Just In
Don't Miss!
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Automobiles
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮುಂದಿನ ತಿಂಗಳಲ್ಲಿ ವೀರಪ್ಪನ್ 'ಅಟ್ಟಹಾಸ' ಶುರು
ಅಟ್ಟಹಾಸ ಚಿತ್ರವು ತಮಿಳಿನಲ್ಲಿ 'ವನ ಯುದ್ಧಂ' ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಯಾಗುವುದಕ್ಕೂ ಮೊದಲು ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀಯ ಒಪ್ಪಿಗೆ ಪಡೆಯಬೇಕು ಎಂದು ನ್ಯಾಯಾಲಯ ಆದೇಶಿಸಿತ್ತು. ಅದರಂತೆ ಇತ್ತೀಚಿಗೆ ತಮ್ಮ ಐವರು ವಕೀಲರು, ಹಾಗೂ ನಿಯೋಜಿಸಲಾಗಿದ್ದ ಸರ್ಕಾರಿ ವಕೀಲರೊಂದಿಗೆ ಮುತ್ತುಲಕ್ಷ್ಮೀ ಚೆನ್ನೈಯ ದೇವಿ ಶ್ರೀದೇವಿ ಚಿತ್ರಮಂದಿರದಲ್ಲಿನ ನಡೆದ ವಿಶೇಷ ಪ್ರದರ್ಶನದಲ್ಲಿ ಚಿತ್ರ ವೀಕ್ಷಿಸಿದ್ದಾರೆ.
ಈಗಾಗಲೇ ನ್ಯಾಯಾಲಯವು 'ಮುತ್ತುಲಕ್ಷ್ಮಿ ಚಿತ್ರವನ್ನು ನೋಡಿ, ಆಕ್ಷೇಪಾರ್ಹ ಏನಾದರೂ ಇದ್ದರೆ 'ದೃಶ್ಯ-ವಿವರ'ಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅಲ್ಲಿ ನ್ಯಾಯಾಧೀಶರು, ಚಿತ್ರದಲ್ಲಿರುವ ಯಾವುದೇ ಅಂಶ ಮುತ್ತುಲಕ್ಷ್ಮಿ ಮತ್ತು ಅವರ ಮಕ್ಕಳ ವೈಯಕ್ತಿಕ ಜೀವನಕ್ಕೆ ತೊಂದರೆಯಾಗುವಂತಿದ್ದರೆ ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ" ಎಂದಿದ್ದರು. ಅದರಂತೆ ಚಿತ್ರ ನೋಡಿದ್ದಾರೆ ಮತ್ತುಲಕ್ಷ್ಮೀ.
ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲಿ ಸಿದ್ಧವಾಗಿರುವ ಚಿತ್ರವನ್ನು ನೋಡಿರುವ ಮತ್ತುಲಕ್ಷ್ಮೀ, ಚಿತ್ರದಲ್ಲಿನ ಕೆಲವು ದೃಶ್ಯಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದಿದ್ದಾರೆ. ಈ ಹಿಂದೆ ಒಂದೆರಡು ಬಾರಿ ಆ ಚಿತ್ರವನ್ನು ನೋಡಲು ಪ್ರದರ್ಶನ ಏರ್ಪಡಿಸಲಾಗಿತ್ತಾದರೂ, ಅದಕ್ಕೆ ಮುತ್ತುಲಕ್ಷ್ಮಿ ಹಾಜರಾಗಿರಲಿಲ್ಲ. ಅಂತೂ ಕೊನೆಗೆ ಮತ್ತುಲಕ್ಷ್ಮೀ ಚಿತ್ರ ನೋಡಿದ್ದಾರೆ, ತಮ್ಮ ನಿಲುವು ತಿಳಿಸಿದ್ದಾರೆ. ಮುಂದಿನ ಪುಟ ನೋಡಿ...