಕೂಡ ಪಾಲ್ಗೊಂಡು ಕಡಲ ತೀರದ ತ್ಯಾಜ್ಯಗಳನ್ನು ಆಯ್ದರು. ಬೆಳಿಗ್ಗೆ 7.15ರಿಂದ ಆರಂಭವಾದ ಈ ಕಾರ್ಯ ಸತತ ಮೂರು ಸತತ ಮೂರು ಗಂಟೆಗಳ ಕಾಲ ನಡೆದಿದ್ದು, ಒಂದು ಲಾರಿಯಷ್ಟು ತ್ಯಾಜ್ಯ ಸಂಗ್ರಹ ಮಾಡಲಾಯಿತು. ಇದರಲ್ಲಿ ಹೆಚ್ಚಾಗಿ, ಪ್ಲಾಸ್ಟಿಕ್ ಬಾಟಲಿ, ಕವರ್ ಗಳು ಮತ್ತು ಬಿಯರ್ ಬಾಟಲಿಗಳೇ ತುಂಬಿತ್ತು.
ಮುಯೆ ಥಾಯ್ನಲ್ಲಿ ಭಾರತಕ್ಕೆ ಹೆಮ್ಮೆ ತಂದ ಅರುಣ್ ಸಾಗರ್ ಪುತ್ರ
ಕಾರ್ಯಕರ್ತರಿಗೆ ಗ್ಲೌಸ್, ಸ್ವಚ್ಛತಾ ಪರಿಕರ, ಸ್ಯಾನಿಟೈಸರ್ ಗಳನ್ನು ನೀಡಲಾಗಿತ್ತು. ಈ ವೇಳೆ ಪಹರೆಯ ಕಾರ್ಯ ಶ್ಲಾಘಿಸಿದ ಅರುಣ್ ಸಾಗರ್, ಟ್ಯಾಗೋರ್ ನಡೆದಾಡಿದಂಥ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು ಸಂತೋಷವೆನಿಸಿತು. ಇದು ನನ್ನ ಜೀವನದ ಒಳ್ಳೆಯ ದಿನಗಳಲ್ಲಿ ಒಂದು ಎಂದು ಹೇಳಿದ್ದಾರೆ.
Recommended Video
ಜಾತಿ-ಮತ, ಪಕ್ಷ-ಭೇದ ಮರೆತು, ಭಾರತೀಯರಾಗಿ ಸ್ವಚ್ಛ ಭಾರತಕ್ಕೆ ಅರ್ಥ ಕೊಟ್ಟಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ತ್ಯಾಜ್ಯಗಳನ್ನು ಹಾಗೆಯೇ ಎಸೆದು ಹೋಗುತ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.