Upendra: ಬೆಂಗಳೂರಿನಲ್ಲಿ ನಟ ಉಪೇಂದ್ರ ವಿರುದ್ಧ 2 ದೂರು ದಾಖಲು: ಬಂಧನಕ್ಕೆ ಆಗ್ರಹ

ಪರಿಶಿಷ್ಟ ಸಮುದಾಯದ ಕುರಿತು ನಟ ಉಪೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಲಾಗಿದೆ. ಇತ್ತೀಚೆಗೆ ಉಪೇಂದ್ರ ಸೋಶಿಯಲ್ ಮೀಡಿಯಾ ಲೈವ್‌ ಬಂದಿದ್ದ ವೇಳೆ "ಊರು ಎಂದ ಮೇಲೆ ಹೊಲಗೇರಿ ಇರುತ್ತೆ" ಎಂದಿದ್ದರು. ಈ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಕೂಡಲೇ ಅವರು ಕ್ಷಮೆ ಕೇಳಿದ್ದರು.

ಪ್ರಜಾಕೀಯ 6 ವರ್ಷ ಪೂರೈಸಿದ ಸಂದರ್ಭದಲ್ಲಿ ಉಪೇಂದ್ರ ಫೇಸ್‌ಬುಕ್‌, ಇನ್‌ಸ್ಟಾ ಲೈವ್ ಬಂದಿದ್ದರು. ಮುಂದೆ ಪಕ್ಷವನ್ನು ಮುನ್ನಡೆಸುವ ಬಗ್ಗೆ ಜನರಲ್ಲಿ ಅಭಿಪ್ರಾಯ ಕೇಳಿದ್ದರು. ಈ ವೇಳೆ ಮಾತನಾಡುತ್ತಾ "ಊರು ಎಂದ ಮೇಲೆ ಹೊಲಗೇರಿ ಇರುತ್ತೆ" ಎನ್ನುವ ಗಾದೆ ಮಾತನ್ನು ಹೇಳಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಂಬಂಧ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವವರು ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್‌ ದಾಖಲಿಸಿದ್ದಾರೆ.

Atrocities Case Against Upendra over holegeri controversial comments

ಉಪೇಂದ್ರ ಅವರ ಹೇಳಿಕೆ ಜಾತಿ ಮನಸ್ಥಿತಿಯನ್ನು ತೋರ್ಪಡಿಸುತ್ತದೆ ಎಂದು ಸಾಕಷ್ಟು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನಟ ಉಪೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ದೂರುದಾರರು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ. ಅತ್ತ ರಾಮನಗರದಲ್ಲಿ ಇಂದು (ಆಗಸ್ಟ್ 13) ಉಪೇಂದ್ರ ಪ್ರತಿಕೃತಿ ದಹಿಸಿ ಸಮತಾ ಸೈನಿಕ ದಳ ಹಾಗೂ ದಲಿತ ಪರ ಒಕ್ಕೂಟ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಉಪೇಂದ್ರ ತಮ್ಮ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ಅವರ ಸಿನಿಮಾಗಳನ್ನು ಬಹಿಷ್ಕರಿಸಿ ಘೇರಾವ್ ಹಾಕಲಾಗುತ್ತದೆ. ಪೋಸ್ಟರ್‌ಗಳಿಗೆ ಮಸಿ ಬಳಿಯಲಾಗುತ್ತದೆ" ಸಮತಾ ಸೈನಿಕ ದಳದ ರಾಜ್ಯ ಯುವ ಘಟಕದ ಅಧ್ಯಕ್ಷ ಡಾ. ಗೋವಿಂದಯ್ಯ ಎಚ್ಚರಿಸಿದ್ದಾರೆ.

ಮತ್ತೊಂದು ಕಡೆ ವಕೀಲರಾದ ಜೆ. ವಿ ಶ್ರೀನಿವಾಸ್ ಎಂಬುವವರು ಇದೇ ವಿಚಾರಕ್ಕೆ ಸಂಬಂಧಿಸಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನಟ ಉಪೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ. ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಉಪೇಂದ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಈ ವಿಚಾರವನ್ನು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ದೀಪು ಗೌಡ ಎಂಬುವವರು ಉಪೇಂದ್ರ ಮಾತನಾಡಿದ್ದ ವೀಡಿಯೋ ತುಣುಕನ್ನು ಶೇರ್ ಮಾಡಿ "ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ:: ಉಪೇಂದ್ರ (ಪ್ರಜಾಕೀಯ). "ಅಲ್ಲ ಈತನ ಯಾವುದೋ ಒಂದು ಪಕ್ಷದ ಸಿದ್ದಾಂತದ ವಿರುದ್ಧ ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರೆ, ಆ ಜನರನ್ನು "ಹೊಲ್ಗೇರಿ"ಗೆ ಹೊಲಿಸೋದು ಎಷ್ಟರ ಮಟ್ಟಕ್ಕೆ ಸರಿ..?? ಹಾಗಾದರೆ ಈ ಮನುಷ್ಯನ ಪ್ರಕಾರ ಹೊಲ್ಗೇರಿಯಲ್ಲಿ ಬದುಕುವ ಜನರೆಲ್ಲರು ಕೆಟ್ಟವರಾ..??" ಎಂದು ಬರೆದುಕೊಂಡಿದ್ದರು.

ಕರ್ನಾಟಕ ರಾಜ್ಯ ಭೀಮ್ ಆರ್ಮಿ ಅಧ್ಯಕ್ಷರಾದ ರಾಜಗೋಪಾಲ್. ಡಿ ಪ್ರತಿಕ್ರಿಯಿಸಿ ನಟ ಉಪೇಂದ್ರ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಉಪೇಂದ್ರ ಸೋಶಿಯಲ್ ಮೀಡಿಯಾ ಮೂಲಕ ಕ್ಷಮೆ ಕೇಳಿದರೂ ಆಕ್ರೋಶ ಮುಂದುವರೆದಿದೆ.

More from Filmibeat

English summary
FIR Against Upendra over holegeri controversial statement.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X