Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದು ಮಿಲಿಯನ್ ಗಡಿ ದಾಟಿದ 'ಅವನೇ ಶ್ರೀಮನ್ನಾರಾಯಣ' ಟೀಸರ್
'ಅವನೇ ಶ್ರೀಮನ್ನಾರಾಯಣ' ಸಿನಿಮಾದ ಟೀಸರ್ ಗೆ ದೊಡ್ಡ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾದ ಟೀಸರ್ ಒಂದು ಮಿಲಿಯನ್ ಹಿಟ್ಸ್ ಪಡೆದುಕೊಂಡಿದೆ.
ಗುರುವಾರ ರಾತ್ರಿ ಬಿಡುಗಡೆಯಾದ 'ಅವನೇ ಶ್ರೀಮನ್ನಾರಾಯಣ' ಟೀಸರ್ ಗೆ ಸೋಷಿಯಲ್ ಮೀಡಿಯಾದಲ್ಲಿ ಪಾಸಿಟಿವ್ ಆದ ಪ್ರತಿಕ್ರಿಯೆ ಸಿಕ್ಕಿತ್ತು. ಹೀಗಾಗಿ ಟೀಸರ್ ಇನ್ನಷ್ಟು ಜನರಿಗೆ ತಲುಪಿದೆ. ಸದ್ಯ, ಈ ಟೀಸರ್ ಒಂದು ಮಿಲಿಯನ್ ಹಿಟ್ಸ್ ಪಡೆದುಕೊಂಡು ಮುನ್ನುಗುತ್ತಿದೆ. ಅಲ್ಲದೆ ನಿನ್ನೆ (ಶುಕ್ರವಾರ) ಯೂಟ್ಯೂಬ್ ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ನಲ್ಲಿ ಇತ್ತು.
ಟ್ವಿಟ್ಟರ್ ಗೆ ಬಂದ ರಕ್ಷಿತ್ ಶೆಟ್ಟಿಗೆ ಸಲಹೆ ನೀಡಿದ ಜಗ್ಗೇಶ್
ಟೀಸರ್ ಕ್ವಾಲಿಟಿ ಸಿನಿಮಾದ ಮೇಲಿನ ನಂಬಿಕೆ ಹೆಚ್ಚು ಮಾಡಿದೆ. ಕನ್ನಡದ ಮತ್ತೊಂದು ಮೆಗಾ ಸಿನಿಮಾ ಆಗುವ ಎಲ್ಲ ಲಕ್ಷಣಗಳು ಈ ಸಿನಿಮಾದ ಟೀಸರ್ ನಲ್ಲಿ ಕಾಣುತ್ತಿವೆ. ಟೀಸರ್ ನೋಡಿದ ಅನೇಕರು ಇದು ನೆಕ್ಸ್ಟ್ ಲೆವೆಲ್ ಸಿನಿಮಾ ಎಂದು ಹೇಳುತ್ತಿದ್ದಾರೆ.
ಕರಮ್ ಚಾವ್ಲಾ ಕ್ಯಾಮರಾ ವರ್ಕ್ ಹಾಗೂ ಅಜನೀಶ್ ಲೋಕನಾಥ್ ಸಂಗೀತಕ್ಕೆ ವಿಶೇಷ ಮೆಚ್ಚುಗೆ ಸಿಗುತ್ತಿದೆ. ಮೊದಲ ಬಾರಿಗೆ ಸಿಂಪಲ್ ಸ್ಟಾರ್ ಪೊಲೀಸ್ ಆಗಿದ್ದಾರೆ. ಅವರ ಪಾತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಟೀಸರ್ ಮೂಲಕ ಆ ಪಾತ್ರವನ್ನು ಪರಿಚಯ ಮಾಡಿದ್ದಾರೆ.
ಟ್ವಿಟ್ಟರ್ ಗೆ ವಾಪಸ್ ಬಂದ ಮೊದಲ ದಿನವೇ ಟ್ರೋಲ್ ಆದ ರಕ್ಷಿತ್ ಶೆಟ್ಟಿ
''ರಾಕ್ಷಸನ ಎದುರಿಸಬೇಕಾದರೆ, ಮೊದಲು ನಮ್ಮೊಳಗಿನ ರಾಕ್ಷಸನಿಂದ ಮುಕ್ತವಾಗ ಬೇಕು.'' ಎನ್ನುವ ಡೈಲಾಗ್ ರೋಮಾಂಚಕವಾಗಿವೆ. ಸಚಿನ್ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಕಿರಿಕ್ ಪಾರ್ಟಿ ಬಳಿಕ ಮತ್ತೆ ರಕ್ಷಿತ್ ಶೆಟ್ಟಿ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ಹೆಚ್ ಕೆ ಪ್ರಕಾಶ್ ಗೌಡ ಬಂಡವಾಳ ಹಾಕಿದ್ದಾರೆ. ಶಾನ್ವಿ ಶ್ರೀವತ್ಸವ್ ಚಿತ್ರದ ನಾಯಕಿ. ಇನ್ನು ಟೀಸರ್ ನಲ್ಲಿ ಸಿನಿಮಾ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.ಎರಡು ವರ್ಷದ ಬಳಿಕ ರಕ್ಷಿತ್ ಸಿನಿಮಾ ಬಿಡುಗಡೆಯಾಗುತ್ತಿದೆ.