Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ತಿಂಗಳಲ್ಲಿ ವೀರಪ್ಪನ್ 'ಅಟ್ಟಹಾಸ' ಶುರು
ಅಟ್ಟಹಾಸ ಚಿತ್ರವು ತಮಿಳಿನಲ್ಲಿ 'ವನ ಯುದ್ಧಂ' ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಯಾಗುವುದಕ್ಕೂ ಮೊದಲು ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀಯ ಒಪ್ಪಿಗೆ ಪಡೆಯಬೇಕು ಎಂದು ನ್ಯಾಯಾಲಯ ಆದೇಶಿಸಿತ್ತು. ಅದರಂತೆ ಇತ್ತೀಚಿಗೆ ತಮ್ಮ ಐವರು ವಕೀಲರು, ಹಾಗೂ ನಿಯೋಜಿಸಲಾಗಿದ್ದ ಸರ್ಕಾರಿ ವಕೀಲರೊಂದಿಗೆ ಮುತ್ತುಲಕ್ಷ್ಮೀ ಚೆನ್ನೈಯ ದೇವಿ ಶ್ರೀದೇವಿ ಚಿತ್ರಮಂದಿರದಲ್ಲಿನ ನಡೆದ ವಿಶೇಷ ಪ್ರದರ್ಶನದಲ್ಲಿ ಚಿತ್ರ ವೀಕ್ಷಿಸಿದ್ದಾರೆ.
ಈಗಾಗಲೇ ನ್ಯಾಯಾಲಯವು 'ಮುತ್ತುಲಕ್ಷ್ಮಿ ಚಿತ್ರವನ್ನು ನೋಡಿ, ಆಕ್ಷೇಪಾರ್ಹ ಏನಾದರೂ ಇದ್ದರೆ 'ದೃಶ್ಯ-ವಿವರ'ಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅಲ್ಲಿ ನ್ಯಾಯಾಧೀಶರು, ಚಿತ್ರದಲ್ಲಿರುವ ಯಾವುದೇ ಅಂಶ ಮುತ್ತುಲಕ್ಷ್ಮಿ ಮತ್ತು ಅವರ ಮಕ್ಕಳ ವೈಯಕ್ತಿಕ ಜೀವನಕ್ಕೆ ತೊಂದರೆಯಾಗುವಂತಿದ್ದರೆ ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ" ಎಂದಿದ್ದರು. ಅದರಂತೆ ಚಿತ್ರ ನೋಡಿದ್ದಾರೆ ಮತ್ತುಲಕ್ಷ್ಮೀ.
ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲಿ ಸಿದ್ಧವಾಗಿರುವ ಚಿತ್ರವನ್ನು ನೋಡಿರುವ ಮತ್ತುಲಕ್ಷ್ಮೀ, ಚಿತ್ರದಲ್ಲಿನ ಕೆಲವು ದೃಶ್ಯಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದಿದ್ದಾರೆ. ಈ ಹಿಂದೆ ಒಂದೆರಡು ಬಾರಿ ಆ ಚಿತ್ರವನ್ನು ನೋಡಲು ಪ್ರದರ್ಶನ ಏರ್ಪಡಿಸಲಾಗಿತ್ತಾದರೂ, ಅದಕ್ಕೆ ಮುತ್ತುಲಕ್ಷ್ಮಿ ಹಾಜರಾಗಿರಲಿಲ್ಲ. ಅಂತೂ ಕೊನೆಗೆ ಮತ್ತುಲಕ್ಷ್ಮೀ ಚಿತ್ರ ನೋಡಿದ್ದಾರೆ, ತಮ್ಮ ನಿಲುವು ತಿಳಿಸಿದ್ದಾರೆ. ಮುಂದಿನ ಪುಟ ನೋಡಿ...