Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪೈಲ್ವಾನ್', 'ರಾಬರ್ಟ್' ಬಳಿಕ ಬರ್ತಿದ್ದಾನೆ 'ಶ್ರೀಮನ್ನಾರಾಯಣ'
ಇಂದು (ಮಂಗಳವಾರ) 'ಪೈಲ್ವಾನ್' ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ನಾಳೆ (ಬುದವಾರ) 'ರಾಬರ್ಟ್' ಪೋಸ್ಟರ್ ಹೊರ ಬರಲಿದೆ. ಈ ಎರಡು ಚಿತ್ರಗಳ ನಂತರ 'ಅವನೇ ಶ್ರೀಮನ್ನಾರಾಯಣ' ದರ್ಶನ ನೀಡಲಿದ್ದಾನೆ.
ನಟ ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೀಗ ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಗುರುವಾರ ಸಿನಿಮಾದ ಎರಡನೇ ಟೀಸರ್ ರಿಲೀಸ್ ಆಗಲಿದೆ. ಅಂದು ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ ಸಹ ಇದೆ.
'ಅವನೇ ಶ್ರೀಮನ್ನಾರಾಯಣ'ನಿಗೆ ಫಿದಾ ಆದ ಮೋಹಕ ತಾರೆ
ಈಗಾಗಲೇ, ಚಿತ್ರದ ಮೊದಲ ಟೀಸರ್ ದೊಡ್ಡ ಹಿಟ್ ಆಗಿದೆ. ಆ ಟೀಸರ್ ಬಂದು ಅನೇಕ ತಿಂಗಳುಗಳು ಕಳೆದಿದ್ದು, ಮತ್ತೆ ಅಭಿಮಾನಿಗಳ ಮುಂದೆ ರಕ್ಷಿತ್ ಬರುತ್ತಿದ್ದಾರೆ. ಮೊದಲ ಬಾರಿಗೆ ಇಲ್ಲಿ ಪೊಲೀಸ್ ಪಾತ್ರದಲ್ಲಿ ಅವರು ನಟಿಸಿದ್ದಾರೆ.
ಇದೊಂದು ಪಕ್ಕಾ ಮನರಂಜನೆ ಸಿನಿಮಾವಾಗಿದೆ. ಶಾನ್ವಿ ಶ್ರೀವತ್ಸವ್ ಸಿನಿಮಾದ ನಾಯಕಿಯಾಗಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಹೆಚ್ ಕೆ ಪ್ರಕಾಶ್ ಗೌಡ ಬಂಡವಾಳ ಹಾಕಿದ್ದಾರೆ.
'ಅವನೇ ಶ್ರೀಮನ್ನಾರಾಯಣ' ಚಿತ್ರವನ್ನು ಸಚಿನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.