Don't Miss!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದರ್ಶನ್ ಸರ್ ಬಗ್ಗೆ ಮಾತಾಡೋ ಯೋಗ್ಯತೆ ನನಗಿಲ್ಲ': ಅರುಣಾ ಕುಮಾರಿ ಪ್ರತ್ಯಕ್ಷ
25 ಕೋಟಿ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಮಹಿಳೆ ಅರುಣಾ ಕುಮಾರಿ ಪ್ರತ್ಯಕ್ಷವಾಗಿದ್ದಾರೆ. ಮಂಗಳವಾರ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ನಿರ್ಮಾಪಕ ಉಮಾಪತಿ ವಿರುದ್ದ ಗಂಭೀರ ಆರೋಪಗಳನ್ನು ಮಾಡಿದ್ದ ಅರುಣಾ ಕುಮಾರಿ ಬುಧವಾರ ಮಾಧ್ಯಮಗಳ ಮುಂದೆ ಹಾಜರಾದರು.
ಈ ವೇಳೆ ಮಾತನಾಡಿದ ಅರುಣಾ ಕುಮಾರಿ, ''ನಾನು ಯಾರಿಗೂ ಮೋಸ ಮಾಡಿಲ್ಲ, ವಂಚನೆ ಮಾಡಿರುವ ಬಗ್ಗೆ ದಾಖಲೆಗಳಿದ್ದರೆ ಕೊಡಲಿ, ಪೊಲೀಸರ ಮುಂದೆ ಇಡಲಿ'' ಎಂದು ತಿರುಗೇಟು ಕೊಟ್ಟಿದ್ದಾರೆ. ನಟ ದರ್ಶನ್ ಅವರ ಬಗ್ಗೆ ಪ್ರಶ್ನಿಸಿದಾಗ ''ದರ್ಶನ್ ಸರ್ ಬಗ್ಗ ಮಾತಾಡೋ ಯೋಗ್ಯತೆ ನನಗಿಲ್ಲ'' ಎಂದು ಹೇಳಿದರು. 25 ಕೋಟಿ ವಂಚನೆ ಯತ್ನ ಕೇಸ್ ಸಂಬಂಧಿಸಿದಂತೆ ಅರುಣಾ ಕುಮಾರಿ ಏನಂದ್ರು? ಮುಂದೆ ಓದಿ....
'ನನ್ನ ಜೀವನ ಕೆಟ್ಟರೆ ಯಾರೂ ಬರಲ್ಲ': ದರ್ಶನ್ ಆರೋಪಕ್ಕೆ ಅರುಣಾ ಕುಮಾರಿ ತಿರುಗೇಟು
ಸಾಕ್ಷಿ ಎಲ್ಲಿದೆ ಕೊಡೋಕೆ ಹೇಳಿ
ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ ಐ ಆರ್ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅರುಣಾ ಕುಮಾರಿ, ''ವಂಚನೆ ಮಾಡಿರುವ ಬಗ್ಗೆ ಸಾಕ್ಷಿ ಇದ್ಯಾ'' ಎಂದು ಪ್ರಶ್ನಿಸಿದರು. ''ನಾನು ಯಾವುದೇ ವಂಚನೆ ಮಾಡಿಲ್ಲ, ಅದಕ್ಕೆ ಸಾಕ್ಷಿ ಇದ್ದರೆ ಪೊಲೀಸರಿಗೆ ಕೊಡಲಿ, ನಾನೇ ತಪ್ಪು ಮಾಡಿದ್ದೇನೆ ಎನ್ನುವುದಾದರೆ ಕಾನೂನಿದೆ, ನೋಡಿಕೊಳ್ಳುತ್ತೆ ಬಿಡಿ'' ಎಂದಿದ್ದಾರೆ.
ನಾನು ಇದರಿಂದ ಹೊರಗೆ ಬರಬೇಕಿದೆ
''ನಮ್ಮ ತಂದೆ ಪೇಶೆಂಟ್. ನನ್ನ ತಾಯಿ ಪೇಶೆಂಟ್, ನನಗೆ ಒಂದು ಮಗು ಇದೆ. ನನಗೂ ಆರೋಗ್ಯ ಸರಿಯಿಲ್ಲ. ನಾನೊಬ್ಬಳೆ ಎಲ್ಲರಿಗೂ ಆಧಾರ. ನನಗೆ ಇದು ಬೇಡವಾದ ವಿಚಾರ. ನಾನು ಇದರಿಂದ ಹೊರಗೆ ಬರಬೇಕಿದೆ'' ಎಂದು ಅರುಣಾ ಕುಮಾರಿ ಹೇಳಿಕೊಂಡರು.
ಅರುಣಾ ಕುಮಾರಿಯ ಅಸಲಿ ರೂಪ ಬಹಿರಂಗಪಡಿಸಿದ ನಟ ದರ್ಶನ್
ದರ್ಶನ್ ಸರ್ ಬಗ್ಗೆ ನಾನು ಮಾತಾಡಲ್ಲ
''ದರ್ಶನ್ ಸರ್ ಬಗ್ಗೆ ಮಾತಾಡೋ ಯೋಗ್ಯತೆ ನನಗಿಲ್ಲ. ಅಂತಹ ದೊಡ್ಡ ವ್ಯಕ್ತಿ ಮಾತಾಡುವುದಕ್ಕೆ ನನಗೆ ಇಷ್ಟ ಇಲ್ಲ. ಅವರೊಬ್ಬ ದೊಡ್ಡ ವ್ಯಕ್ತಿ. ನಾನು ವಂಚನೆ ಮಾಡಿರುವುದನ್ನು ಸಾಬೀತುಪಡಿಸಿದರೆ ನಾನು ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಬದ್ದನಾಗಿದ್ದೇನೆ'' ಎಂದು ಅರುಣಾ ಕುಮಾರಿ ಸ್ಪಷ್ಟನೆ ಕೊಟ್ಟಿದ್ದಾರೆ.
Recommended Video
ನಾಗವರ್ಧನ್ ಯಾರೂ ಅಂತಾನೇ ಗೊತ್ತಿಲ್ಲ
ಇನ್ನು ಉದ್ಯಮಿ ನಾಗವರ್ಧನ್ ಎನ್ನುವವರು ಅರುಣಾ ಕುಮಾರಿ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನ ಮೋಸ ತೆಗೆದುಕೊಂಡು ಮೋಸ ಮಾಡಿದ್ದಾರೆ ಎಂದು ಪ್ರೆಸ್ಮೀಟ್ ಮಾಡಿ ದೂರಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಅರುಣಾಕುಮಾರಿ, ''ಅವರು ಯಾರು ಎಂದೇ ನನಗೆ ಗೊತ್ತಿಲ್ಲ'' ಎಂದಿದ್ದಾರೆ.