Don't Miss!
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- News Bird Flu: ಮೊಟ್ಟೆ-ಕೋಳಿ ತಿನ್ನುವವರೇ ಹುಷಾರ್!- ಹೆಚ್ಚಾಗಿದೆ ಹಕ್ಕಿಜ್ವರ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಟ್ವಿಟ್ಟರ್ ಅಕೌಂಟ್ ಹ್ಯಾಕ್ ಮಾಡಲು ಪ್ರಯತ್ನ
Recommended Video
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪೈಲ್ವಾನ್ ವಿರುದ್ಧ ಸಮರ ಸಾರಿದ್ದಾರೆ. ಈ ಬಗ್ಗೆ ಸಾಕಷ್ಟು ಟ್ವೀಟ್ ಗಳನ್ನು ಮಾಡುತ್ತಿರುವ ಕಿಚ್ಚ ಪೈರಸಿ ಮಾಡಿದ ಕಿರಾತಕರನ್ನು ಹುಡುಕುವ ವರೆಗೂ ಬಿಡಲ್ಲ ಎಂದು ಪಣತೊಟ್ಟಿದ್ದಾರೆ. ಈಗಾಗಲೆ ಪೊಲೀಸರು ಪೈರಸಿ ಮಾಡಿದ ಒಬ್ಬನನ್ನು ಬಂಧಿಸಿದ್ದಾರೆ.
ಕುತೂಹಲ ಮೂಡಿಸಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮತ್ತು ಸುದೀಪ್ ಭೇಟಿ
ಇತ್ತೀಚಿಗೆ ಸುದೀಪ್ ಮಾಡಿರುವ ಕೆಲವು ಟ್ವೀಟ್ ಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿವೆ. ಇದರ ನಡುವೆ ಈಗ ಸುದೀಪ್ ಅಕೌಂಟ್ ಹ್ಯಾಕ್ ಮಾಡುವ ಪ್ರಯತ್ನ ನಡೆಯುತ್ತಿದೆ ಎನ್ನುವ ಶಾಕಿಂಗ್ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸುದೀಪ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಅಭಿಮಾನಿಗಳ ಪೋಸ್ಟ್
"ಕಿಚ್ಚ ಸುದೀಪಣ್ಣ ಟ್ವೀಟರ್ ಅಕೌಂಟ್ ಹ್ಯಾಕ್ ಮಾಡಲು ಪ್ರಯತ್ನ. ಇಂದು ಮಧ್ಯಾಹ್ನ ಮೂರು ಗಂಟೆಯಿಂದ ಸುಮಾರು ಏಳು ಸಲ ಸುದೀಪಣ್ಣನ ಟ್ವೀಟರ್ ಅಕೌಂಟ್ ಹ್ಯಾಕ್ ಮಾಡಲು ಪ್ರಯತ್ನ ನಡೆದಿದೆ. Password Reset Request ದೀಪಣ್ಣನ mail ಗೆ ಬಂದಿವೆ. ಸೈಬರ್ ಕ್ರೈಮ್ ಅವರು ಕೂಡಲೇ ಈ ಬಗ್ಗೆ ಗಮನಹರಿಸಲು ಕೋರುತ್ತೇವೆ" ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ ಮಾಡಿದ್ದಾರೆ. ಆದ್ರೆ ಈ ಬಗ್ಗೆ ಸುದೀಪ್ ಅಧಿಕೃತವಾಗಿ ಎಲ್ಲಿಯೊ ಹೇಳಿಕೊಂಡಿಲ್ಲ.
ಅಕ್ಕ-ತಮ್ಮನಂತಿದ್ದ ಸುದೀಪ್ ಮತ್ತು ಸುಮಲತಾ ಈಗ ದೂರ ದೂರ?
ಪೈಲ್ವಾನ್ ಪೈರಸಿ
ಪೈಲ್ವಾನ್ ಸಿನಿಮಾ ರಿಲೀಸ್ ಆದ ನಂತರ ಸುದೀಪ್ ಮತ್ತು ಟೀಂ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದೆ. ಪೈರಸಿ ಮಾಡಿ ಸಿನಿಮಾ ಲಿಂಕ್ ವೈರಲ್ ಮಾಡಿದವರನ್ನು ಸುಮ್ಮನೆ ಬಿಡಬಾರದು ಎಂದು ಪೈರಸಿ ಕಿಡಿಗೇಡಿಗಳ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ ಸುದೀಪ್. ಅಲ್ಲದೆ ಇತ್ತೀಚಿಗೆ ಈ ವಿಚಾರವಾಗಿ ಸಾಕಷ್ಟು ಟ್ವೀಟ್ ಗಳನ್ನು ಮಾಡುತ್ತಿದ್ದಾರೆ. ಇದರ ನಡುವೆ ಫ್ಯಾನ್ಸ್ ವಾರ್ ಕೂಡ ಜಾಸ್ತಿ ಆಗಿದೆ. ಈ ಸಮಯದಲ್ಲಿ ಸುದೀಪ್ ಅಕೌಂಟ್ ಹ್ಯಾಕ್ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದರೆ ಉದ್ದೇಶ ಪೂರ್ವಕವಾಗಿಯೆ ಮಾಡಲಾಗುತ್ತಿದೆ ಎನ್ನುವುದು ಅಭಿಮಾನಿಗಳ ಮಾತು.
ಸುದೀಪ್ ಭೇಟಿ ಮಾಡಿದ ಭಾಸ್ಕರ್ ರಾವ್
ಪೈರಸಿ ವಿಚಾರವಾಗಿ ಮತ್ತು ಅನಾವಶ್ಯವಾಗಿ ಟ್ರೋಲ್ ಮಾಡುವವರ ವಿರುದ್ಧ ದೂರು ನೀಡಲು ಸುದೀಪ್ ಸೈಬರ್ ಕ್ರೈಮ್ ಅಧಿಕಾರಿಗಳ ಬಳಿ ಹೋಗಿದ್ದರು. ಆಲ್ಲದೆ ಮೊನ್ನೆ ಮೊನ್ನೆಯಷ್ಟೆ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸುದೀಪ್ ಮನೆಗೆ ಭೇಟಿ ನೀಡಿದ್ದರು, ಇದು ಕೂಡ ಕುತೂಹಲ ಮೂಡಿಸಿತ್ತು.
ದಕ್ಷಿಣ ಆಫ್ರಿಕಾ ಕ್ರಿಕೆಟ್ ಟೀಂ ಜೊತೆ ದುಬೈಗೆ ತೆರಳಿದ ಕಿಚ್ಚ ಸುದೀಪ್
ಕೋಟಿಗೊಬ್ಬ-3 ಶೂಟಿಂಗ್ ನಲ್ಲಿ ಸುದೀಪ್
ಸುದೀಪ್ ಸದ್ಯ ಬೆಂಗಳೂರಿನಲ್ಲಿ ಇಲ್ಲ. ಕೋಟಿಗೊಬ್ಬ-3 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆಂದು ಕಿಚ್ಚ ಪೋಲಾಂಡ್ ಗೆ ಪ್ರಯಾಣ ಬೆಳೆಸಿದ್ದಾರೆ. ಚಿತ್ರದ ಚೇಸಿಂಗ್ ದೃಶ್ಯವನ್ನು ಅಲ್ಲಿ ಚಿತ್ರೀಕರಿಸಲು ಪ್ಲಾನ್ ಮಾಡಿದೆ ಚಿತ್ರತಂಡ. ಈ ಬಗ್ಗೆ ಸುದೀಪ್ ಅವರೆ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.