Don't Miss!
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- News ಭಾರತೀಯ ರೈಲ್ವೆಗೆ 171 ವರ್ಷ: ಮೊದಲ ರೈಲು ಸಂಚಾರ ಎಲ್ಲಿಂದ ಎಲ್ಲಿಗೆ? ಪೋಸ್ಟ್ ಹಂಚಿಕೊಂಡ ರೈಲ್ವೆ
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- Automobiles Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ತಿಂಗಳಲ್ಲಿ ವೀರಪ್ಪನ್ 'ಅಟ್ಟಹಾಸ' ಶುರು
ಅಟ್ಟಹಾಸ ಚಿತ್ರವು ತಮಿಳಿನಲ್ಲಿ 'ವನ ಯುದ್ಧಂ' ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆಯಾಗುವುದಕ್ಕೂ ಮೊದಲು ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀಯ ಒಪ್ಪಿಗೆ ಪಡೆಯಬೇಕು ಎಂದು ನ್ಯಾಯಾಲಯ ಆದೇಶಿಸಿತ್ತು. ಅದರಂತೆ ಇತ್ತೀಚಿಗೆ ತಮ್ಮ ಐವರು ವಕೀಲರು, ಹಾಗೂ ನಿಯೋಜಿಸಲಾಗಿದ್ದ ಸರ್ಕಾರಿ ವಕೀಲರೊಂದಿಗೆ ಮುತ್ತುಲಕ್ಷ್ಮೀ ಚೆನ್ನೈಯ ದೇವಿ ಶ್ರೀದೇವಿ ಚಿತ್ರಮಂದಿರದಲ್ಲಿನ ನಡೆದ ವಿಶೇಷ ಪ್ರದರ್ಶನದಲ್ಲಿ ಚಿತ್ರ ವೀಕ್ಷಿಸಿದ್ದಾರೆ.
ಈಗಾಗಲೇ ನ್ಯಾಯಾಲಯವು 'ಮುತ್ತುಲಕ್ಷ್ಮಿ ಚಿತ್ರವನ್ನು ನೋಡಿ, ಆಕ್ಷೇಪಾರ್ಹ ಏನಾದರೂ ಇದ್ದರೆ 'ದೃಶ್ಯ-ವಿವರ'ಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅಲ್ಲಿ ನ್ಯಾಯಾಧೀಶರು, ಚಿತ್ರದಲ್ಲಿರುವ ಯಾವುದೇ ಅಂಶ ಮುತ್ತುಲಕ್ಷ್ಮಿ ಮತ್ತು ಅವರ ಮಕ್ಕಳ ವೈಯಕ್ತಿಕ ಜೀವನಕ್ಕೆ ತೊಂದರೆಯಾಗುವಂತಿದ್ದರೆ ಅದನ್ನು ಪರಿಶೀಲಿಸಿ ತೀರ್ಪು ನೀಡಲಾಗುತ್ತದೆ" ಎಂದಿದ್ದರು. ಅದರಂತೆ ಚಿತ್ರ ನೋಡಿದ್ದಾರೆ ಮತ್ತುಲಕ್ಷ್ಮೀ.
ಕನ್ನಡ ಮತ್ತು ತಮಿಳು ಎರಡೂ ಭಾಷೆಗಳಲ್ಲಿ ಸಿದ್ಧವಾಗಿರುವ ಚಿತ್ರವನ್ನು ನೋಡಿರುವ ಮತ್ತುಲಕ್ಷ್ಮೀ, ಚಿತ್ರದಲ್ಲಿನ ಕೆಲವು ದೃಶ್ಯಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದಿದ್ದಾರೆ. ಈ ಹಿಂದೆ ಒಂದೆರಡು ಬಾರಿ ಆ ಚಿತ್ರವನ್ನು ನೋಡಲು ಪ್ರದರ್ಶನ ಏರ್ಪಡಿಸಲಾಗಿತ್ತಾದರೂ, ಅದಕ್ಕೆ ಮುತ್ತುಲಕ್ಷ್ಮಿ ಹಾಜರಾಗಿರಲಿಲ್ಲ. ಅಂತೂ ಕೊನೆಗೆ ಮತ್ತುಲಕ್ಷ್ಮೀ ಚಿತ್ರ ನೋಡಿದ್ದಾರೆ, ತಮ್ಮ ನಿಲುವು ತಿಳಿಸಿದ್ದಾರೆ. ಮುಂದಿನ ಪುಟ ನೋಡಿ...