"ನೇಹಾ ಹಿರೇಮಠ ಸಾವಿಗೆ ನ್ಯಾಯ ಸಿಗಲಿ"; ನಿರ್ಮಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್

ಬೆಂಗಳೂರು: ನೇಹಾ ಹಿರೇಮಠ ಹತ್ಯೆಗೆ ರಾಜ್ಯದ ಮೂಲೆ ಮೂಲೆಯಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಭೀಕರ ಹತ್ಯೆಯ ಸುದ್ದಿ ಬಿತ್ತರವಾಗುತ್ತಿದಗದಂತೆ ಕನ್ನಡ ಚಿತ್ರರಂಗದ ನಟರು ನೇಹಾ ಸಾವಿಗೆ ನ್ಯಾಯ ಸಿಗಲೇಬೇಕು ಎಂದು ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ 'ಜಸ್ಟಿಸ್ ಫಾರ್ ನೇಹಾ' ಬೆಂಬಲ ಸೂಚಿಸಿದ್ದಾರೆ.

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಿನಿಮಾ ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಮುಖಂಡರು ಈ ಹತ್ಯೆಗೆ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದು, ಅಪರಾಧಿಗೆ ಶಿಕ್ಷೆ ಆಗಲೇಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.

Ashwini Puneeth Rajkumar post on Neha

ಈಗ ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯ ಸ್ಟೋರಿಯಲ್ಲಿ ನೇಹಾ ಸಾವಿಗೆ ನ್ಯಾಯ ಸಿಗಬೇಕೆಂದು ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಕ್ಕೂ ಮನವಿಯನ್ನು ಮಾಡಿಕೊಂಡಿದ್ದಾರೆ.

ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೀಗೆ ಬರೆದಿದ್ದಾರೆ. "ನೇಹಾ ಹಿರೇಮಠ ಅವರ ಸಾವಿಗೆ ನ್ಯಾಯ ಸಿಗಲಿ ಎಂಬುದು ನಮ್ಮೆಲ್ಲರ ಆಶಯ. ಕಾನೂನಿನ ಅಡಿಯಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಮ್ಮ ವಿನಂತಿ. ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಎಂದು ಬರೆದುಕೊಂಡಿದ್ದು, #JusticeForNeha" ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

Ashwini Puneeth Rajkumar post on Neha

ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ನೇಹಾ ಹಿರೇಮಠ ಹತ್ಯೆಗೆ ಆಕ್ರೋಶ ಹೊರಹಾಕಿದ್ದಾರೆ. ಧ್ರುವ ಸರ್ಜಾ, ರಿಷಭ್ ಶೆಟ್ಟಿ, ರಕ್ಷಿತಾ ಪ್ರೇಮ್, ಅನುಶ್ರೀ ಸೇರಿದಂತೆ ಹಲವು ಮಂದಿ ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿದ್ದರು. #JusticeForNeha ಹ್ಯಾಶ್ ಟ್ಯಾಗ್ ಅಡಿಯಲ್ಲಿ ಈ ಹತ್ಯೆಯನ್ನು ವಿರೋಧಿಸಿ, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

ಶಿವಣ್ಣ ಕೂಡ ತನ್ನ ಎಕ್ಸ್‌ ಖಾತೆಯಲ್ಲಿ (ಟ್ವಿಟರ್) " ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ" ಎಂದು ಬರೆದು ಪೋಸ್ಟ್ ಮಾಡಿದ್ದರು.

ಹಾಗೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ನ್ಯಾಯ ಸಿಗಬೇಕೆಂದು ಪೋಸ್ಟ್ ಮಾಡಿದ್ದರು. "ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ." ಎಂದು ದರ್ಶನ್ ಬರೆದು ಪೋಸ್ಟ್ ಮಾಡಿದ್ದರು.

ಇನ್ನು ನೇಹಾ ಹತ್ಯೆ ಪ್ರಕರಣಕ್ಕೆ ಬರೋದಾರೆ, ಏಪ್ರಿಲ್ 18ರ ಸಂಜೆ 4.45ರ ಸುಮಾರಿಗೆ ಕಾಲೇಜಿನಿಂದ ಹೊರಬರುತ್ತಿದ್ದಂತೆ ಫಯಾಜ್ ಎಂಬ ಯುವಕ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಹತ್ಯೆಯ ಬಳಿಕ ಕಠಿಣ ಶಿಕ್ಷೆಯಾಗಬೇಕು ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

More from Filmibeat

English summary
Ashwini Puneeth Rajkumar instagram post on Hubballi girl Neha Hiremath death
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X