Don't Miss!
- News ‘ದೇವೇಗೌಡ್ರು ಕೋಲಾರದಲ್ಲಿ ಕುಟುಂಬದವರಿಗೆ ಬಿಟ್ಟು ಕಾರ್ಯಕರ್ತರಿಗೆ ಟಿಕೆಟ್ ಯಾಕೆ ಕೊಟ್ರು ಗೊತ್ತಾ?’
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿವಿಡಿ ರೂಪದಲ್ಲಿ ಅವಾರ್ಡ್ ವಿನ್ನಿಂಗ್ ಕನ್ನಡ ಚಿತ್ರಗಳು
ಪ್ರಶಸ್ತಿ ಪುರಸ್ಕೃತ ಸಿನಿಮಾಗಳು ಸಾಮಾನ್ಯ ಪ್ರೇಕ್ಷಕ ವರ್ಗವನ್ನು ತಲುಪುತ್ತಿಲ್ಲ. ಚಿತ್ರಮಂದಿರದಲ್ಲಿ ಯಾಕೆ ಬಿಡುಗಡೆಯಾಗಲ್ಲ. ಆ ರೀತಿಯ ಚಿತ್ರಗಳನ್ನು ನೋಡುವುದು ಬಲು ದುರ್ಲಭ ಎಂಬ ಮಾತುಗಳು ಹಾಗೂ ಈ ರೀತಿಯ ಸಿನಿಮಾಗಳ ಇತಿಮಿತಿಗಳ ನಡುವೆ ಟೋಟಲ್ ಕನ್ನಡ ಸಂಸ್ಥೆ ಒಂದಷ್ಟು ಉತ್ತಮ ಚಿತ್ರಗಳನ್ನು ಡಿವಿಡಿ ರೂಪದಲ್ಲಿ ಹೊರತರುತ್ತಿದೆ.
ಈ ಬಾರಿ ನಾಲ್ಕು ಕನ್ನಡ ಸಿನಿಮಾಗಳನ್ನು ಡಿವಿಡಿ ರೂಪದಲ್ಲಿ ಬಿಡುಗಡೆ ಮಾಡುತ್ತಿದೆ. ಪಿ ಶೇಷಾದ್ರಿ ನಿರ್ದೇಶನದ 'ಬೆಟ್ಟದ ಜೀವ' ಹಾಗೂ 'ಭಾರತ್ ಸ್ಟೋರ್ಸ್', ಗಿರೀಶ್ ಕಾಸರವಳ್ಳಿ ಅವರ 'ಕೂರ್ಮಾವತಾರ', ಕೆಎನ್ ಟಿ ಶಾಸ್ತ್ರಿ ಅವರ 'ಸರಸಮ್ಮನ ಸಮಾಧಿ' ಚಿತ್ರಗಳು ಡಿವಿಡಿ ರೂಪದಲ್ಲಿ ಲಭ್ಯ. [ಪಿ ಶೇಷಾದ್ರಿ ಚಿತ್ರದ ವಿರುದ್ಧ ಕಥೆ ಕದ್ದ ಆರೋಪ]
ಡಿವಿಡಿ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ವಾರ್ತಾ ಇಲಾಖೆ ನಿರ್ದೇಶಕ ಎನ್ ಆರ್ ವಿಶುಕುಮಾರ್ ಆಗಮಿಸಲಿದ್ದಾರೆ. ಕಾರ್ಯಕ್ರಮವನ್ನು ಹರಿಹರಪುರ ಮಂಜುನಾಥ್ ನಿರೂಪಿಸಲಿದ್ದಾರೆ. ಸ್ಥಳ: ಬಿಪಿ ವಾಡಿಯಾ ಸಭಾಂಗಣ, ಬಿಪಿ ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು-04. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 99862 22402 (ಒನ್ಇಂಡಿಯಾ ಕನ್ನಡ)